Mohammed Shami: ಸಾನಿಯಾ ಮಿರ್ಜಾ ಜೊತೆ ಮದುವೆ ವದಂತಿ ಬಗ್ಗೆ ಮೊಹಮ್ಮದ್ ಶಮಿ ಹೇಳಿದ್ದೇನು?
ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಮತ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ ಮದುವೆ ಬಗ್ಗೆ ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಲೇ ಇರುತ್ತದೆ. ಇದರ ಬಗ್ಗೆ ಸಾನಿಯಾ ಮಿರ್ಜಾ ಅವರ ತಂದೆ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ.
ಮೊಹಮ್ಮದ್ ಶಮಿ ಪತ್ನಿಯಿಂದ ವಿಚ್ಛೇದನ ಪಡೆದಿದ್ದರೆ, ಸಾನಿಯಾ ಮಿರ್ಜಾ ಕೂಡ ಶೋಯೆಬ್ ಮಲಿಕ್ರಿಂದ ವಿಚ್ಛೇದನ ಪಡೆದುಕೊಂಡಿದ್ದು ಮಗನ ಜೊತೆ ಜೀವನ ಮಾಡುತ್ತಿದ್ದಾರೆ. ಇಬ್ಬರೂ ವಿಚ್ಛೇದನ ಪಡೆದುಕೊಂಡು ಒಂಟಿಯಾಗಿದ್ದು, ಮದುವೆಯಾಗಲಿದ್ದಾರೆ ಎನ್ನುವ ಸಂಗತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಮೊಹಮ್ಮದ್ ಶಮಿ ಸ್ಪಷ್ಟನೆ
ಸಾನಿಯಾ ಮಿರ್ಜಾ ಜೊತೆಗಿನ ವಿವಾಹದ ಬಗ್ಗೆ ಮೊಹಮ್ಮದ್ ಶಮಿ ಸ್ಪಷ್ಟನೆ ಕೊಟ್ಟಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳ ಬಗ್ಗೆ ಕಿಡಿಕಾರಿದ್ದಾರೆ.
ಯೂಟ್ಯೂಬ್ನಲ್ಲಿ ಶುಭಂಕರ್ ಮಿಶ್ರಾ ಅವರೊಂದಿಗಿನ ಮಾತುಕತೆಯಲ್ಲಿ ಶಮಿ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ವದಂತಿಗಳ ಬಗ್ಗೆ ಶಮಿ ಅವರನ್ನು ಪ್ರಶ್ನೆ ಕೇಳಲಾಯಿತು ಮತ್ತು ಆನ್ಲೈನ್ನಲ್ಲಿ ಅಂತಹ ಸುದ್ದಿಗಳನ್ನು ಪ್ರಸಾರ ಮಾಡಲು ಕಾರಣರಾದವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು.
ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಸುಳ್ಳುಗಳನ್ನು ಹರಡುವುದನ್ನು ತಡೆಯುವಂತೆ ಜನರನ್ನು ಮೊಹಮ್ಮದ್ ಶಮಿ ಕೇಳಿಕೊಂಡಿದ್ದಾರೆ. ಅಂತಹ ಮೀಮ್ಗಳು ಮನರಂಜನೆಯನ್ನು ನೀಡಬಹುದಾದರೂ ಅವು ಹಾನಿಕಾರಕವೂ ಆಗಿರಬಹುದು ಎಂದು ಹೇಳಿದರು. ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಎಲ್ಲರೂ ಜವಾಬ್ದಾರಿಯಿಂದ ಇರಬೇಕು ಮತ್ತು ಇಂತಹ ಆಧಾರರಹಿತ ಸುದ್ದಿಗಳನ್ನು ಹರಡುವುದನ್ನು ತಡೆಯಬೇಕೆಂದು ಮನವಿ ಮಾಡುತ್ತೇನೆ ಎಂದರು.
ಇದು ವಿಚಿತ್ರವಾಗಿದೆ ಮತ್ತು ಕೆಲವು ವಿನೋದಕ್ಕಾಗಿ ಉದ್ದೇಶಪೂರ್ವಕವಾಗಿ ಮಾಡಲಾಗುತ್ತದೆ. ಆದರೆ ಏನು ಮಾಡಬಹುದು? ನಾನು ನನ್ನ ಫೋನ್ ಅನ್ನು ತೆರೆದರೆ ಆ ಮೀಮ್ಗಳನ್ನು ನೋಡಬಹುದು. ಅಂತಹ ಮೀಮ್ಗಳನ್ನು ಮೋಜಿಗಾಗಿ ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ, ಆದರೆ ಅವು ಬೇರೊಬ್ಬರ ಜೀವನಕ್ಕೆ ಸಂಬಂಧಿಸಿದ್ದರೆ, ನೀವು ಅದರ ಬಗ್ಗೆ ಯೋಚಿಸಬೇಕು ಮತ್ತು ನಂತರ ಅಂತಹ ವಿಷಯಗಳನ್ನು ಹಂಚಿಕೊಳ್ಳಬೇಕು ಎಂದು ಕೇಳಿಕೊಂಡಿದ್ದಾರೆ.
ಈ ರೀತಿ ಮಾಡುವ ಬದಲು ಏನಾದರು ಸಾಧನೆ ಮಾಡಲು ಪ್ರಯತ್ನಿಸಿ, ಜನರಿಗೆ ಸಹಾಯ ಮಾಡಿ ಮತ್ತು ನೀವು ಅಭಿವೃದ್ಧಿ ಹೊಂದಿರಿ ಆಮೇಲೆ ನಿಮ್ಮನ್ನು ಒಳ್ಳೆ ವ್ಯಕ್ತಿ ಎಂದು ಶಮಿ ಹೇಳಿದ್ದಾರೆ. ಹಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಗಾಳಿ ಸುದ್ದಿಗಳಿಗೆ ಶಮಿ ಸ್ಪಷ್ಟನೆ ಕೊಟ್ಟಿದ್ದು, ಅಂತಹ ಸುದ್ದಿಗಳನ್ನು ನಂಬದಂತೆ ಮನವಿ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications