Hardik Pandya: ಸತತ ಸೋಲಿನ ಬಳಿಕ ದೇವರ ಮೊರೆ ಹೋದ ಹಾರ್ದಿಕ್ ಪಾಂಡ್ಯ
ಐಪಿಎಲ್ 2024ರ ಆವೃತ್ತಿಯಲ್ಲಿ ಆಡಿರುವ ಮೂರು ಪಂದ್ಯಗಳನ್ನು ಸೋತಿರುವ ಮುಂಬೈ ಇಂಡಿಯನ್ಸ್ ಅಂಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಇದೆಲ್ಲದರ ನಡುವೆ ಪಾಂಡ್ಯ ಸದ್ಯ ದೇವರ ಮೊರೆ ಹೋಗಿದ್ದಾರೆ.
ಗುಜರಾತ್ನಲ್ಲಿರುವ ಸೋಮನಾಥ ದೇವಸ್ಥಾನಕ್ಕೆ ಭೇಟಿ ಕೊಟ್ಟ ಹಾರ್ದಿಕ್ ಪಾಂಡ್ಯ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಏಪ್ರಿಲ್ 1ರಂದು ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಸುದೀರ್ಘ ಸಮಯ ಸಿಕ್ಕಿದ್ದು, ರಿಲ್ಯಾಕ್ಸ್ ಆಗುತ್ತಿದ್ದಾರೆ.

ನಾಯಕ ಹಾರ್ದಿಕ್ ಪಾಂಡ್ಯ ಮುಂದಿನ ಐಪಿಎಲ್ ಪಂದ್ಯಕ್ಕೆ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಭಾನುವಾರ (ಏಪ್ರಿಲ್ 7) ರಂದು ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.
ಪಾಂಡ್ಯ ವಿರುದ್ಧ ಅಸಮಾಧಾನ
ಗುಜರಾತ್ ಟೈಟಾನ್ಸ್ ತಂಡವನ್ನು ಬಿಟ್ಟು ಮುಂಬೈ ಇಂಡಿಯನ್ಸ್ ಸೇರಿಕೊಂಡ ಪಾಂಡ್ಯ ಅವರಿಗೆ ಅಂದುಕೊಂಡ ಸ್ವಾಗತ ಸಿಕ್ಕಿಲ್ಲ. ರೋಹಿತ್ ಶರ್ಮಾ ಅವರ ನಾಯಕತ್ವ ಕಸಿದುಕೊಂಡರು ಎಂದು ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳು ಕೋಪಗೊಂಡೆ, ತಂಡವನ್ನು ಬಿಟ್ಟಿದ್ದಕ್ಕೆ ಗುಜರಾತ್ ಟೈಟನ್ಸ್ ಅಭಿಮಾನಿಗಳು ಕೂಡ ಕೋಪಗೊಂಡಿದ್ದರು.
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅಭಿಮಾನಿಗಳು ಹಾರ್ದಿಕ್ ಪಾಂಡ್ಯರನ್ನು ಗೇಲಿ ಮಾಡಿದ್ದರು. ನಾಯಕನಾದ ಬಳಿಕ ಮುಂಬೈ ಇಂಡಿಯನ್ಸ್ ತಂಡ ಸತತವಾಗಿ ಮೂರು ಪಂದ್ಯಗಳನ್ನು ಸೋತಿರುವುದು ತಂಡದ ಚಿಂತೆ ಹೆಚ್ಚಿಸಿದೆ.
ಇನ್ನೂ ಮೊದಲ ಗೆಲುವಿನ ಹುಡುಕಾಟದಲ್ಲಿದ್ದು ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಗೆದ್ದು, ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ.
ಪಾಂಡ್ಯ ಖುಷಿ ಹೆಚ್ಚಿಸಿದ ಸೂರ್ಯಕುಮಾರ್
ಸಂಕಷ್ಟದ ಸಮಯದಲ್ಲೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಖುಷಿ ಸುದ್ದಿ ಸಿಕ್ಕಿದೆ. ಪ್ರಮುಖ ಬ್ಯಾಟರ್ ಸೂರ್ಯಕುಮಾರ್ ಯಾದವ್ ಫಿಟ್ ಆಗಿದ್ದು ಈಗಾಗಲೇ ತಂಡವನ್ನು ಸೇರಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಸೂರ್ಯ ಕಳೆದ ಮೂರು ಪಂದ್ಯಗಳನ್ನು ಕಳೆದುಕೊಂಡಿದ್ದರು.
ಶುಕ್ರವಾರ ಮುಂಬೈನಲ್ಲಿ ತಂಡವನ್ನು ಸೇರಿಕೊಂಡಿರುವ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದು ತಂಡದ ಬ್ಯಾಟಿಂಗ್ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ. ಬೌಲಿಂಗ್ನಲ್ಲಿ ಬದಲಾವಣೆ ಮಾಡಲು ಪಾಂಡ್ಯಗೆ ಅವಕಾಶಗಳನ್ನು ಕೊಡುತ್ತದೆ.
ಸೂರ್ಯಕುಮಾರ್ ಆಗಮನ, ಸೋಮನಾಥನ ದರ್ಶನ ಹಾರ್ದಿಕ್ ಪಾಂಡ್ಯ ಅವರ ಸೋಲಿನ ಸರಪಳಿಯನ್ನು ಮುರಿಯಲು ಸಹಕಾರಿಯಾಗುತ್ತದಾ ಎನ್ನುವ ಪ್ರಶ್ನೆಗೆ ಉತ್ತರ ಭಾನುವಾರ ಸಿಗಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications