Shreyanka Patil: ಆರ್ಸಿಬಿ ಗೆದ್ದ ಬಳಿಕ ಕಾರಿನಲ್ಲಿ ಅಡಗಿಕೊಂಡ ಶ್ರೇಯಾಂಕಾ ಪಾಟೀಲ್!
ಆರ್ಸಿಬಿ ತಂಡಕ್ಕೆ ಮೊದಲ ಕಪ್ ಗೆದ್ದುಕೊಟ್ಟದ್ದು ಮಹಿಳಾ ತಂಡ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಒಂದ್ ರನ್ನಿಂದ ಸೋತ ಬಳಿಕ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟ ಕೊಟ್ಟ ಸ್ಮೃತಿ ಮಂಧಾನ ಪಡೆ, ಕಪ್ ಎತ್ತಿಹಿಡಿಯಿತು. ಈ ಸರಿ ಕಪ್ ನಮ್ದೇ ಎನ್ನುವುದನ್ನು ಬದಲಿಸಿ ಈ ಸಲ ಕಪ್ ನಮ್ದು ಎಂದು ಹೇಳಿದ್ದರು.
ಸದ್ಯ ನಡೆಯುತ್ತಿರುವ ಐಪಿಎಲ್ನಲ್ಲಿ ಆರ್ಸಿಬಿ ತಂಡ ಕೂಡ ಬೂದಿಯಿಂದ ಎದ್ದು ಬಂದಿದೆ. ಟೂರ್ನಿಯಿಂದಲೇ ಹೊರಹೋಗುತ್ತಾರೆ ಎನ್ನುವ ಹಂತದಿಂದ ಸತತವಾಗಿ ಆರು ಪಂದ್ಯ ಗೆದ್ದು ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿಎಸ್ಕೆ ವಿರುದ್ಧದ ಪಂದ್ಯವನ್ನು ನೋಡಲು ಆರ್ಸಿಬಿ ತಂಡದ ಮಹಾಲಕ್ಷ್ಮಿಯರು ಹಾಜರಿದ್ದರು.

ಸ್ಮೃತಿ ಮಂಧಾನ, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ ಫಾಫ್ ಡುಪ್ಲೆಸಿಸ್ ಪಡೆಗೆ ಬೆಂಬಲ ಕೊಡಲು ಬಂದಿದ್ದರು. ಅಭಿಮಾನಿಗಳ ನಿರೀಕ್ಷೆ ಹುಸಿಗೊಳಿಸದ ಆರ್ಸಿಬಿ ಸಿಎಸ್ಕೆ ವಿರುದ್ಧ 27 ರನ್ಗಳಿಂದ ಗೆದ್ದು ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿತು.
ಪಂದ್ಯದ ಬಳಿಕ ಶ್ರೇಯಾಂಕಾ ಪಾಟೀಲ್ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾರನ್ನು ಭೇಟಿ ಮಾಡಿ ಫೋಟೊ ಹಂಚಿಕೊಂಡು ಖುಷಿಪಟ್ಟರು. ಆದರೆ ಮೈದಾನದಿಂದ ಹೊರಹೋಗುವಾಗ ಅವರು ಕಾರಿನಲ್ಲಿ ಗುಬ್ಬಚ್ಚಿಯಂತೆ ಬಚ್ಚಿಕೊಂಡರು.
Shreyanka Patil ❤️😂😂😂#ನಮ್ಮRCB pic.twitter.com/StDLWKmglG
— ಹರ್ಷ (@grharsh) May 19, 2024
ಅಭಿಮಾನಿಗಳಿಗೆ ಹೆದರಿದ ಶ್ರೇಯಾಂಕಾ?
ಸಿಎಸ್ಕೆ ವಿರುದ್ಧ ಗೆಲ್ಲುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ರಸ್ತೆಗಳಲ್ಲಿ ಜಮಾಯಿಸಿದ ಅಭಿಮಾನಿಗಳು ಜೈಕಾರ ಕೂಗುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದರು.
ಅಭಿಮಾನಿಗಳು ರಸ್ತೆಯಲ್ಲಿ ಸಂಭ್ರಮಾಚರಣೆ ಮಾಡುವುದನ್ನು ನೋಡಿದ ಶ್ರೇಯಾಂಕಾ ಪಾಟೀಲ್ ಕಾರಿನ ಹಿಂಬದಿಯ ಸೀಟಿನಲ್ಲಿ ಅಡಗಿಕೊಂಡರು. ಸ್ಮೃತಿ ಮಂಧಾನ ಕೂಡ ತಮ್ಮ ಗುರುತು ಮರೆಮಾಡಲು ಮಾಸ್ಕ್ ಧರಿಸಿದ್ದರು.
ಅವರನ್ನು ಕಾರಿನಲ್ಲಿ ಕೂತಿರುವುದನ್ನು ನೋಡಿದ್ದರೆ ಅಭಿಮಾನಿಗಳು ನೋಡಲು ಮುಗಿಬೀಳಬಹುದು ಎನ್ನುವ ಭಯದಲ್ಲಿ ಹಿಂದಿನ ಸೀಟಿನಲ್ಲಿ ಮಲಗಿಕೊಂಡಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಶ್ರೇಯಾಂಕಾ ಪಾಟೀಲ್ ಅಡಗಿ ಕೂತಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
-
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications