KS Bharat: ಇಂಗ್ಲೆಂಡ್ ಲಯನ್ಸ್ ವಿರುದ್ಧ ಶತಕ ಸಿಡಿಸಿ 'ರಾಮ'ನಿಗೆ ಅರ್ಪಿಸಿದ 'ಭರತ'
ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಹಲವು ಮಂದಿ ತಮ್ಮ ಭಕ್ತಿಯನ್ನು ಹಲವು ವಿಧದಲ್ಲಿ ತೋರಿಸುತ್ತಿದ್ದಾರೆ. ರಾಮಜಪ ಕ್ರಿಕೆಟ್ ಪಂದ್ಯಕ್ಕೂ ವ್ಯಾಪಿಸಿದ್ದು, ಭಾರತದ ಬ್ಯಾಟರ್ ಶತಕ ಗಳಿಸಿ ಅದನ್ನು ರಾಮನಿಗೆ ಅರ್ಪಿಸಿದ್ದಾರೆ.
ಇಂಗ್ಲೆಂಡ್ ಲಯನ್ಸ್ ವಿರುದ್ಧದ ನಾಲ್ಕು ದಿನಗಳ ಅಭ್ಯಾಸ ಪಂದ್ಯವನ್ನಾಡಿದ ಭಾರತ ಎ ತಂಡ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಅಜೇಯ ಶತಕ ಗಳಿಸುವ ಮೂಲಕ ತಂಡಕ್ಕೆ ನೆರವಾದರು.

ಕೆಎಸ್ ಭರತ್ ಅವರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಶತಕ ಸಿಡಿಸಿದ ಬಳಿಕ ಬಿಲ್ಲು ಮತ್ತು ಬಾಣದ ಸನ್ನೆ ಮಾಡಿದ್ದಾರೆ. ಭರತ್ ಅವರ ಸಂಭ್ರಮಾಚರಣೆಯ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ಭರತ್ ಬಿಲ್ಲು ಮತ್ತು ಬಾಣದ ಸನ್ನೆ ಮಾಡುವುದನ್ನು ಕಾಣಬಹುದು. ಕೆಎಸ್ ಭರತ್ ರಾಮಭಕ್ತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ಇರುವ ಕಾರಣ ಭರತ್ ಅವರ ಸಂಭ್ರಮಾಚರಣೆ ಪ್ರಾಮುಖ್ಯತೆ ಪಡೆದುಕೊಂಡಿದೆ.
ಡ್ರಾನಲ್ಲಿ ಅಂತ್ಯವಾದ ಪಂದ್ಯ
ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯವನ್ನು ಭಾರತ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 8 ವಿಕೆಟ್ ಕಳೆದುಕೊಂಡು 553 ರನ್ ಗಳಿಸಿ ಡ್ರಾ ಮಾಡಿಕೊಂಡಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಎ ತಂಡ 227 ರನ್ಗಳಿಗೆ ಆಲೌಟ್ ಆಗಿತ್ತು. ರಜತ್ ಪಾಟಿದಾರ್ 158 ಎಸೆತಗಳಲ್ಲಿ 151 ರನ್ ಗಳಿಸುವ ಮೂಲಕ ಭಾರತ ಎ ತಂಡಕ್ಕೆ ನೆರವಾಗಿದ್ದರು.
ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 6 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ ಹೋರಾಟ ನೀಡಿದ ಭಾರತ ಎ ತಂಡ, ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು.
ಸಾಯಿ ಸುದರ್ಶನ್ 97 ರನ್ ಗಳಿಸಿದರೆ, ಸರ್ಫರಾಜ್ ಖಾನ್ 55 ರನ್ ಗಳಿಸಿದರು. ಪ್ರದೋಷ್ ರಂಜನ್ ಪೌಲ್ 43 ರನ್ ಗಳಿಸಿದರು. ಎಂಜೆ ಅಜೇಯ 89 ರನ್ ಗಳಿಸಿದರೆ, ಕೆಎಸ್ ಭರತ್ ಅಜೇಯ 116 ರನ್ ಗಳಿಸುವ ಮೂಲಕ ಭಾರತ ಎ ತಂಡದ ಸೋಲನ್ನು ತಪ್ಪಿಸಿದರು.
ಇಂಗ್ಲೆಂಡ್ ಭಾರತದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು. ಜನವರಿ 25ರಂದು ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications