Ind vs Nz: ಭಾರತ ತಂಡದಲ್ಲಿ ಒಂದು ಬದಲಾವಣೆ; ಕಣಕ್ಕಿಳಿಯಲು ಸಜ್ಜಾದ ಮಾರಕ ವೇಗಿ!
ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಕಠಿಣ ಅಭ್ಯಾಸ ನಡೆಸುತ್ತಿದೆ. ಭಾನುವಾರ (ಮಾರ್ಚ್, 2) ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಎರಡೂ ತಂಡಗಳು ಈಗಾಗಲೇ ಫೈನಲ್ ತಲುಪಿರುವುದರಿಂದ, ಇದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಾಗಿದೆ.
ಶುಕ್ರವಾರ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದ್ದು ಹಿರಿಯ ವೇಗಿ ಮೊಹಮ್ಮದ್ ಶಮಿ 7 ಅಥವಾ 8 ಓವರ್ ಮಾತ್ರ ಬೌಲಿಂಗ್ ಮಾಡಿದ್ದಾರೆ. ಶಮಿ ಬೌಲಿಂಗ್ ಮಾಡುವಾಗಲೇ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ ಎನ್ನುವುದು ಗೊತ್ತಾಗುತ್ತದೆ. ಶಮಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ, ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಅವರು ಕೆಲ ಸಮಯ ಹೊರಗಡೆ ಉಳಿದಿದ್ದರು. ಬಳಿಕ ಮೈದಾನಕ್ಕೆ ಬಂದಿದ್ದ ಅವರು 5 ಓವರ್ ಬೌಲಿಂಗ್ ಮಾಡಿದರೂ ವಿಕೆಟ್ ಪಡೆಯುವಲ್ಲಿ ವಿಫಲವಾದರು.

ತಂಡದಲ್ಲಿ ಬದಲಾವಣೆ?
ಪಿಟಿಐ ವರದಿ ಮಾಡಿರುವ ಪ್ರಕಾರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದ್ದು, ಅವರ ಬದಲಾಗಿ ಅರ್ಶದೀಪ್ ಸಿಂಗ್ ಆಡುವ ಸಾಧ್ಯತೆ ಇದೆ. ಶುಕ್ರವಾರ ಅರ್ಶದೀಪ್ ಸಿಂಗ್ ಐಸಿಸಿ ಅಕಾಡೆಮಿಯ ನೆಟ್ಸ್ನಲ್ಲಿ ಹೆಚ್ಚಿನ ಅಭ್ಯಾಸ ಮಾಡಿದರು. ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್ ಮಾರ್ಗದರ್ಶನದಲ್ಲಿ 13 ಓವರ್ ಬೌಲಿಂಗ್ ಮಾಡಿದರು.
ಮೊಹಮ್ಮದ್ ಶಮಿ ಬದಲಾಗಿ ಅರ್ಶದೀಪ್ ಸಿಂಗ್ ಆಡಲಿದ್ದಾರೆ ಎನ್ನುವ ಸುದ್ದಿಗೆ ಇದು ಮತ್ತಷ್ಟು ಬಲ ತುಂಬಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಗುಂಪು ಹಂತದ ಪಂದ್ಯ ಇದಾಗಿದ್ದು, ಸೆಮಿಫೈನಲ್ಗೆ ಮುನ್ನ ಬೆಂಚ್ ಕಾದಿರುವ ಆಟಗಾರರಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧ ನೇರವಾಗಿ ಸೆಮಿಫೈನಲ್ಗೆ ತಂಡದಲ್ಲಿ ಬದಲಾವಣೆ ಮಾಡಿದರೆ ಪ್ರದರ್ಶನದ ಮೇಲೆ ಪರಿಣಾಮ ಬೀರುವ ಆತಂಕವಿದೆ.
ಮೊಹಮ್ಮದ್ ಶಮಿಗೆ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ಸಿಗುವುದರಿಂದ ಅವರು ಸೆಮಿಫೈನಲ್ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್ ಆಗಬಹುದು. ಅರ್ಶದೀಪ್ ಸಿಂಗ್ ಇನ್ನೂ ದುಬೈನಲ್ಲಿ ಪಂದ್ಯವನ್ನು ಆಡಿಲ್ಲ. ನಾಳಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗಬಹುದು.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications