ರಣಜಿ ಟ್ರೋಫಿ: ಮಯಾಂಕ್ ಅಗರ್ವಾಲ್ ಶತಕ ಸಿಡಿಸಿದರೂ ಸಂಕಷ್ಟದಲ್ಲಿ ಕರ್ನಾಟಕ ತಂಡ
Mayank Agarwal: ಹುಬ್ಬಳ್ಳಿಯಲ್ಲಿನ ರಾಜನಗರದಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2026ರ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ತೀವ್ರ ಒತ್ತಡದಲ್ಲಿದೆ. ಇನ್ನೂ ಜಮ್ಮು ಕಾಶ್ಮೀರ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಬೃಹತ್ ಮೊತ್ತ ಕಲೆಹಾಕಿದ ಹಿನ್ನೆಲೆ, ಕರ್ನಾಟಕದ ತಂಡಕ್ಕೆ ದೊಡ್ಡ ಸವಾಲು ಎದುರಾಗಿದೆ. ಮೂರನೇ ದಿನದ ಆಟದ ಅಂತ್ಯಕ್ಕೆ ಕರ್ನಾಟಕವು 69 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿದೆ. ಅದರಲ್ಲೀ ಮಯಾಂಕ್ ಶತಕ ಸಿಡಿಸಿ ದಾಖಲೆ ಮಾಡಿದ್ದು, ನಾಲ್ಕನೇ ದಿನದಾಟಕ್ಕೆ ಕಾದಿದ್ದಾರೆ.
ಅನುಭವಿಯ ಮಯಾಂಕ್ ಅಗರ್ವಾಲ್ ಅಜೇಯ 130 ರನ್ಗಳೊಂದಿಗೆ ಕ್ರೀಸ್ನಲ್ಲಿದ್ದು, ಪ್ರಸಿದ್ಧ ಕೃಷ್ಣ 27 ರನ್ಗಳೊಂದಿಗೆ ನಾಲ್ಕನೇ ದಿನಕ್ಕೆ ಆಟ ಮುಂದುವರೆಸಲಿದ್ದಾರೆ. ಇನ್ನೂ ಮೂರನೇ ದಿನದ ಆರಂಭದಲ್ಲಿ 6 ವಿಕೆಟ್ಗೆ 527 ರನ್ಗಳಿಂದ ಬ್ಯಾಟಿಂಗ್ ಮುಂದುವರಿಸಿದ ಜಮ್ಮು ಕಾಶ್ಮೀರ ತಂಡ, 584 ರನ್ಗಳಿಗೆ ಆಲೌಟ್ ಆಯಿತು. ಆರಂಭದಲ್ಲೇ ದೊಡ್ಡ ಮೊತ್ತ ಕಲೆಹಾಕಿದ ಜೆಕೆ ತಂಡವು ಕರ್ನಾಟಕಕ್ಕೆ ಬೃಹತ್ ಮೊತ್ತದ ಗುರಿ ನೀಡಿತು.

ಕರ್ನಾಟಕಕ್ಕೆ ಆರಂಭದಲ್ಲೇ ಅಘಾತ
ಗುರಿ ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಆರಂಭದಲ್ಲೇ ಅಘಾತ ಎದುರಾಯಿತು. ಕೆ.ಎಲ್. ರಾಹುಲ್ ಕೇವಲ 13 ರನ್ಗಳಿಗೆ ಔಟಾದರು. ನಂತರ ನಾಯಕ ದೇವದತ್ ಪಡಿಕ್ಕಲ್ 11 ರನ್ಗಳಿಗೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ, ಅನುಭವಿ ಕರುಣ್ ನಾಯರ್ ಹಾಗೂ ಸ್ಮರಣ್ ರವಿಚಂದ್ರನ್ ಶೂನ್ಯಕ್ಕೆ ಔಟಾಗಿ ತಂಡವನ್ನು ಸಂಕಷ್ಟಕ್ಕೆ ತಳ್ಳಿದರು. 17.6 ಓವರ್ಗಳಲ್ಲಿ 57 ರನ್ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಒತ್ತಡಕ್ಕೆ ಸಿಲುಕಿತ್ತು. ಆಗ ನೆರವಾಗಿ ಕ್ರೀಸ್ನಲ್ಲಿ ಶಾಂತ ರೀತಿಯಲ್ಲೇ ಮಯಾಂಕ್ ಆಟ ಮುಂದುವರೆಸಿ ಶತನ ಸಿಡಿಸಿದರು.
ತಂಡಕ್ಕೆ ಆಸರೆಯಾದ ಮಯಾಂಕ್ ಅಗರ್ವಾಲ್
ಮಯಾಂಕ್ ಅಗರ್ವಾಲ್ ಹಾಗೂ ಶ್ರೇಯಸ್ ಗೋಪಾಲ್ ಜೋಡಿ ತಂಡಕ್ಕೆ ಆಸರೆ ಆದರು. ಇಬ್ಬರೂ ಸೇರಿ ಐದನೇ ವಿಕೆಟ್ಗೆ 105 ರನ್ಗಳ ಅದ್ಭುತ ಜೊತೆಯಾಟ ಆಡಿದರು. ಶ್ರೇಯಸ್ 27 ರನ್ ಗಳಿಸಿ ಔಟಾದರೂ, ಮಯಾಂಕ್ ತಮ್ಮ ಅನುಭವದ ಆಟದಿಂದ ಶತಕ ಪೂರೈಸಿ ತಂಡದ ಹೋರಾಟ ಮುಂದುವರಿಸಿದರು. ದಿನದಾಟ ಮುಗಿಯುವ ವೇಳೆಗೆ ಮಯಾಂಕ್ ಹಾಗೂ ಪ್ರಸಿದ್ಧ ಕೃಷ್ಣ 6ನೇ ವಿಕೆಟ್ಗೆ 58 ರನ್ ಸೇರಿಸಿದ್ದು, ಕರ್ನಾಟಕ ಇನ್ನೂ 364 ರನ್ ಹಿನ್ನಡೆಯಲ್ಲಿದೆ. ನಾಲ್ಕನೇ ದಿನದಾಟದಲ್ಲಿ ರಾಜ್ಯ ತಂಡದ ಹೋರಾಟ ಹೇಗಿರಲಿದೆ ಎಂಬುದೇ ಇದೀಗ ಕುತೂಹಲ ಕೆರಳಿಸಿದೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications