ಇದ್ಯಾರು ಯುವಿನಾ ಅಥವಾ ಬೂಮ್ರಾನಾ; ಸಚಿನ್ ಟ್ವೀಟ್ ಹಿಂದಿನ ಮರ್ಮವೇನು?
ಎಡ್ ಬ್ಯಾಸ್ಟನ್, ಜುಲೈ 02: ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ಅಖಾಡಕ್ಕೆ ಇಳಿದ ಜಸ್ಪ್ರೀತ್ ಬೂಮ್ರಾ ಬ್ಯಾಟಿಂಗ್ ಶೈಲಿಗೆ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಶಾಕ್ ಆಗಿದ್ದಾರೆ.
ಅರೇ.. ಫೀಲ್ಡ್ ನಲ್ಲಿ ಆಟ ಆಡುತ್ತಿರುವುದು ಯುವರಾಜ್ ಸಿಂಗ್ ಅಥವಾ ಜಸ್ಪ್ರೀತ್ ಬೂಮ್ರಾನಾ ಎಂದು ಸಚಿನ್ ತೆಂಡೂಲ್ಕರ್ ಅಚ್ಚರಿಯ ಟ್ವೀಟ್ ಮಾಡಿದ್ದಾರೆ. ಏಕೆಂದರೆ ಶನಿವಾರ ಜಸ್ಪ್ರೀತ್ ಬೂಮ್ರಾ ಪ್ರದರ್ಶಿಸಿ ಬ್ಯಾಟಿಂಗ್ ವೈಖರಿ ಹಾಗಿತ್ತು.
ಒಂದೇ ಓವರ್ ನಲ್ಲಿ 4, 4, 6, 4, 6, 4, 1 ಸೇರಿದಂತೆ ಒಟ್ಟು ಏಳು ಎಸೆತಗಳಲ್ಲಿ 29 ರನ್ ಗಳಿಸಿದ್ದಾರೆ. ಈ ಮಾಸ್ಟರ್ ಸ್ಟ್ರೋಕ್ ಆಟದ ಶೈಲಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಆಟದ ಶೈಲಿಯನ್ನು ನೆನಪಿಸಿಕೊಂಡಿದ್ದಾರೆ.

ಯುವರಾಜ್ ಸಿಂಗ್ ಬಗ್ಗೆ ಸಚಿನ್ ಟ್ವೀಟ್:
2007 ರಲ್ಲಿ ಬ್ರಾಡ್ ವಿರುದ್ಧ ಒಂದು ಓವರ್ನಲ್ಲಿ ಆರು ಸಿಕ್ಸರ್ಗಳನ್ನು ಸಿಡಿಸಿದ ಯುವರಾಜ್ ಸಿಂಗ್ಗೆ ಭಾರತೀಯ ವೇಗಿಯನ್ನು ಹೋಲಿಸಿದ ಸಚಿನ್ ತೆಂಡೂಲ್ಕರ್ ಬುಮ್ರಾ ಅವರನ್ನು ಶ್ಲಾಘಿಸುವ ಟ್ವೀಟ್ನೊಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಕ್ಯಾ ಯೇ ಯುವಿ ಹೈ ಯಾ ಬುಮ್ರಾ!? 2007 ಕಿ ಯಾದ್ ದಿಲಾ ದಿ.." ಎಂದು ಸಚಿನ್ ಬರೆದುಕೊಂಡಿದ್ದಾರೆ.
ಬ್ರಿಯಾನ್ ಲಾರಾ ರೆಕಾರ್ಡ್ ಬ್ರೇಕ್:
ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಶ್ರೇಷ್ಠ ಬ್ರಿಯಾನ್ ಲಾರಾ ಮಾಡಿದ ದಾಖಲೆಯನ್ನು ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ವೇಗದ ಬ್ಯಾಟಿಂಗ್ ಶೈಲಿಯಿಂದ ಹಿಂದಿಕ್ಕಿದ್ದಾರೆ. ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಭಾರತದ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ವಿರುದ್ಧ ಒಂದೇ ಓವರ್ ನಲ್ಲಿ ಬರೋಬ್ಬರಿ 29 ರನ್ ಗಳಿಸುವ ಮೂಲಕ ಜಸ್ಪ್ರೀತ್ ಬೂಮ್ರಾ ಹೊಸ ದಾಖಲೆ ಬರೆದಿದ್ದಾರೆ. ಈ ಹಿಂದೆ ಟೆಸ್ಟ್ ಪಂದ್ಯದ ಒಂದು ಓವರ್ ನಲ್ಲಿ ಬ್ರಿಯಾನ್ ಲಾರಾ 28 ರನ್ ಗಳಿಸಿದ್ದೇ ಗರಿಷ್ಠ ರನ್ ಎನಿಸಿಕೊಂಡಿತ್ತು.
Kya yeh Yuvi hai ya Bumrah!?
— Sachin Tendulkar (@sachin_rt) July 2, 2022
2007 ki yaad dilaa di.. 😍@YUVSTRONG12 @Jaspritbumrah93 #ENGvIND pic.twitter.com/vv9rvrrO6K
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications