ಮಲೇಷ್ಯಾ ಓಪನ್ 2022: ಪ್ರಣಯ್ , ಸಿಂಧುಗೆ ಸೋಲು, ಭಾರತದ ಸವಾಲು ಅಂತ್ಯ
ಕ್ವಾಲ ಲಾಂಪುರ, ಜುಲೈ 1: ಎಚ್. ಎಸ್ ಪ್ರಣಯ್ ಪುರುಷರ ಕ್ವಾರ್ಟರ್ ಫೈನಲ್ನಲ್ಲಿ ಶುಕ್ರವಾರ ಸೋಲು ಕಾಣುವುದರೊಂದಿಗೆ ಮಲೇಷ್ಯಾ ಓಪನ್ ಸೂಪರ್ 750 ಟೂರ್ನಮೆಂಟ್ನಲ್ಲಿ ಭಾರತೀಯ ಶಟ್ಲರ್ಗಳ ಸವಾಲು ಅಂತ್ಯಗೊಂಡಿದೆ.
ಶುಕ್ರವಾರ ನಡೆದ 8ರ ಘಟ್ಟದ ಪಂದ್ಯದಲ್ಲಿ ಪ್ರಣಯ್ 7ನೇ ಶ್ರೇಯಾಂಕದ ಇಂಡೋನೇಷ್ಯಾದ ಜೋನಾಥನ್ ಕ್ರಿಸ್ವಿ ವಿರುದ್ಧ ನೇರ ಗೇಮ್ಗಳ ಅಂತರದಲ್ಲಿ ಸೋಲು ಕಂಡು ಪಂದ್ಯವಾಳಿಯಲ್ಲಿ ತೋರಿದ್ದ ತಮ್ಮ ಆಕರ್ಷಕ ಪ್ರದರ್ಶನ ನಿರಾಶೆಯಲ್ಲಿ ಅಂತ್ಯಗೊಳಿಸಿದರು.
ಕ್ವಾರ್ಟರ್ ಫೈನಲ್ನಲ್ಲಿ ಪ್ರಣಯ್ 18-21, 16-21ರಲ್ಲಿ ಕ್ರಿಸ್ಟಿಗೆ ಕೇವಲ 44 ನಿಮಿಷಗಳ ಆಟದಲ್ಲಿ ಶರಣಾಗುವುದರೊಂದಿಗೆ ತಮ್ಮ ಅಜೇಯ ಓಟವನ್ನು ಮುಂದುವರಿಸುವಲ್ಲಿ ವಿಫಲರಾದರು. ಪ್ರಣಯ್ ಇಂಡೋನೇಷ್ಯನ್ ಆಟಗಾರನ ವಿರುದ್ಧ ಕಂಡ ಸತತ ಮೂರನೇ ನೇರ ಗೇಮ್ಗಳ ಸೋಲಾಗಿದೆ. 2022ರಲ್ಲಿ 2ನೇ ಬಾರಿಗೆ ಸೋಲು ಕಂಡಿದ್ದಾರೆ. ಸ್ವಿಸ್ ಓಪನ್ನಲ್ಲೂ ಕ್ರಿಸ್ಟಿ ಭಾರತೀಯ ಆಟಗಾರನ ವಿರುದ್ಧ ಜಯ ಸಾಧಿಸಿದ್ದರು.

ಪಿವಿ ಸಿಂಧುಗೆ ಸೋಲು; ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಕೂಡ ಶುಕ್ರವಾರ ಮೊದಲ ಗೇಮ್ ಜಯ ಸಾಧಿಸಿದ ಹೊರತಾಗಿಯೂ 2ನೇ ಶ್ರೇಯಾಂಕದ ಚೈನೀಸ್ ತೈಪೆಯ ತಾಯ್ ಜು ಯಂಗ್ ವಿರುದ್ಧ ಸೋಲು ಕಂಡು ನಿರಾಶೆ ಅನುಭವಿಸಿದರು. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಸಿಂಧುಗೆ ಸೋಲುಣಿಸಿದ್ದ ತಾಯ್ ಜು ಇಂದಿನ ಪಂದ್ಯದಲ್ಲಿ 13-21, 21-15, 21-13 ರಲ್ಲಿ ಭಾರತೀಯ ಆಟಗಾರ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು.
ಭಾರತದಿಂದ ಪುರುಷರ ಸಿಂಗಲ್ಸ್ನಲ್ಲಿ ಪ್ರಣಯ್ ಜೊತೆಗೆ, ಸಾಯಿ ಪ್ರಣೀತ್, ಸಮೀರ್ ವರ್ಮಾ, ಪರುಪಳ್ಳಿ ಕಶ್ಯಪ್, ಮಹಿಳೆಯರ ಸಿಂಗಲ್ಸ್ನಲ್ಲಿ ಸಿಂಧು ಜೊತೆಗೆ ಸೈನಾ ನೆಹ್ವಾಲ್ ಸ್ಪರ್ಧಿಸಿದ್ದರು. ಪುರಷರ್ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಯ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಣಕ್ಕಿಳಿದು ಮೊದಲ ಸುತ್ತಿನಲ್ಲಿ ಜಯ ಸಾಧಿಸಿದಾರಾದರೂ 2ನೇ ಸುತ್ತಿನಲ್ಲಿ ಗಾಯದ ಕಾರಣ ಕಣಕ್ಕಿಳಿಯದೇ ವಾಕ್ ಓವರ್ ಕೊಟ್ಟಿದ್ದರು.

ಮಹಿಳೆರ ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಸಿಕ್ಕಿ ರೆಡ್ಡಿ, ಹರಿತಾ ಮತ್ತು ಆಶಾ ರಾಯ್ ಹಾಗೂ ಅಶ್ವಿನಿ ಭಟ್ ಮತ್ತು ಶಿಖಾ ಗೌತಮ್ ಜೋಡಿ ಅರ್ಹತೆ ಪಡೆದಿದ್ದರು. ಆದರೆ ಯಾವೊಂದು ಜೋಡಿಯೂ ಕನಿಷ್ಠ ಒಂದು ಗೆಲುವ ಸಾಧಿಸದೇ ಟೂರ್ನಿಯಿಂದ ಹೊರಬಿದ್ದರು.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications