LSG vs MI: ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ಗೆ ರೋಚಕ ಗೆಲುವು
ಲಕ್ನೋದ ಎಕಾನ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ಗಳ ಗೆಲುವು ಸಾಧಿಸಿದೆ. ಹಾರ್ದಿಕ್ ಪಾಂಡ್ಯ ಹೋರಾಟದ ನಡುವೆಯೂ ಮುಂಬೈ ಇಂಡಿಯನ್ಸ್ ಸೋಲು ಕಂಡಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್ ಮಾಡಿ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಕಲೆಹಾಕಿತು. ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಸ್ಫೋಟಕ ಆರಂಭ ನೀಡಿದರು. 31 ಎಸೆತಗಳಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 60 ರನ್ ಗಳಿಸಿದರು.

ಏಡೆನ್ ಮಾರ್ಕ್ರಮ್ 38 ಎಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್ ಸಹಿತ 53 ರನ್ ಗಳಿಸಿ ಫಾರ್ಮ್ ಕಂಡುಕೊಂಡರು. ನಿಕೋಲಸ್ ಪೂರನ್ 6 ಎಸೆತಗಳಲ್ಲಿ 12 ರನ್ ಗಳಿಸಿ ನಿರಾಸೆ ಮೂಡಿಸಿದರು. ರಿಷಬ್ ಪಂತ್ ಕೇವಲ 2 ರನ್ ಗಳಿಸಿ ಔಟಾದರು. ಆಯುಷ್ ಬದೋನಿ 29 ಎಸೆತಗಳಲ್ಲಿ 4 ಬೌಂಡರಿ ಸಹಿತ 30 ರನ್ ಗಳಿಸಿದರು. ಡೇವಿಡ್ ಮಿಲ್ಲರ್ 14 ಎಸೆತಗಳಲ್ಲಿ 27 ರನ್ ಗಳಿಸಿ ಮಿಂಚಿದರು.
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ 4 ಓವರ್ ಗಳಲ್ಲಿ 36 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದರು. ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್ ಮತ್ತು ವಿಘ್ನೇಶ್ ಪುತೂರ್ ತಲಾ ಒಂದು ವಿಕೆಟ್ ಪಡೆದರು.
ಸೂರ್ಯ ಹೋರಾಟ ವ್ಯರ್ಥ
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಕಾಶ್ ದೀಪ್ ಮತ್ತು ಶಾರ್ದೂಲ್ ಠಾಕೂರ್ ಆರಂಭದಲ್ಲೇ ಆಘಾತ ನೀಡಿದರು. ವಿಲ್ ಜ್ಯಾಕ್ಸ್ 7 ಎಸೆತಗಳಲ್ಲಿ 5 ರನ್ ಗಳಿಸಿ ಔಟಾದರು. ರಿಯಾನ್ ರಿಕಲ್ಟನ್ 10 ರನ್ ಗಳಿಸಿ ಔಟಾದರು. ನಮನ್ ಧಿರ್ 24 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 46 ರನ್ ಗಳಿಸಿ ಮಿಂಚಿದರು. ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 9 ಬೌಂಡರಿ 1 ಸಿಕ್ಸರ್ ಸಹಿತ 67 ರನ್ ಗಳಿಸಿ ಔಟಾದರು.
ಸೂರ್ಯಕುಮಾರ್, ನಮನ್ ಧಿರ್ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು, ಆದರೆ ಇವರಿಬ್ಬರೂ ಔಟಾಗುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಗೆಲುವಿನ ದಾರಿ ಕಳೆದುಕೊಂಡಿತು. ತಿಲಕ್ ವರ್ಮಾ 23 ಎಸೆತಗಳಲ್ಲಿ 2 ಬೌಂಡರಿ ಸಹಿತ 25 ರನ್ ಮಾತ್ರ ಗಳಿಸಿದರು. ಅವರು ರಿಟೈರ್ಡ್ ಹರ್ಟ್ ಆದರೂ ಅಷ್ಟರಲ್ಲಾಗಲೇ ಮುಂಬೈ ಗೆಲುವಿನ ಹಾದಿ ಕಠಿಣವಾಗಿತ್ತು.
ನಾಯಕ ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 2 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 28 ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ತಲುಪಿಸಲು ಆಗಲಿಲ್ಲ. ಆವೇಶ್ ಖಾನ್ ಕೊನೆಯ ಓವರ್ ನಲ್ಲಿ ಹಾರ್ದಿಕ್ ಪಾಂಡ್ಯರನ್ನು ಕಟ್ಟಿಹಾಕುವ ಮೂಲಕ ಎಲ್ಎಸ್ಜಿ ತಂಡಕ್ಕೆ ಗೆಲುವು ತಂದುಕೊಟ್ಟರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications