KKR vs LSG: ಗೆಲುವಿನ ಸನಿಹದಲ್ಲಿ ಎಡವಿದ ಕೆಕೆಆರ್; ಲಕ್ನೋಗೆ ಭರ್ಜರಿ ಗೆಲುವು
ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 4 ರನ್ಗಳಿಂದ ರೋಚಕ ಗೆಲುವು ಸಾಧಿಸಿದೆ. ಅಂತಿಮ ಓವರ್ ಗಳಲ್ಲಿ ರಿಂಕು ಸಿಂಗ್ ಅವರ ಹೋರಾಟ ವ್ಯರ್ಥವಾಗಿದ್ದು ಕೆಕೆಆರ್ ಸೋಲೊಪ್ಪಿಕೊಂಡಿತು.
ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 238 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಐಡೆನ್ ಮಾರ್ಕ್ರಮ್ ಮತ್ತು ಮಿಚೆಲ್ ಮಾರ್ಷ್ ಸ್ಪೋಟಕ ಬ್ಯಾಟಿಂಗ್ ಮಾಡುವ ಮೂಲಕ ಉತ್ತಮ ಆರಂಭ ನೀಡಿದರು.

ಐಡೆನ್ ಮಾರ್ಕ್ರಮ್ 28 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 47 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 48 ಎಸೆತಗಳಲ್ಲಿ 6 ಬೌಂಡರಿ 5 ಸಿಕ್ಸರ್ ಸಹಿತ 81 ರನ್ ಗಳಿಸಿ ಮಿಂಚಿದರು. ಬಳಿಕ ಬಂದ ನಿಕೋಲಸ್ ಪೂರನ್ ಕೇವಲ 36 ಎಸೆತಗಳಲ್ಲಿ 7 ಬೌಂಡರಿ 8 ಸಿಕ್ಸರ್ ಸಹಿತ ಅಜೇಯ 87 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು.
ಅಬ್ದುಲ್ ಸಮದ್ 6 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ ಅಜೇಯ 4 ರನ್ ಗಳಿಸಿದರು. ಹರ್ಷಿತ್ ರಾಣಾ 4 ಓವರ್ ಗಳಲ್ಲಿ 51 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದರೆ, ಆಂಡ್ರೆ ರಸೆಲ್ 1 ವಿಕೆಟ್ ಪಡೆದರು.
ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ ಕೂಡ ಉತ್ತಮ ಆರಂಭ ಪಡೆದರು, ಕ್ವಿಂಟನ್ ಡಿ ಕಾಕ್ (15 ರನ್) ಅವರ ವಿಕೆಟ್ ಕಳೆದುಕೊಂಡಿತು. ಬಳಿಕ ಜೊತೆಯಾದ ಸುನಿಲ್ ನರೈನ್ ಮತ್ತು ನಾಯಕ ಅಜಿಂಕ್ಯ ರಹಾನ್ ಕೆಕೆಆರ್ ತಂಡಕ್ಕೆ ಆಸರೆಯಾದರು. ಸುನಿಲ್ ನರೈನ್ 13 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 30 ರನ್ ಗಳಿಸಿದರು.
ನಾಯಕ ಅಜಿಂಕ್ಯ ರಹಾನೆ 35 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ 61 ರನ್ ಗಳಿಸಿ ಔಟಾದರು. ವೆಂಕಟೇಶ್ ಅಯ್ಯರ್ ಕೂಡ 29 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್ ಸಹಿತ 45 ರನ್ ಗಳಿಸಿದರು. ರಮಣದೀಪ್ ಸಿಂಗ್ 1 ರನ್ ಗಳಿಸಿ ಔಟಾದರೆ, ಆಂಗ್ಕ್ರಿಶ್ ರಘುವಂಶಿ 5 ರನ್ ಗಳಿಸಿ ಔಟಾದರು, ಆಂಡ್ರೆ ರಸೆಲ್ ಕೂಡ 7 ರನ್ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ರಿಂಕು ಸಿಂಗ್ 15 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿದರೂ ಕೆಕೆಆರ್ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 234 ರನ್ ಗಳಿಸಿ 4 ರನ್ಗಳಿಂದ ಸೋಲೊಪ್ಪಿಕೊಂಡಿತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications