Siraj-Rohit Sharma: ಪರಿಣಾಮಕಾರಿ ಬೌಲರ್ ಅಲ್ಲ ಎಂದಿದ್ದ ರೋಹಿತ್ ಶರ್ಮಾ ವಿಕೆಟ್ ಪಡೆದ ಸಿರಾಜ್
ಮೊಹಮ್ಮದ್ ಸಿರಾಜ್ ಪರಿಣಾಮಕಾರಿ ಬೌಲರ್ ಅಲ್ಲ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದರು. ಇದೇ ಕಾರಣಕ್ಕೆ ಅವರನ್ನು ಭಾರತ ತಂಡದಿಂದ ಕೈಬಿಡಲಾಗಿದೆ ಎಂದಿದ್ದರು. ಇದಕ್ಕೆ ಮೊಹಮ್ಮದ್ ಸಿರಾಜ್ ಅಂಕಿ ಅಂಶಗಳ ಸಮೇತ ಉತ್ತರ ಕೊಟ್ಟಿದ್ದರು. ನಾನು ಹೊಸ ಚೆಂಡು ಮಾತ್ರವಲ್ಲ ಹಳೆ ಚೆಂಡಿನಲ್ಲೂ ಪರಿಣಾಮಕಾರಿ ಬೌಲರ್ ಎಂದಿದ್ದರು.
ಆದರೂ ಮತ್ತೆ ಟೀಂ ಇಂಡಿಯಾಗೆ ವಾಪಸಾತಿ ಮಾಡಲು ಕೆಲಸ ಮಾಡುತ್ತೇನೆ ಎಂದಿದ್ದರು. ಅವರು ಪರಿಣಾಮಕಾರಿ ಎಂದು ತೋರಿಸಲು ಐಪಿಎಲ್ 2025 ಉತ್ತಮ ವೇದಿಕಯಾಗಿದೆ. ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಸಿರಾಜ್ , ಶನಿವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಚೆಂಡಿನಲ್ಲೇ ಉತ್ತರ ಕೊಟ್ಟರು.

ಶನಿವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 4 ಎಸೆತಗಳಲ್ಲಿ 8 ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ಗೆ ಎರಡು ಎಸೆತಗಳಲ್ಲಿ 8 ರನ್ ಗಳಿಸಿದ ಅವರು ನಾಲ್ಕನೇ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು.
ಮುಂಬೈ ಇಂಡಿಯನ್ಸ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಹಿತ್ ಶರ್ಮಾ ಸೊನ್ನೆಗೆ ಔಟಾಗಿದ್ದರು. ಖಲೀಲ್ ಅಹ್ಮದ್ ಬೌಲಿಂಗ್ನಲ್ಲಿ ಬೌಲ್ಡ್ ಆಗಿದ್ದರು.
ಟೀಂ ಇಂಡಿಯಾದಲ್ಲಿ ಸಿಗದ ಅವಕಾಶ
ಮೊಹಮ್ಮದ್ ಸಿರಾಜ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ತಂಡದ ಪ್ರಮುಖ ಬೌಲರ್ ಆಗಿದ್ದರು. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕೆಟ್ಟ ಪ್ರದರ್ಶನದ ಬಳಿಕ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಡಲಾಗಿತ್ತು. ಅದಾದ ಬಳಿಕ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೂ ಸಿರಾಜ್ ಅವರನ್ನು ತಂಡದಿಂದ ಹೊರಗಿಡಲಾಗಿತ್ತು. ಜಸ್ಪ್ರಿತ್ ಬುಮ್ರಾ ಅಲಭ್ಯರಾಗಿದ್ದರೂ ಸಿರಾಜ್ರನ್ನು ಕೈಬಿಟ್ಟಿದ್ದರ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆದಿತ್ತು.
ಐಪಿಎಲ್ ಮೆಗಾ ಹರಾಜಿಗೆ ಮುನ್ನ ಆರ್ ಸಿಬಿ ಸಿರಾಜ್ರನ್ನು ತಂಡದಿಂದ ಕೈಬಿಟ್ಟಿತ್ತು. ಆರ್ ಸಿಬಿ ತಂಡ ಮತ್ತು ವಿರಾಟ್ ಕೊಹ್ಲಿ ಜೊತೆ ಭಾವನಾತ್ಮಕ ಸಂಬಂಧ ಹೊಂದಿದ್ದ ಸಿರಾಜ್ ಮೆಗಾ ಹರಾಜಿನಲ್ಲಿ ಮತ್ತೆ ಆರ್ ಸಿಬಿ ಸೇರುವ ವಿಶ್ವಾಸದಲ್ಲಿದ್ದರು. ಆದರೆ ಮೆಗಾ ಹರಾಜಿನಲ್ಲಿ ಆರ್ ಸಿಬಿ ಸಿರಾಜ್ ಅವರಿಗೆ ಬಿಡ್ ಮಾಡಲೇ ಇಲ್ಲ. ಗುಜರಾತ್ ಟೈಟಾನ್ಸ್ 12.25 ಕೋಟಿ ರೂಪಾಯಿಗೆ ಅವರನ್ನು ಖರೀದಿ ಮಾಡಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications