MI Vs CSK: ರೋಹಿತ್ ಶರ್ಮಾ ಶತಕ ವ್ಯರ್ಥ; ಸಿಎಸ್ಕೆ ತಂಡಕ್ಕೆ 20 ರನ್ಗಳ ಗೆಲುವು
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್ಗಳ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಶತಕ ಸಿಡಿಸಿದರೂ ಮುಂಬೈ ಗೆಲುವಿನ ಗೆರೆ ದಾಟುವಲ್ಲಿ ವಿಫಲವಾಯಿತು.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಅಜಿಂಕ್ಯ ರಹಾನೆ 5 ರನ್ ಗಳಿಸಿದರೆ, ರಚಿನ್ ರವೀಂದ್ರ 21 ರನ್ ಗಳಿಸಿದರು.

ನಾಯಕ ರುತುರಾಜ್ ಗಾಯಕ್ವಾಡ್ 40 ಎಸೆತಗಳಲ್ಲಿ 69 ರನ್ ಗಳಿಸಿದರೆ, ಶಿವಂ ದುಬೆ 38 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ ಬ್ಯಾಟಿಂಗ್ಗೆ ಬಂದ ಎಂಎಸ್ ಧೋನಿ ಕೇವಲ 5 ಎಸೆತಗಳಲ್ಲಿ 20 ರನ್ ಸಿಡಿಸಿ ಅಬ್ಬರಿಸಿದರು. ಸತತ ಮೂರು ಸಿಕ್ಸರ್ ಸಿಡಿಸಿದ ಅವರು ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದರು.
ರೋಹಿತ್ ಶತಕ, ಪತಿರಾನ ಮಿಂಚು
207 ರನ್ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ ಉತ್ತಮ ಆರಂಭ ಪಡೆಯಿತು. 7.1 ಓವರ್ ಗಳಲ್ಲಿ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಮೊದಲ ವಿಕೆಟ್ಗೆ 70 ರನ್ ಕಲೆಹಾಕಿದರು. ಆದರೆ ಮತೀಶ ಪತಿರಾನ ಮುಂಬೈ ವೇಗಕ್ಕೆ ಬ್ರೇಕ್ ಹಾಕಿದರು. ಒಂದೇ ಓವರ್ ನಲ್ಲಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಪಡೆದು ಮುಂಬೈಗೆ ಆಘಾತ ನೀಡಿದರು.
ತಿಲಕ್ ವರ್ಮಾ 31 ರನ್, ಹಾರ್ದಿಕ್ ಪಾಂಡ್ಯ 2 ರನ್, ಟಿಮ್ ಡೇವಿಡ್ 13 ರನ್, ರೊಮಾರಿಯೋ ಶೆಫರ್ಡ್ 1 ರನ್, ಮೊಹಮ್ಮದ್ ನಬಿ ಅಜೇಯ 4 ರನ್ ಗಳಿಸಿದರು. ರೋಹಿತ್ ಶರ್ಮಾ 63 ಎಸೆತಗಳಲ್ಲಿ 11 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 103 ರನ್ ಗಳಿಸಿದರೂ ತಂಡದ ಸೋಲು ತಪ್ಪಿಸಲು ಆಗಲಿಲ್ಲ.
ಮತೀಶ ಪತಿರಾನ 4 ಓವರ್ ಗಳಲ್ಲಿ 28 ರನ್ ನೀಡಿ 4 ವಿಕೆಟ್ ಪಡೆದು ಮುಂಬೈ ಬ್ಯಾಟಿಂಗ್ ಪಡೆಗೆ ಆಘಾತ ಕೊಟ್ಟರು. ತುಷಾರ್ ದೇಶಪಾಂಡೆ ಮತ್ತು ಮುಸ್ತಾಫಿಜುರ್ ರೆಹಮಾನ್ ತಲಾ ಒಂದು ವಿಕೆಟ್ ಪಡೆದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications