ಬಾಂಗ್ಲಾ ಸರಣಿಗೆ ಭರ್ಜರಿ ತಯಾರಿ ನಡೆಸಿರುವ ಟೀಮ್ ಇಂಡಿಯಾ ಪೇಸರ್
ಟೀಮ್ ಇಂಡಿಯಾ ಬ್ಯೂಸಿ ಶೆಡ್ಯೂಲ್ ಹೊಂದಿದೆ. ಜಿಂಬಾಬ್ವೆ ಪ್ರವಾಸದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ, ಈಗ ಮತ್ತೊಂದು ಸರಣಿಗೆ ಸನ್ನದ್ಧವಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಆರಂಭಿಸಲಿರುವ ಟೀಮ್ ಇಂಡಿಯಾ ಮತ್ತೊಂದು ಸರಣಿ ಗೆಲುವಿನ ಕನಸು ಕಾಣುತ್ತಿದೆ.
ಈ ನಡುವೆ ಟೀಮ್ ಇಂಡಿಯಾದ ಕೋಚ್ ನೂತನ ಕೋಚ್ ಗೌತಮ್ ಗಂಭೀರ್ ಅವರಿಗೂ ಇದು ಮೊದಲ ಪರೀಕ್ಷೆ. ಈ ಪರೀಕ್ಷೆಯಲ್ಲಿ ಗೌತಮ್ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸುವ ಅವಶ್ಯಕತೆ ಇದೆ. ಈ ಪ್ರವಾಸದ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಮ್ ಇಂಡಿಯಾದ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ತಂಡ ಸೇರುವ ಸಾಧ್ಯತೆ ಇದೆ.

ಗಾಯದಿಂದ ಶಮಿ ಚೇತರಿಕೆ
ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಬಳಿಕ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಗಾಯಕ್ಕೆ ತುತ್ತಾಗಿದ್ದರು. ಬಳಿಕ ಶಮಿ ಮೈದಾನಕ್ಕೆ ಇಳಿಯದೇ ತಿಂಗಳು ಗಳೇ ಕಳೆದಿವೆ. ಶಮಿ ಸ್ನಾಯು ಸೆಳೆತ ಹಾಗೂ ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಂಡು ಬಂದ ಬಳಿಕ ಈಗ ಕ್ರಮೇಣ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ.
ನೆಟ್ಸ್ನಲ್ಲಿ ಶಮಿ ಅಭ್ಯಾಸ
ನೆಟ್ಸ್ನಲ್ಲಿ ಶಮಿ ತಮ್ಮ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಈ ಮೂಲಕ ತಾವು ಮುಂದಿನ ಸರಣಿಗೆ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ಆಸೆಯನ್ನು ಹೊಂದಿರುವುದಾಗಿ ಖಚಿತ ಪಡಿಸಿದ್ದಾರೆ. ಸಣ್ಣ ಲೈನ್ ಅಪ್ ನೊಂದಿಗೆ ನೆಟ್ಸ್ನಲ್ಲಿ ಬೆವರು ಹೆರಿಸುತ್ತಿರುವ ಶಮಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.
ಇದಾದ ಬಳಿಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಡಿಯಲ್ಲಿ ಸಾಲು ಸಾಲು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ವೇಳೆ ತಂಡಕ್ಕೆ ಶಮಿ ಅವರ ಉಪಸ್ಥಿತಿ ತುಂಬ ಮುಖ್ಯವಾಗಿದೆ. ಹೀಗಾಗಿ ಶಮಿ ವೇಗವಾಗಿ ಚೇತರಿಸಿಕೊಂಡು, ಮತ್ತೆ ಹಳೆಯ ಖದರ್ನಲ್ಲಿ ಅಂಗಳಕ್ಕೆ ಮರಳ ಬೇಕು ಎಂಬುದೇ ಅಭಿಮಾನಿಗಳ ಆಶಯವಾಗಿದೆ.
ಏಕದಿನ ವಿಶ್ವಕಪ್ ಹಿರೋ
ಏಕದಿನ ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಶಮಿ ಎಲ್ಲರ ಚಿತ್ತ ಕದ್ದಿದ್ದರು. ಲೀಗ್ ಹಂತದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗಾಯಕ್ಕೆ ತುತ್ತಾಗುತ್ತಿದ್ದಂತೆ ಆಡುವ ಅವಕಾಶ ಪಡೆದ ಶಮಿ, ತಮ್ಮ ಸ್ವಿಂಗ್ ಬೌಲಿಂಗ್ ಮೂಲಕವೇ ತಂಡಕ್ಕೆ ನೆರವಾದರು. ಅಲ್ಲದೆ ಏಕದಿನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಏಳು ವಿಕೆಟ್ ಪಡೆದು ಮಿಂಚಿದ್ದರು.
ಫೈನಲ್ ಪಂದ್ಯದ ಬಳಿಕ ಶಮಿ ಗಾಯಕ್ಕೆ ತುತ್ತಾದ ಶಮಿ ಐಪಿಎಲ್ 2023ರಲ್ಲಿ ಆಡಿರಲಿಲ್ಲ. ಈ ವೇಳೆ ಅವರು ಚಿಕಿತ್ಸೆಗೆ ಒಳಗಾಗಿದ್ದರು. ಈಗ ಶಮಿ ನಿಧಾನವಾಗಿ ತಮ್ಮ ಲಯವನ್ನು ಕಂಡುಕೊಳ್ಳಲು ಪ್ಲ್ಯಾನ್ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಸದ್ಯದಲ್ಲೇ ಶಮಿ ಡ್ರೆಸ್ಸಿಂಗ್ ರೂಮ್ ಸೇರುವುದು ಫಿಕ್ಸ್.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications