Lanka Premier League: ಫಿಕ್ಸಿಂಗ್ ಆರೋಪ; ಡಂಬುಲ್ಲಾ ಥಂಡರ್ಸ್ ಫ್ರಾಂಚೈಸಿ ಅಮಾನತು
ಶ್ರೀಲಂಕಾದಲ್ಲಿ ನಡೆಯುವ ಲಂಕಾ ಪ್ರೀಮಿಯರ್ ಲೀಗ್ (ಎಲ್ಪಿಎಲ್)ನಲ್ಲಿ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದು, ಶ್ರೀಲಂಕಾ ಕ್ರಿಕೆಟ್ ಮಂಡಳಿ ಡಂಬುಲ್ಲಾ ಥಂಡರ್ಸ್ ಫ್ರಾಂಚೈಸಿಯನ್ನು ಅಮಾನತು ಮಾಡಿದೆ.
ಫ್ರಾಂಚೈಸಿ ಡಂಬುಲ್ಲಾ ಥಂಡರ್ಸ್ ಮಾಲೀಕ ಬಾಂಗ್ಲಾದೇಶ ಮೂಲದ ಬ್ರಿಟಿಷ್ ಪ್ರಜೆ ತಮೀಮ್ ರೆಹಮಾನ್ ಅವರನ್ನು ಬುಧವಾರ ಮ್ಯಾಚ್ ಫಿಕ್ಸಿಂಗ್ನಲ್ಲಿ ತೊಡಗಿರುವ ಶಂಕೆಯ ಮೇಲೆ ಬಂಧಿಸಲಾದ ಬೆನ್ನಲ್ಲೇ ಈ ನಿರ್ಧಾರ ಮಾಡಲಾಗಿದೆ.

ಕೊಲಂಬೊ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಹಮಾನ್ ಅವರನ್ನು ಮೇ 31 ರವರೆಗೆ ಕಸ್ಟಡಿಗೆ ಒಪ್ಪಿಸಿತು. ಡಂಬುಲ್ಲಾ ಫ್ರಾಂಚೈಸ್ ಅನ್ನು ಬಾಂಗ್ಲಾದೇಶದ ಉದ್ಯಮಿಗಳ ನೇತೃತ್ವದ ಇಂಪೀರಿಯಲ್ ಸ್ಪೋರ್ಟ್ಸ್ ಗ್ರೂಪ್ ಏಪ್ರಿಲ್ನಲ್ಲಿ ಖರೀದಿಸಿತ್ತು.
ರೆಹಮಾನ್ ವಿರುದ್ಧದ ಆರೋಪಗಳ ಸಾಬೀತಾಗದೇ ಇದ್ದರೂ, ಲಂಕಾ ಪ್ರೀಮಿಯರ್ ಲೀಗ್ನ ಸಮಗ್ರತೆ ಮತ್ತು ಸುಗಮ ಕಾರ್ಯನಿರ್ವಹಣೆಯು ಅತ್ಯಂತ ಮಹತ್ವದ್ದಾಗಿದೆ. ಎಲ್ಪಿಎಲ್ನ ಮೌಲ್ಯಗಳು ಮತ್ತು ಖ್ಯಾತಿಯನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದ್ದು, ಎಲ್ಲಾ ಭಾಗವಹಿಸುವವರು ನಡತೆ ಮತ್ತು ಕ್ರೀಡಾಸ್ಫೂರ್ತಿಯ ಅತ್ಯುನ್ನತ ಮಾನದಂಡಗಳಿಗೆ ಬದ್ಧರಾಗಿರುವುದನ್ನು ಖಚಿತಪಡಿಸಿಕೊಳ್ಳು ಈ ನಿರ್ಧಾರ ಮಾಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೇಳಿದೆ.
ಅತ್ಯಾಕರ್ಷಕ ಮತ್ತು ಸ್ಪರ್ಧಾತ್ಮಕ ಪಂದ್ಯಾವಳಿಯನ್ನು ನೀಡಲು ಬದ್ಧವಾಗಿದೆ ಮತ್ತು ಲೀಗ್ನ ಸಮಗ್ರತೆ ಮತ್ತು ಯಶಸ್ಸನ್ನು ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.
"ನಾವು ಪಾರದರ್ಶಕತೆ ಮತ್ತು ವೃತ್ತಿಪರತೆಯ ಉನ್ನತ ಗುಣಮಟ್ಟಕ್ಕೆ ಬದ್ಧರಾಗಿದ್ದೇವೆ ಮತ್ತು ಈ ಪರಿವರ್ತನೆಯ ಸಮಯದಲ್ಲಿ ನಮ್ಮ ಎಲ್ಲಾ ತಂಡಗಳು, ಆಟಗಾರರು ಮತ್ತು ಅಭಿಮಾನಿಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ." ಎಲ್ಪಿಎಲ್ ಹಕ್ಕುದಾರ ಐಪಿಜಿ ಗ್ರೂಪ್ ಅಧ್ಯಕ್ಷ ಅನಿಲ್ ಮೋಹನ್ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications