MS Dhoni: ಐಪಿಎಲ್ 2024ರಲ್ಲಿ ಆಡುವ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಎಂಎಸ್ ಧೋನಿ
ಭಾರತ ಮಾಜಿ ನಾಯಕ ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದರೂ ಜನಪ್ರಿಯತೆ ಮಾತ್ರ ಹೆಚ್ಚಾಗುತ್ತಲೇ ಇದೆ, 2023ರ ಐಪಿಎಲ್ನಲ್ಲಿ ಧೋನಿ ಜನಪ್ರಿಯತೆ ಎಷ್ಟಿದೆ ಎನ್ನುವುದನ್ನು ಇಡೀ ಜಗತ್ತು ನೋಡಿದೆ. ಯಾವುದೇ ಮೈದಾನದಲ್ಲಿ ಧೋನಿ ಆಡಿದರೂ ಅವರಿಗೆ ಜನ ಅಪಾರ ಬೆಂಬಲ ನೀಡಿದ್ದರು.
2023ರ ಐಪಿಎಲ್ ನಂತರ ಧೋನಿ ನಿವೃತ್ತಿಯಾಗುತ್ತಾರೆ ಎಂದೇ ಎಲ್ಲರೂ ಅಂದುಕೊಂಡಿದ್ದರು, ಅಲ್ಲದೆ 42 ವರ್ಷದ ಧೋನಿ ಮೊಣಕಾಲು ನೋವಿನ ನಡುವೆಯೂ ಆಡುವ ಮೂಲಕ ತಂಡವನ್ನು ಚಾಂಪಿಯನ್ ಮಾಡಿದ್ದರು. ಐಪಿಎಲ್ ಬಳಿಕ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

ನಿವೃತ್ತಿ ಬಗ್ಗೆ ಇದುವರೆಗೂ ಯಾವ ಗುಟ್ಟೂ ಬಿಟ್ಟುಕೊಡದ ಧೋನಿ ಈಗ ನಿವೃತ್ತಿ ಬಗ್ಗೆ ಮಾತನಾಡಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಮುಂದಿನ ಐಪಿಎಲ್ನಲ್ಲಿ ಧೋನಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಬೆಂಗಳೂರಿನಲ್ಲಿ ಧೋನಿ ಹೇಳಿದ್ದೇನು?
ಅಕ್ಟೋಬರ್ 26, ಗುರುವಾರದಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧೋನಿ ಭಾಗವಹಿಸಿದ್ದರು ಮತ್ತು ನವೆಂಬರ್ ವೇಳೆಗೆ ಅವರು ಚೇತರಿಸಿಕೊಳ್ಳುತ್ತೇನೆ ಎಂದು ವೈದ್ಯರು ಹೇಳಿರುವುದಾಗಿ ಧೋನಿ ದೃಢಪಡಿಸಿದರು. ವಿಕೆಟ್ಕೀಪರ್ ಬ್ಯಾಟರ್ ತನ್ನ ಮೊಣಕಾಲು ಗಾಯ ಚೇತರಿಸಿಕೊಳ್ಳುತ್ತಿದ್ದು ಪುನರ್ವಸತಿ ಹಂತದ ಮೂಲಕ ಹೋಗುತ್ತಿರುವುದಾಗಿ ಹೇಳಿದರು.
Thala Dhoni provides update on playing IPL 2024 and his knee surgery! 😍💛💥@MSDhoni #MSDhoni #WhistlePodu pic.twitter.com/Nffu5Co2f1
— DHONI Era™ 🤩 (@TheDhoniEra) October 26, 2023
ಸಂದರ್ಶಕರು ಧೋನಿ ಅವರನನ್ನು ಕ್ರಿಕೆಟ್ನಿಂದ ನಿವೃತ್ತಿಯಾಗಿದ್ದಾರೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಮಾತ್ರ ನಿವೃತ್ತಿಯಾಗಿದ್ದೇನೆ ಎಂದು ನೆನಪಿಸಿದರು. ಎಂಎಸ್ ಧೋನಿ ಹೀಗೆ ಹೇಳುತ್ತಿದ್ದಂತೆ ಪ್ರೇಕ್ಷಕರು ಚಪ್ಪಾಳೆ ತಟ್ಟುವ ಮೂಲಕ ಸಂತಸ ವ್ಯಕ್ತಪಡಿಸಿದರು.
"ಮೊಣಕಾಲು ನೋವಿನಿಂದ ಚೇತರಿಸಿಕೊಂಡಿದ್ದೇನೆ, ರಿಹ್ಯಾಬ್ ಪ್ಯಾಚ್ ಮೂಲಕ ಹೋಗುತ್ತಿದೆ, ನವೆಂಬರ್ ವೇಳೆಗೆ ನೀವು ಹೆಚ್ಚು ಉತ್ತಮವಾಗುತ್ತೀರಿ ಎಂದು ವೈದ್ಯರು ನನಗೆ ಹೇಳಿದರು. ಆದರೆ ದೈನಂದಿನ ದಿನಚರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ" ಎಂದು ಧೋನಿ ಹೇಳಿದರು.
ಸಿಎಸ್ಕೆಯನ್ನು ಐದನೇ ಪ್ರಶಸ್ತಿಗೆ ಮುನ್ನಡೆಸಿದ ನಂತರ ಅವರ ಭವಿಷ್ಯದ ಬಗ್ಗೆ ಮೌನವನ್ನು ಮುರಿದು ಐಪಿಎಲ್ 2024 ರಲ್ಲಿ ಮರಳುವುದಾಗಿ ಧೋನಿ ತಮ್ಮ ಅಭಿಮಾನಿಗಳಿಗೆ ಭರವಸೆ ನೀಡಿದ್ದರು.
ಪ್ರಶಸ್ತಿ ಗೆದ್ದ ನಂತರ ಹೇಳಿದ್ದೇನು?
"ನಿವೃತ್ತಿ ಘೋಷಿಸಲು ಇದು ಉತ್ತಮ ಸಮಯ. ನನಗೆ ಸುಲಭವಾದ ವಿಷಯವೆಂದರೆ ಧನ್ಯವಾದ ಹೇಳುವುದು. ಆದರೆ ಸಿಎಸ್ಕೆ ಅಭಿಮಾನಿಗಳಿಂದ ನಾನು ಪಡೆದಿರುವ ಪ್ರೀತಿಯ ಪ್ರಮಾಣ, ಅವರಿಗೆ (ನನ್ನನ್ನು ನೋಡಿ) ಇನ್ನೂ ಒಂದು ಸೀಸನ್ನಲ್ಲಿ ಆಡಲು ಇದು ಉಡುಗೊರೆಯಾಗಿದೆ" ಎಂದು ಮೇನಲ್ಲಿ ಸಿಎಸ್ಕೆ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿದ ನಂತರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಧೋನಿ ಹೇಳಿದ್ದರು.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications