MI Vs RR IPL 2026: ರಾಜಸ್ಥಾನ್ ರಾಯಲ್ಸ್ - ಮುಂಬೈ ಇಂಡಿಯನ್ಸ್ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಭೀತಿ
MI Vs RR IPL 2026: ಗುವಾಹಟಿಯ ಬರ್ಸಾಪಾರ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್ 19ನೇ ಆವೃತ್ತಿಯ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಈ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹಾಗಾದ್ರೆ, ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗುವಾಹಟಿಯ ಬರ್ಸಾಪಾರ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 7) ಸಂಜೆ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಅಭಿಮಾನಿಗಳಲ್ಲಿ ಸಣ್ಣದೊಂದು ಆತಂಕ ಮನೆಮಾಡಿದೆ. ಅದಕ್ಕೆ ಕಾರಣ ವರುಣ ದೇವ.

ಆರ್ಆರ್-ಮುಂಬೈ ಪಂದ್ಯಕ್ಕೆ ಮಳೆ ಭೀತಿ
ಸೋಮವಾರವಷ್ಟೇ ಈಡನ್ ಗಾರ್ಡನ್ಸ್ನಲ್ಲಿ ನಡೆಯಬೇಕಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ಕೇವಲ 3.4 ಓವರ್ಗಳಿಗೆ ಅಂತ್ಯಗೊಂಡು ರದ್ದಾಗಿತ್ತು. ಈಗ ಗುವಾಹಟಿಯಲ್ಲೂ ಅಂತಹದ್ದೇ ವಾತಾವರಣ ನಿರ್ಮಾಣವಾಗಿದೆ. ಅಕ್ಯುವೆದರ್ ವರದಿಯ ಪ್ರಕಾರ, ಇಂದು ಗುವಾಹಟಿಯಲ್ಲಿ ಮಳೆಯಾಗುವ ಸಾಧ್ಯತೆ ಶೇಕಡ 75 ರಷ್ಟಿದೆ.
ಅಗ್ರಸ್ಥಾನದ ಮೇಲೆ ಕಣ್ಣಿಟ್ಟ ರಾಜಸ್ಥಾನ್
ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ ಟಾಸ್ ಪ್ರಕ್ರಿಯೆ ವಿಳಂಬವಾಗಬಹುದು ಅಥವಾ ಪಂದ್ಯಕ್ಕೆ ಅಡ್ಡಿಯಾಗಬಹುದು. ತಡರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇರುವುದರಿಂದ ಪಂದ್ಯ ಪೂರ್ಣಗೊಳ್ಳುವ ಬಗ್ಗೆ ಅನುಮಾನಗಳಿವೆ. ರಾಜಸ್ಥಾನ್ ರಾಯಲ್ಸ್ ಪ್ರಸ್ತುತ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ, ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಹೀಗಾಗಿ ಆರ್ಆರ್ ತಂಡದ ಅಭಿಮಾನಿಗಳು ಸಂಪೂರ್ಣ ಪಂದ್ಯ ನಡೆಯಲಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡಕ್ಕೆ ಹಾರ್ದಿಕ್ ಕಮ್ಬ್ಯಾಕ್
ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಗೆದ್ದು ಎರಡನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ 6ನೇ ಸ್ಥಾನದಲ್ಲಿದೆ. ತಂಡಕ್ಕೆ ಶುಭ ಸುದ್ದಿಯೆಂದರೆ, ಅನಾರೋಗ್ಯದಿಂದ ಕಳೆದ ಪಂದ್ಯ ತಪ್ಪಿಸಿಕೊಂಡಿದ್ದ ನಾಯಕ ಹಾರ್ದಿಕ್ ಪಾಂಡ್ಯ ಈಗ ಸಂಪೂರ್ಣ ಫಿಟ್ ಆಗಿದ್ದಾರೆ. ಅವರು ಇಂದಿನ ಪಂದ್ಯದಲ್ಲಿ ಆಡುವುದು ಖಚಿತ ಎಂದು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ತಿಳಿಸಿದ್ದಾರೆ.
ಮಳೆಯಿಂದ ಪಂದ್ಯ ರದ್ದಾದ್ರೆ ಮುಂದಿನ ನಿಲುವೇನು?
ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಅಥವಾ ಫಲಿತಾಂಶ ಬರದಿದ್ದರೆ, ಐಪಿಎಲ್ ನಿಯಮದಂತೆ ಎರಡೂ ತಂಡಗಳಿಗೆ ತಲಾ 1 ಅಂಕವನ್ನು ನೀಡಲಾಗುತ್ತದೆ. ಪೂರ್ಣ ಪ್ರಮಾಣದ 20 ಓವರ್ಗಳ ಪಂದ್ಯವನ್ನು ನೋಡಲು ಕ್ರಿಕೆಟ್ ಪ್ರೇಮಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಅಲ್ಲದೆ, ಮಳೆರಾಯನ ಅಡ್ಡಿಯಾಗದಿರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.
-
RCB vs CSK: ಆರ್ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್ಕೆ; ಪಕ್ಕಾ ಪ್ಲೇಯಿಂಗ್ 11 ಹೀಗಿದೆ ನೋಡಿ -
RCB: ಆರ್ಸಿಬಿ ಬೆಸ್ಟ್ ಫಿನಿಶರ್ ಹೆಸರು ರಿವೀಲ್ ಮಾಡಿದ ನಾಯಕ ರಜತ್ ಪಾಟಿದಾರ್ -
ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ: 200 ವಿಕೆಟ್ ಕಿತ್ತು ಇತಿಹಾಸ ನಿರ್ಮಿನಿಸಿದ ಆರ್ಸಿಬಿ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್ -
ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಸಿ ಸಿಎಸ್ಕೆಗೆ ರೆಡ್ ಅಲರ್ಟ್ ನೀಡಿದ ಆರ್ಸಿಬಿ -
RCB Playing 11 Prediction: ಸಿಎಸ್ಕೆ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
ಗ್ರೌಂಡ್ನಲ್ಲಿ ಪಂತ್ ಅಬ್ಬರ, ಗ್ಯಾಲರಿಯಲ್ಲಿ ತಿರುಪತಿ ತಿಮ್ಮಪ್ಪನಿಗೆ ಗೋಯೆಂಕಾ ಪ್ರಾರ್ಥನೆ; ವೈರಲ್ -
ಚಿನ್ನಸ್ವಾಮಿಯಲ್ಲಿ ರಾರಾಜಿಸಿದ ಕರ್ನಾಟಕ ಕ್ರಿಕೆಟ್ ದಿಗ್ಗಜರ ಹೆಸರು; ಕನ್ನಡ ಮಣ್ಣಿನ ಮಕ್ಕಳಿಗೆ ಕೆಎಸ್ಸಿಎ ವಿಶೇಷ ಗೌರವ -
ಕೆಕೆಆರ್ - ಪಂಜಾಬ್ ಕಿಂಗ್ಸ್ ಪಂದ್ಯಕ್ಕೆ ಮಳೆ ಅಡ್ಡಿ; ಎರಡೂ ತಂಡಗಳಿಗೆ ತಲಾ ಒಂದು ಅಂಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
IPL ವಿಐಪಿ ಟಿಕೆಟ್ ದುರ್ಬಳಕೆ ಆಗಿಲ್ಲ: ಶಾಸಕರ ಕುಟುಂಬಸ್ಥರು ಪಂದ್ಯ ನೋಡಿದರೆ ತಪ್ಪೇನು; ಪರಮೇಶ್ವರ್ ಪ್ರಶ್ನೆ












Click it and Unblock the Notifications