KL Rahul: ಕೆಎಲ್ ರಾಹುಲ್ಗೆ ಮತ್ತೆ ಅವಮಾನ?
ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯವಾಗಿ ಸೋತ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೆಎಲ್ ರಾಹುಲ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಅದಾದ ಬಳಿಕ ಸಂಜೀವ್ ಗೊಯೆಂಕಾ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.
ಕೆಎಲ್ ರಾಹುಲ್ ತಂಡದ ನಾಯಕತ್ವ ಬಿಡುತ್ತಾರೆ, ಅವರು ತಂಡದ ಜೊತೆ ಪ್ರಯಾಣಿಸಿಲ್ಲ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅವರು ನಾಯಕತ್ವ ವಹಿಸಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.

ಇದಕ್ಕೂ ಮುನ್ನ ಕೆಎಲ್ ರಾಹುಲ್ ಸಂಜೀವ್ ಗೊಯೆಂಕಾ ಅವರ ಮನೆಯಲ್ಲಿ ಊಟ ಮಾಡುವ ಮೂಲಕ, ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ. ಗೊಯೆಂಕಾ ಮತ್ತು ಕೆಎಲ್ ರಾಹುಲ್ ನಡುವೆ ಎಲ್ಲವೂ ಸರಿ ಇದೆ ಎನ್ನುವ ಸಂದೇಶ ನೀಡಲು ಫ್ರಾಂಚೈಸಿ ಪ್ರಯತ್ನ ಮಾಡಿದೆ.
ಅಭಿಮಾನಿಗಳಿಗೆ ಕೋಪ ಯಾಕೆ?
ತಂಡದಲ್ಲಿ ಕೆಎಲ್ ರಾಹುಲ್ ಇದ್ದರೂ ಅವರಿಗೆ ತಕ್ಕ ಬೆಲೆ ಸಿಗುತ್ತಿಲ್ಲ ಎನ್ನುವ ಆರೋಪ ಅಭಿಮಾನಿಗಳದ್ದಾಗಿದೆ. ಫ್ರಾಂಚೈಸಿ ಜೊತೆ ಒಪ್ಪಂದ ಮಾಡಿಕೊಂಡಿರುವ ಪಾನೀಯ ಒಂದರ ಜಾಹೀರಾತಿನಲ್ಲಿ ಕೆಎಲ್ ರಾಹುಲ್ ಅವರೇ ಕಾಣೆಯಾಗಿದ್ದು, ಮಯಾಂಕ್ ಯಾದವ್, ಕೃನಾಲ್ ಪಾಂಡ್ಯ, ದೇವದತ್ ಪಡಿಕ್ಕಲ್ ಕಾಣಿಸಿಕೊಂಡಿದ್ದಾರೆ.
ಸಂಜೀವ್ ಗೊಯೆಂಕಾ ಅವರ ವರ್ತನೆ ಬಳಿಕ ಈ ರೀತಿ ಮಾಡಿರುವುದು ಅಭಿಮಾನಿಗಳಿಗೆ ಅನುಮಾನ ಮೂಡಿಸಿದೆ. ಇದು ಬೇಕಂತಲೇ ಮಾಡಿದ್ದಾ, ಇಲ್ಲವಾ ಎನ್ನುವ ಬಗ್ಗೆ ಖಾತ್ರಿ ಇಲ್ಲವಾದರೂ, ಅಭಿಮಾನಿಗಳು ಮಾತ್ರ ಕೋಪಗೊಂಡಿದ್ದಾರೆ.
ತಂಡದಿಂದ ಹೊರಕ್ಕೆ?
ಸಂಜೀವ್ ಗೊಯೆಂಕಾ ಅವರ ವರ್ತನೆ ಕೆಎಲ್ ರಾಹುಲ್ ಅಭಿಮಾನಿಗಳಿಗೆ ಕೋಪ ತರಿಸಿದೆ. ನೀವು ಎಲ್ಎಸ್ಜಿ ತಂಡವನ್ನು ಬಿಟ್ಟುಬಿಡಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಮುಂದಿನ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬನ್ನಿ ಎಂದು ಕೂಡ ಆಹ್ವಾನ ನೀಡಿದ್ದಾರೆ.
ಕಳೆದ ಎರಡೂ ಆವೃತ್ತಿಗಳಲ್ಲಿ ಕೆಎಲ್ ರಾಹುಲ್ ನಾಯಕತ್ವದಲ್ಲಿ ಎಲ್ಎಸ್ಜಿ ತಂಡ ಪ್ಲೇ ಆಫ್ ತಲುಪಿತ್ತು. ಈ ಬಾರಿ ಕೂಡ ಪ್ಲೇ ಆಫ್ ತಲುಪುವ ಅವಕಾಶ ಇದ್ದು, ಮುಂದಿನ ಎರಡೂ ಪಂದ್ಯಗಳಲ್ಲಿ ಗೆಲ್ಲಬೇಕಿದೆ.
ಕೆಎಲ್ ರಾಹುಲ್ ಈ ವರ್ಷದ ಐಪಿಎಲ್ ಬಳಿಕ ತಂಡವನ್ನು ತೊರೆಯಲಿದ್ದಾರೆ ಎನ್ನಲಾಗಿದೆ. 2025ರ ಐಪಿಎಲ್ಗೆ ಮುನ್ನ ಮೆಗಾ ಹರಾಜು ನಡೆಯಲಿದ್ದು, ಹರಾಜಿಗೆ ಬರುತ್ತಾರ, ಅಥವಾ ಎಲ್ಎಸ್ಜಿ ತಂಡವೇ ಅವರನ್ನು ರಿಟೈನ್ ಮಾಡಿಕೊಳ್ಳುತ್ತಾ ಎನ್ನುವ ಕುತೂಹಲ ಇದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications