BCCI New President: ಬಿಸಿಸಿಐಗೆ ನೂತನ ಅಧ್ಯಕ್ಷರ ನೇಮಕ
BCCI New President: ಭಾರತ ಕ್ರಿಕೆಟ್ ನಿಂಯತ್ರಣ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ಅವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೆ, ಇವರ ಹಿನ್ನೆಲೆ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತ ಕ್ರಿಕೆಟ್ ನಿಂಯತ್ರಣ ಮಂಡಳಿ (ಬಿಸಿಸಿಐ)ಯ ಸರ್ವಸದಸ್ಯರ ಸಭೆ ನಡೆದಿದ್ದು, ಈ ವೇಳೆ 45 ವರ್ಷ ವಯಸ್ಸಿನ ಮಿಥುನ್ ಮನ್ಹಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಿಥುನ್ ಮನ್ಹಾಸ್ ಅವರು 1997-98ರಿಂದ 2016-17 ರವರೆಗೆ 157 ಪ್ರಥಮ ದರ್ಜೆ, 130 ಲಿಸ್ಟ್ ಎ ಮತ್ತು 55 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದಾರೆ. ಇವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 27 ಶತಕ ಸಹಿತ 9,714 ರನ್ ಸಿಡಿಸಿದ್ದಾರೆ. ಅಲ್ಲದೆ, ಲಿಸ್ಟ್ ಎ ಮತ್ತು 55 ಐಪಿಎಲ್ ಪಂದ್ಯಗಳಲ್ಲಿ ಆಡಿದ್ಧಾರೆ.
ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 27 ಶತಕ ಸಹಿತ 9,714 ರನ್ಗಳನ್ನು ಕಲೆಹಾಕಿದ್ದು, ಜೊತೆಗೆ ಲಿಸ್ಟ್ ಎ ಪಂದ್ಯಗಳಲ್ಲಿ 4,126 ರನ್ ಕಲೆಹಾಕಿದ್ದಾರೆ. ಇನ್ನೂ ಇದೀಗ ಇವರು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಆಗಿದ್ದಾರೆ. ಇದಕ್ಕೂ ಮುಂಚೆ ಬಿಸಿಸಿಐ ರೋಜರ್ ಬಿನ್ನಿ ಅವರು ಈ ಸ್ಥಾನದಲ್ಲಿದ್ದು, ಅವರ ಅವಧಿ ಆಗಸ್ಟ್ನಲ್ಲಿ ಮುಕ್ತಾಯ ಆಗಿತ್ತು. ಇವರ ಸ್ಥಾನಕ್ಕೆ ಇದೀಗ ಮಿಥುನ್ ಮನ್ಹಾಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಿಥುನ್ ಮನ್ಹಾಸ್ ದೀರ್ಘ ಮತ್ತು ಯಶಸ್ವಿ ಕ್ರಿಕೆಟ್ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು 1997/98 ಋತುವಿನಲ್ಲಿ ದೆಹಲಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದರೆ, ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್ರಂತಹ ಬ್ಯಾಟ್ಸ್ಮನ್ಗಳು ಆ ಸಮಯದಲ್ಲಿ ತಂಡದ ಭಾಗ ಆಗಿರುವುದರಿಂದ, ಅವರ ಪ್ರಾಬಲ್ಯದ ಮುಂದೆ ಭಾರತೀಯ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯ ಆಗಲಿಲ್ಲ.
ಇದರ ಹೊರತಾಗಿಯೂ ದೇಶೀಯ ಕ್ರಿಕೆಟ್ನಲ್ಲಿ ಪ್ರಮುಖ ಆಟಗಾರನಾಗಿ ಮನ್ಹಾಸ್ ತಮ್ಮನ್ನು ತಾವು ಗುರುತಿಸಿಕೊಂಡರು. ಬಳಿಕ ದೆಹಲಿ ರಣಜಿ ತಂಡದ ನಾಯಕರಾಗಿದ್ದರು. ವಿರಾಟ್ ಕೊಹ್ಲಿ ತಮ್ಮ ಆರಂಭಿಕ ದಿನಗಳಲ್ಲಿ ಮನ್ಹಾಸ್ ಅವರ ನಾಯಕತ್ವದಲ್ಲೇ ಆಡಿದ್ದರು. 2007-08ರ ರಣಜಿ ಟ್ರೋಫಿ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿ, 57.56 ಸರಾಸರಿಯಲ್ಲಿ 921 ರನ್ ಗಳಿಸಿದ್ದು, ಆ ಋತುವಿನಲ್ಲಿ ದೆಹಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಮನ್ಹಾಸ್ 2015ರಲ್ಲಿ ತಮ್ಮ ತವರು ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿದರು. ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 157 ಪಂದ್ಯಗಳು, 9,714 ರನ್ಗಳು ಮತ್ತು 27 ಶತಕಗಳು ಸೇರಿವೆ. ಅಲ್ಲದೆ, ಅವರು 130 ಲಿಸ್ಟ್ ಎ ಪಂದ್ಯಗಳಲ್ಲಿ 4,126 ರನ್ಗಳು ಮತ್ತು 91 ಟಿ-20 ಪಂದ್ಯಗಳಲ್ಲಿ 1170 ರನ್ಗಳನ್ನು ಕಲೆ ಹಾಕಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications