RCB vs KKR: ಮೊದಲ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಆಡದಿರಲು ಇದೇ ಕಾರಣ
ಐಪಿಎಲ್ 2025ರ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಆರ್ ಸಿಬಿ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಈ ಬಾರಿ ಆವೃತ್ತಿಯಲ್ಲಿ ಮೊದಲ ಪಂದ್ಯ ದೇವರಿಗೆ ಬಿಡದೆ ತಾನೇ ಗೆದ್ದುಕೊಂಡಿದೆ. ಮೊದಲ 10 ಓವರ್ ಗಳಲ್ಲಿ ಬೌಲಿಂಗ್ ವಿಫಲವಾದರೂ ಬಳಿಕ ವಾಪಸಾತಿ ಮಾಡಿದ್ದು ಮಾತ್ರ ಅಭಿಮಾನಿಗಳಿಗೂ ಅಚ್ಚರಿ ಮೂಡಿಸಿತು. ತಂಡದ ಪ್ರಮುಖ ಬೌಲರ್ ಭುವನೇಶ್ವರ್ ಕುಮಾರ್ ಪ್ಲೇಯಿಂಗ್ ಇಲೆವೆನ್ನಲ್ಲಿ ಇಲ್ಲದೇ ಇರುವುದು ಆರಂಭದಲ್ಲಿ ಸಾಕಷ್ಟು ಹಿನ್ನಡೆಗೆ ಕಾರಣವಾಯಿತು.
ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಅವರನ್ನು ಕೈಬಿಟ್ಟು ರಸಿಕ್ ಸಲಾಮ್ ದಾರ್ ಅವರನ್ನು ಆಡಿಸಲಾಯಿತು. ಮೊದಲ ಓವರ್ ನಲ್ಲಿ ಆರ್ ಸಿಬಿ ವಿಕೆಟ್ ಪಡೆದರು, ಬಳಿಕ ರಹಾನೆ ಮತ್ತು ಸುನಿಲ್ ನರೈನ್ ಅಬ್ಬರಿಸಿದರು. ಈ ಸಂದರ್ಭದಲ್ಲಿ ಭುವನೇಶ್ವರ್ ಕುಮಾರ್ ಇರಬೇಕಿತ್ತು ಎಂದು ಆರ್ ಸಿಬಿ ಅಭಿಮಾನಿಗಳು ಅಂದುಕೊಂಡರು.

ಭುವನೇಶ್ವರ್ ಕುಮಾರ್ ಯಾಕೆ ಆಡಲಿಲ್ಲ?
ಮೂಲಗಳ ಪ್ರಕಾರ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಆಡದೇ ಇರಲಿ ಗಾಯದ ಸಮಸ್ಯೆ ಕಾರಣವಾಗಿದೆ. ಸಣ್ಣ ಗಾಯದ ಸಮಸ್ಯೆಯಿಂದ ಭುವನೇಶ್ವರ್ ಕುಮಾರ್ ಬಳಲುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಅವರಿಗೆ ಮೊದಲ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದೆ. ಜ್ವರ ಕೂಡ ಇತ್ತು ಎಂದು ಮೂಲಗಳು ತಿಳಿಸಿವೆ, ಸಿಎಸ್ಕೆ ವಿರುದ್ಧದ ಮುಂದಿನ ಪಂದ್ಯದ ವೇಳೆಗೆ ಅವರು ಫಿಟ್ ಆಗಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿದೆ.
ಕೆಕೆಆರ್ ವಿರುದ್ಧ ಭರ್ಜರಿ ಗೆಲುವು
ಭುವನೇಶ್ವರ್ ಕುಮಾರ್ ಅನುಪಸ್ಥಿತಿ ನಡುವೆಯೂ ಆರ್ ಸಿಬಿ ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಕೃನಾಲ್ ಪಾಂಡ್ಯ, ಜೋಶ್ ಹೇಜಲ್ವುಡ್ ಒಟ್ಟಾರೆ 5 ವಿಕೆಟ್ ಪಡೆಯುವ ಜೊತೆಗೆ ಕೆಕೆಆರ್ ರನ್ ಗಳಿಕೆಗೆ ಕಡಿವಾಣ ಹಾಕಿದರು. ಯಶ್ ದಯಾಳ್, ಸುಯಾಶ್ ಶರ್ಮಾ, ರಸಿಕ್ ದಾರ್ ಕೂಡ ಒಂದೊಂದು ವಿಕೆಟ್ ಪಡೆದುಕೊಂಡರು. ಕೆಕೆಆರ್ 20 ಒವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಕೆಲಹಾಕಿತು.
175 ರನ್ಗಳ ಗುರಿಯನ್ನು ಬೆನ್ನಟ್ಟಿದ ಆರ್ ಸಿಬಿ 16.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 177 ರನ್ ಗಳಿಸುವ ಮೂಲಕ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅಮೋಘ ಅರ್ಧಶತಕ ಸಿಡಿಸುವ ಮೂಲಕ ಆರ್ ಸಿಬಿ ಗೆಲುವನ್ನು ಸುಲಭವಾಗಿಸಿದರು.
ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಸಿಎಸ್ಕೆ ತಂಡವನ್ನು ಎದುರಿಸಲಿದೆ. ಮಾರ್ಚ್ 28ರಂದು ಶುಕ್ರವಾರ ಚೆನ್ನೈನಲ್ಲಿ ಈ ಪಂದ್ಯ ನಡೆಯಲಿದ್ದು, ಆರ್ ಸಿಬಿ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
-
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications