Lakshya Sen: ಒಲಿಂಪಿಕ್ನಲ್ಲಿ ಸೆಮಿಫೈನಲ್ ತಲುಪಿ ಹೊಸ ಇತಿಹಾಸ ಬರೆದ ಲಕ್ಷ್ಯ ಸೇನ್
ಪ್ಯಾರಿಸ್ ಒಲಿಂಪಿಕ್ನಲ್ಲಿ ಶುಕ್ರವಾರ ಭಾರತಕ್ಕೆ ಮರೆಯಲಾಗದ ದಿನ 52 ವರ್ಷಗಳ ಬಳಿಕ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಇತಿಹಾಸ ನಿರ್ಮಿಸಿದರೆ. ಇತ್ತ ಪುರುಷರ ಬ್ಯಾಡ್ಮಿಂಟನ್ನಲ್ಲಿ ಲಕ್ಷ್ಯ ಸೇನ್ ಹೊಸ ಇತಿಹಾಸ ಬರೆದರು.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆಯ ಚೌ ಟಿಯೆನ್-ಚೆನ್ ವಿರುದ್ಧ ಮೂರು ಸೆಟ್ಗಳಲ್ಲಿ 2-1ರಲ್ಲಿ ರೋಚಕ ಗೆಲುವು ಸಾಧಿಸಿದ ಲಕ್ಷ್ಯಸೇನ್ ಸೆಮಿಫೈನಲ್ ತಲುಪಿದರು. ಈ ಸಾಧನೆ ಮಾಡಿದ ಮೊದಲ ಪುರುಷ ಷಟ್ಲರ್ ಎನ್ನುವ ದಾಖಲೆ ಬರೆದರು.

ಪಿವಿ ಸಿಂಧು ಮತ್ತು ಸೈನಾ ನೆಹ್ವಾಲ್ ನಂತರ ಒಲಂಪಿಕ್ಸ್ನಲ್ಲಿ ಬ್ಯಾಡ್ಮಿಂಟನ್ ಸಿಂಗಲ್ಸ್ ಸೆಮಿಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಶಟ್ಲರ್ ಹಾಗೂ ಒಟ್ಟಾರೆ ಮೂರನೇ ಭಾರತೋಯ ಷಟ್ಲರ್ ಎನ್ನುವ ಹೆಗ್ಗಳಿಕೆಗೆ ಲಕ್ಷ್ಯ ಸೇನ್ ಪಾತ್ರರಾಗಿದ್ದಾರೆ.
ಲಕ್ಷ್ಯ ಸೇನ್ಗೂ ಮುನ್ನ ಕಿಡಂಬಿ ಶ್ರೀಕಾಂತ್ (2016) ಮತ್ತು ಪರುಪಳ್ಳಿ ಕಶ್ಯಪ್ (2012) ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದೇ ಈವರೆಗಿನ ಉತ್ತಮ ಸಾಧನೆಯಾಗಿತ್ತು. ಆದರೆ ಪ್ಯಾರಿಸ್ ಒಲಿಂಪಿಕ್ನಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಲಕ್ಷ್ಯಸೇನ್ ಭಾರತಕ್ಕೆ ಮತ್ತೊಂದು ಪದಕದ ಭರವಸೆ ಮೂಡಿಸಿದ್ದಾರೆ.
ಲಕ್ಷ್ಯ ಸೇನ್ ಚೈನೀಸ್ ತೈಪೆಯ ಟಿಯೆನ್-ಚೆನ್ ವಿರುದ್ಧ 19-21, 21-15, 21-12 ರಿಂದ ಸೋಲಿಸಿದರು. 22 ವರ್ಷದ ಲಕ್ಷ್ಯ ಸೇನ್, ಸೆಮಿಫೈನಲ್ನಲ್ಲಿ ಡೆನ್ಮಾರ್ಕ್ನ ಎರಡನೇ ಶ್ರೇಯಾಂಕದ ವಿಕ್ಟರ್ ಅಕ್ಸೆಲ್ಸೆನ್ ಅಥವಾ ಸಿಂಗಾಪುರದ ಸಿಂಗಾಪುರದ ಲೋಹ್ ಕೀನ್ ಯೂ ಅವರೊಂದಿಗೆ ಸೆಣೆಸಲಿದ್ದಾರೆ. ಸೆಮಿಫೈನಲ್ನಲ್ಲಿ ಗೆಲುವು ಸಾಧಿಸಿದರೆ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಚಿತವಾಗುತ್ತದೆ.
ಸೈನಾ ನೆಹ್ವಾಲ್ (2012 ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚು), ಪಿವಿ ಸಿಂಧು (ರಿಯೋ 2016 ಒಲಿಂಪಿಕ್ಸ್ನಲ್ಲಿ ಬೆಳ್ಳಿ ಮತ್ತು 2020ರ ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚು) ಗೆದ್ದಿರುವ ಷಟ್ಲರ್ ಗಳಾಗಿದ್ದಾರೆ.
ಭಾರತದ ಏಕೈಕ ಭರವಸೆ
ಈಗಾಗಲೇ ಪಿವಿ ಸಿಂಧು ಮತ್ತು ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸೋತು ನಿರ್ಗಮಿಸಿದ್ದು, ಲಕ್ಷ್ಯ ಸೇನ್ ಮಾತ್ರ ಭಾರತದ ಭರವಸೆಯಾಗಿದ್ದಾರೆ. ಅದೂ ಅಲ್ಲದೆ ಸೆಮಿಫೈನಲ್ ಪ್ರವೇಶಿಸಿದ ಮೊದಲ ಪುರುಷ ಷಟ್ಲರ್ ಆಗಿರುವ ಕಾರಣ, ಏನಾದರೂ ಪದಕ ಗೆದ್ದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಪುರುಷ ಎನ್ನುವ ಸಾಧನೆ ಅವರದ್ದಾಗಲಿದೆ.
2012ರ ಲಂಡನ್ ಒಲಿಂಪಿಕ್ಸ್ ಬಳಿಕ ನಡೆದ ಒಲಿಂಪಿಕ್ಸ್ ಪಂದ್ಯಾವಳಿಗಳಲ್ಲಿ ಭಾರತ ಬ್ಯಾಡ್ಮಿಂಟನ್ನಲ್ಲಿ ಪದಕ ಗೆದ್ದುಕೊಂಡೇ ಬಂದಿದೆ. ಈ ಲಕ್ಷ್ಯ ಸೇನ್ ಮಾತ್ರ ಕಣದಲ್ಲಿ ಉಳಿದಿದ್ದು ಪದಕ ಗೆಲ್ಲಲಿ ಎಂದು ಕೋಟ್ಯಂತರ ಭಾರತೀಯರು ಹಾರೈಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications