IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ನೀರಿನ ಕೊರತೆ ಭೀತಿ! ಆರ್ಸಿಬಿ ಪಂದ್ಯಗಳ ಸ್ಥಳಾಂತರ?
ಬೆಂಗಳೂರು ಪ್ರಸ್ತುತ ನೀರಿನ ಸಮಸ್ಯೆಯಿಂದ ಬಳಲುತ್ತಿದೆ. ಟ್ಯಾಂಕರ್ ನೀರಿನ ಬೆಲೆ ಗಗನಕ್ಕೇರಿದೆ. ನೀರಿನ ಸಮಸ್ಯೆ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳ ಮೇಲೂ ಪರಿಣಾಮ ಬೀರಿದೆ. ಐಪಿಎಲ್ 2024ರ ಬೆಂಗಳೂರಿನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಆರ್ ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ.
ನಗರದ ನೀರಿನ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಭೆ ಕರೆದಿದೆ. ಐಪಿಎಲ್ ಪಂದ್ಯಕ್ಕಾಗಿ ಪಿಚ್ ಸಿದ್ಧಪಡಿಸಲು ಅಪಾರ ಪ್ರಮಾಣದ ನೀರು ಬೇಕಾಗುತ್ತದೆ. ಇಂತಹ ಭೀಕರ ನೀರಿನ ಸಮಸ್ಯೆ ನಡುವೆ ಎರಡು ವಾರಗಳಲ್ಲಿ ಮೂರು ಪಂದ್ಯಗಳನ್ನು ಆಯೋಜಿಸಲು ನಗರವು ಹೇಗೆ ಸಜ್ಜಾಗುತ್ತದೆ ಎನ್ನುವುದನ್ನು ನೋಡಬೇಕಿದೆ.

ಕೆಎಸ್ಸಿಎ ಸದಸ್ಯರೊಬ್ಬರು, ಕೆಎಸ್ಸಿಎ ಸಭೆಯ ನಂತರ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದು. ಸಭೆಯ ನಂತರ ಮಂಡಳಿಯು ಹೇಳಿಕೆಯನ್ನು ನೀಡಲಿದೆ ಎಂದು ಮೂಲಗಳು ಹೇಳಿರುವುದಾಗಿ ಇನ್ಸೈಡ್ಸ್ಪೋರ್ಟ್ ವರದಿ ಮಾಡಿದೆ.
ಈ ವಿಷಯದ ಬಗ್ಗೆ ಸಭೆ ನಡೆಸಲಾಗುವುದು. ಅಲ್ಲಿಯವರೆಗೆ, ಆ ವಿಷಯದ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಲಾಗುವುದಿಲ್ಲ ಎಂದು ಕೆಎಸ್ಸಿಎ ಮೂಲವು ಇನ್ಸೈಡ್ಸ್ಪೋರ್ಟ್ಗೆ ತಿಳಿಸಿದ್ದು, ಈ ವಿಷಯದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.
ಐಪಿಎಲ್ ಪಂದ್ಯಗಳು ಸ್ಥಳಾಂತರ
ನಗರದ ನೀರಿನ ಸಮಸ್ಯೆ ನಡುವೆ ಐಪಿಎಲ್ ಪಂದ್ಯಗಳ ಸ್ಥಳಾಂತರಕ್ಕೆ ನಾಗರಿಕರು ಒತ್ತಾಯಿಸಿದ್ದಾರೆ. ಹಲವು ನೆಟ್ಟಿಗರು ನಗರದಲ್ಲಿ ನೀರಿನ ಕೊರತೆ ಇದ್ದು, ಐಪಿಎಲ್ ಪಂದ್ಯಗಳನ್ನು ಬೇರೆ ನಗರಕ್ಕೆ ಸ್ಥಳಾಂತಿರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಳೆಯ ಕೊರತೆಯಿಂದಾಗಿ ಬೆಂಗಳೂರು ನೀರಿನ ಬಿಕ್ಕಟ್ಟಿನಲ್ಲಿ ತತ್ತರಿಸಿದೆ. ಕಳೆದ ಕೆಲವು ವಾರಗಳಿಂದ ನಗರದಾದ್ಯಂತ ನೀರಿನ ಟ್ಯಾಂಕರ್ಗಳ ಬೇಡಿಕೆ ಬಹುಪಟ್ಟು ಹೆಚ್ಚಾಗಿದೆ.
ನೀರಿನ ಟ್ಯಾಂಕರ್ನ ಶುಲ್ಕ ಈ ಹಿಂದೆ 700-800 ರೂ ಆಗಿದ್ದರೆ ಅದು ಈಗ 1500-1800 ರೂ.ಗೆ ಏರಿದೆ. ಮುಂದಿನ ಐದು ತಿಂಗಳಿಗೆ ಬೇಡಿಕೆಯನ್ನು ಪೂರೈಸುವಷ್ಟು ಪೂರೈಕೆ ಇದೆ ಎಂದು ಬಿಡಬ್ಲ್ಯುಎಸ್ಎಸ್ಬಿ ಭರವಸೆ ನೀಡಿದ್ದರೂ, ನಗರದ ಜನರಲ್ಲಿ ಭೀತಿ ಆವರಿಸಿದೆ.
ಐಪಿಎಲ್ ವೇಳಾಪಟ್ಟಿಯ ಉತ್ತರಾರ್ಧವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಲೋಕಸಭೆ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಇಸಿಐ ಘೋಷಿಸಿದ ನಂತರ ಅದನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ.
ನೀರಿನ ಮರುಬಳಕೆ ವ್ಯವಸ್ಥೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆನೀರು ಕೊಯ್ಲು ಮತ್ತು ಕೊಳಚೆನೀರಿನ ಸಂಸ್ಕರಣಾ ಘಟಕವನ್ನು ಒಳಗೊಂಡಿರುವ ಸಮಗ್ರ ನೀರಿನ ನಿರ್ವಹಣಾ ವ್ಯವಸ್ಥೆ ಇದೆ. ಮೈದಾನಕ್ಕೆ, ತೋಟಗಾರಿಕೆಗಾಗಿ ಒಳಚರಂಡಿ ನೀರನ್ನು ಮರುಬಳಕೆ ಮಾಡಲಾಗುತ್ತದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಹಯೋಗದೊಂದಿಗೆ ಈ ವ್ಯವಸ್ಥೆ ಮಾಡಲಾಗಿದೆ.
ದಿನಕ್ಕೆ ಸರಾಸರಿ 15,000 ಲೀಟರ್ ನೀರು ಪಂದ್ಯಕ್ಕೆ ಮೈದಾನ ಸಿದ್ಧಪಡಿಸಲು ಬೇಕಾಗುತ್ತದೆ. ಜಲಮಂಡಳಿ, ಬೋರ್ವೆಲ್ಗಳು ಅಥವಾ ಟ್ಯಾಂಕರ್ಗಳನ್ನು ಅವಲಂಬಿಸದ ಕಾರಣ ಕೆಎಸ್ಸಿಎ ನೀರಿನ ಮೇಲಿನ ಖರ್ಚು ಶೂನ್ಯವಾಗಿದೆ. ಆದ್ದರಿಂದ ಐಪಿಎಲ್ ಪಂದ್ಯಗಳನ್ನು ಬೇರೆ ನಗರಕ್ಕೆ ಸ್ಥಳಾಂತರಿಸುವ ಯಾವುದೇ ಸಾಧ್ಯತೆ ಇಲ್ಲ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications