PBKS vs MI: ಮುಂಬೈ ಇಂಡಿಯನ್ಸ್ಗೆ ಪಂಜಾಗ್ ಕಿಂಗ್ಸ್ ಸವಾಲು; ಆರ್ಸಿಬಿ ವಿರುದ್ಧ ಫೈನಲ್ ಆಡೋದ್ಯಾರು?
ಐಪಿಎಲ್ 2025ರ ಪಂದ್ಯಾವಳಿ ಕೊನೆಯ ಹಂತಕ್ಕೆ ಬಂದಿದೆ. ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಫೈನಲ್ಗೆ ಲಗ್ಗೆಯಿಟ್ಟಿದೆ. ಕ್ವಾಲಿಫೈಯರ್ 1 ರಲ್ಲಿ ಸೋತ ಪಂಜಾಬ್ ಕಿಂಗ್ಸ್ ಇದೀಗ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.
ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಪ್ಲೇಆಫ್ ಪ್ರವೇಶಿಸಿತ್ತು. ಆದರೆ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್ ಸಿಬಿ ಮಾರಕ ಬೌಲಿಂಗ್ ಎದುರು ತತ್ತರಿಸಿದ್ದು 101 ರನ್ಗಳಿಗೆ ಆಲೌಟ್ ಆಗಿತ್ತು. ಆರ್ ಸಿಬಿ ಸುಲಭ ಗೆಲುವು ಪಡೆಯುವ ಮೂಲಕ ಫೈನಲ್ ತಲುಪಿತ್ತು.

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಗುಜರಾತ್ ಟೈಟಾನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯ ಆಡಿದ ಮುಂಬೈ ಇಂಡಿಯನ್ಸ್ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವು ಸಾಧಿಸಿ ಕ್ವಾಲಿಫೈಯರ್ 2 ಆಡಲು ಸಜ್ಜಾಗಿದೆ. ಮುಲ್ಲನ್ಪುರದಲ್ಲಿ ಗೆಲುವು ಪಡೆದ ಬಳಿಕ ಅಹಮದಾಬಾದ್ನಲ್ಲಿ ಕ್ವಾಲಿಫೈಯರ್ 2 ಆಡಲು ಸಜ್ಜಾಗಿದ್ದು ಈ ಪಂದ್ಯ ಗೆದ್ದು ಫೈನಲ್ ತಲುಪಲು ಎರಡೂ ತಂಡಗಳ ಕಾದಾಡಲಿವೆ.
ಅನುಭವಿ ತಂಡ ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್ ತಂಡದಲ್ಲಿ ಅನುಭವಿಗಳ ದಂಡೇ ಇದೆ. 5 ಬಾರಿ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಗೆಲುವಿನ ಮೂಲಕ ಬಂದಿರುವುದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಜಸ್ಪ್ರೀತ್ ಬುಮ್ರಾ ಅವರ ಪ್ರಮುಖ ಅಸ್ತ್ರವಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಮುಂಬೈನ ಬ್ಯಾಟಿಂಗ್ನ ಆಧಾರಸ್ಥಂಬವಾಗಿದ್ದಾರೆ.
ಕ್ವಾಲಿಫೈಯರ್ 2 ಹೋರಾಟವು ದಾಖಲೆ ಮುರಿಯುವ ಹೋರಾಟವಾಗಿರುತ್ತದೆ. ಪಂಜಾಬ್ ತನ್ನ ಮೊದಲ ಐಪಿಎಲ್ ಟ್ರೋಫಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಕಳೆದ 17 ಋತುಗಳಲ್ಲಿ, ಕೇವಲ 7 ತಂಡಗಳು ಪ್ರಶಸ್ತಿಯನ್ನು ಗೆದ್ದಿವೆ. ಶ್ರೇಯಸ್ ಅಯ್ಯರ್ ಕಳೆದ ವರ್ಷ ಕೆಕೆಆರ್ ತಂಡದ ನಾಯಕನಾಗಿ ಟ್ರೋಫಿಯನ್ನು ಗೆದ್ದ ಬಳಿಕ ಪಂಜಾಬ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡುವ ವಿಶ್ವಾಸದಲ್ಲಿದ್ದಾರೆ.
ಹಾರ್ದಿಕ್ ಪಾಂಡ್ಯ ಪ್ರಮುಖ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. 2022 ರಲ್ಲಿ ಗುಜರಾತ್ ಟೈಟಾನ್ಸ್ ನಾಯಕನಾಗಿ ಮೊದಲ ಆವೃತ್ತಿಯಲ್ಲೇ ಚಾಂಪಿಯನ್ ಆಗಿದ್ದರು. ಈಗ, ಅವರು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮುಂಬೈ ಇಂಡಿಯನ್ಸ್ ತಂಡ ಪ್ರಶಸ್ತಿ ಗೆದ್ದರೆ 6ನೇ ಬಾರಿ ಟ್ರೋಫಿ ಗೆದ್ದಂತಾಗುತ್ತದೆ. ಸಿಎಸ್ಕೆ ತಂಡದ ದಾಖಲೆಯನ್ನು ಮುರಿದು ಐಪಿಎಲ್ನ ಯಶಸ್ವೀ ತಂಡ ಎನಿಸಿಕೊಳ್ಳಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications