Ranji Trophy: ಮಯಾಂಕ್ ಆರೋಗ್ಯ ಹೇಗಿದೆ? ತಮಿಳುನಾಡು ವಿರುದ್ಧ ಆಡ್ತಾರ ಕರ್ನಾಟಕ ತಂಡದ ನಾಯಕ?
ವಿಮಾನದಲ್ಲಿ ಅನುಮಾನಾಸ್ಪದ ದ್ರವವನ್ನು ಸೇವಿಸಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಕರ್ನಾಟಕದ ನಾಯಕ ಮಯಾಂಕ್ ಅಗರ್ವಾಲ್ ಮತ್ತೆ ಫಿಟ್ ಆಗಿದ್ದಾರೆ. ರಣಜಿ ಟ್ರೋಫಿಯಲ್ಲಿ ತಂಡವನ್ನು ಮುನ್ನಡೆಸುತ್ತಿದ್ದ ಅವರು ತ್ರಿಪುರಾ ವಿರುದ್ಧದ ಪಂದ್ಯದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.
ಆ ಬಳಿಕ ಅವರ ಅನುಪಸ್ಥಿತಿಯಲ್ಲಿ ಕರ್ನಾಟಕ ರೈಲ್ವೇಸ್ ವಿರುದ್ದದ ಪಂದ್ಯದಲ್ಲಿ ಒಂದು ವಿಕೆಟ್ನ ರೋಚಕ ಗೆಲುವು ಸಾಧಿಸಿತ್ತು. ಮಯಾಂಕ್ ಅನುಪಸ್ಥಿತಿಯಲ್ಲಿ ನಿಕಿನ್ ಜೋಸ್ ಕರ್ನಾಟಕ ತಂಡದ ನಾಯಕತ್ವ ವಹಿಸಿಕೊಂಡಿದ್ದರು.

ಮಯಾಂಕ್ ಅಗರ್ವಾಲ್ ಈಗ ಚೇತರಿಸಿಕೊಂಡಿದ್ದು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಶುಕ್ರವಾರದಿಂದ ಚೆನ್ನೈನಲ್ಲಿ ನಡೆಯಲಿರುವ ಮುಂದಿನ ರಣಜಿ ಟ್ರೋಫಿ ಗುಂಪಿನ ಸಿ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ.
32 ವರ್ಷದ ಬ್ಯಾಟರ್ ಕಳೆದ ತಿಂಗಳು ತ್ರಿಪುರಾ ವಿರುದ್ಧದ ಪಂದ್ಯದ ನಂತರ ಸೂರತ್ಗೆ ತನ್ನ ತಂಡದ ವಿಮಾನದಲ್ಲಿ ದ್ರವವನ್ನು ಸೇವಿಸಿದ್ದರು. ಬಾಯಿ ಮತ್ತು ಗಂಟಲಿನಲ್ಲಿ ಉರಿ ಕಾಣಿಸಿಕೊಂಡು ಚಿಕಿತ್ಸೆ ನೀಡಲು ಆಸ್ಪತ್ರೆಗೆ ದಾಖಲಾಗಬೇಕಾಯಿತು. ಅಗರ್ವಾಲ್ ಫೌಲ್ ಪ್ಲೇ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಿದ್ದಾರೆ. ಯಾವುದೇ ಪ್ರಮುಖ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದು ತಂಡಕ್ಕೆ ಮರಳಲು ದಾರಿ ಮಾಡಿಕೊಟ್ಟರು.
ಬಲಿಷ್ಠವಾದ ಕರ್ನಾಟಕ ಬ್ಯಾಟಿಂಗ್
ಪ್ರಸ್ತುತ ತಮಿಳುನಾಡು 21 ಅಂಕಗಳೊಂದಿಗೆ ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ, ಕರ್ನಾಟಕ ಕೂಡ 21 ಅಂಕಗಳನ್ನು ಗಳಿಸಿದೆ. ಆದರೆ ತಮಿಳುನಾಡು ಅವರ ಉತ್ತಮ ನಿವ್ವಳ ರನ್ ರೇಟ್ 2.06 ಕಾರಣ ಚಾರ್ಟ್ನಲ್ಲಿ ಅಗ್ರಸ್ಥಾನದಲ್ಲಿದೆ. ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಮಯಾಂಕ್ ಅಗರ್ವಾಲ್ ಈ ಬಾರಿ ರಣಜಿ ಟ್ರೋಫಿಯಲ್ಲಿ ನಾಲ್ಕು ಪಂದ್ಯಗಳಿಂದ 44 ಸರಾಸರಿಯಲ್ಲಿ ಎರಡು ಶತಕ ಮತ್ತು ಅರ್ಧಶತಕಗಳೊಂದಿಗೆ 310 ರನ್ ಗಳಿಸಿರುವ ಕಾರಣ ಅವರ ಮರಳುವಿಕೆಯು ಕರ್ನಾಟಕದ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸಿದೆ.
ಫಾರ್ಮ್ನಲ್ಲಿರುವ ದೇವದತ್ ಪಡಿಕ್ಕಲ್ ಕೂಡ ಈ ಪಂದ್ಯಕ್ಕೆ ಲಭ್ಯವಿರುವುದರಿಂದ ಕರ್ನಾಟಕ ಬ್ಯಾಟಿಂಗ್ ಮತ್ತಷ್ಟು ಬಲಿಷ್ಠವಾಗಿದೆ. ಪಡಿಕ್ಕಲ್ ಮೂರು ಪಂದ್ಯಗಳಿಂದ, ಎರಡು ಶತಕಗಳೊಂದಿಗೆ 92.25 ಸರಾಸರಿಯಲ್ಲಿ 369 ರನ್ ಗಳಿಸಿದ್ದಾರೆ.
23ರ ಹರೆಯದ ಅವರು ಅಹಮದಾಬಾದ್ನಲ್ಲಿ ಇಂಗ್ಲೆಂಡ್ ಲಯನ್ಸ್ ತಂಡವನ್ನು ಎದುರಿಸಿದ ಭಾರತ ಎ ತಂಡದ ಭಾಗವಾಗಿದ್ದ ಕಾರಣ ಪಡಿಕ್ಕಲ್ ಕೊನೆಯ ರಣಜಿ ಪಂದ್ಯವನ್ನು ತಪ್ಪಿಸಿಕೊಂಡರು.
ಕರ್ನಾಟಕ ತಂಡ:
ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್ (ಉಪನಾಯಕ), ದೇವದತ್ ಪಡಿಕ್ಕಲ್, ಸಮರ್ಥ್ ಆರ್, ಮನೀಶ್ ಪಾಂಡೆ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಅನೀಶ್ ಕೆವಿ, ವೈಶಾಕ್ ವಿಜಯ್ಕುಮಾರ್, ವಾಸುಕಿ ಕೌಶಿಕ್, ಶಶಿಕುಮಾರ್ ಕೆ, ಸುಜಯ್ ಸಾತೇರಿ (ವಿಕೆಟ್ ಕೀಪರ್ ), ವಿದ್ವತ್ ಕಾವೇರಪ್ಪ, ವೆಂಕಟೇಶ್ ಎಂ, ಕಿಶನ್ ಎಸ್ ಬೇಡರೆ, ರೋಹಿತ್ ಕುಮಾರ್ ಎಸಿ, ಹಾರ್ದಿಕ್ ರಾಜ್.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications