MS Dhoni: ಎಂಎಸ್ ಧೋನಿಗೆ ಶುರುವಾಯ್ತು ಸಂಕಷ್ಟ!
2025ರ ಐಪಿಎಲ್ನಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿರುವ ಎಂಎಸ್ ಧೋನಿಗೆ ಹೊಸ ಸಂಕಷ್ಟ ಎದುರಾಗಿದೆ. ರಾಂಚಿಯಲ್ಲಿರುವ ಅವರ ಮನೆಯನ್ನು ಅಧಿಕಾರಿಗಳು ಖಾಲಿ ಮಾಡಿಸುವ ಆತಂಕ ಎದುರಾಗಿದೆ. ಧೋನಿ ತಿಳಿಯದೇ ಮಾಡಿರುವ ಎಡವಟ್ಟಿನಿಂದ ಈಗ ಮನೆ ಖಾಲಿ ಮಾಡುವ ಭೀತಿ ಎದುರಿಸುತ್ತಿದ್ದಾರೆ. ಜಾರ್ಖಂಡ್ನ ರಾಂಚಿಯ ಹರ್ಮು ಹೌಸಿಂಗ್ ಕಾಲೋನಿಯಲ್ಲಿರುವ ಮನೆಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಬಂದಿದ್ದು ತನಿಖೆ ಆರಂಭಿಸಲಾಗಿದೆ.
ಭಾರತ ಕ್ರಿಕೆಟ್ ತಂಡದ ನಾಯಕನಾಗಿ ಆಟಗಾರನಾಗಿ ಅಮೋಘ ಸಾಧನೆ ಮಾಡಿದ ಎಂಎಸ್ ಧೋನಿಗೆ ಜಾರ್ಖಂಡ್ ಸರ್ಕಾರವು ಹರ್ಮು ಹೌಸಿಂಗ್ ಕಾಲೋನಿಯಲ್ಲಿ 6806 ಚದರ ಅಡಿ ವಿಸ್ತೀರ್ಣದ ಭೂಮಿಯನ್ನು ಉಡುಗೊರೆಯಾಗಿ ನೀಡಿತ್ತು. ಎಂಎಸ್ ಧೋನಿ ಹಲವು ದಿನ ಇಲ್ಲಿ ನಿರ್ಮಿಸಿದ್ದ ಮನೆಯಲ್ಲಿ ವಾಸಿಸುತ್ತಿದ್ದರು.

ಆದರೆ ಸಾರ್ವಜನಿಕ ಜೀವನದಿಂದ ದೂರ ಉಳಿಯಲು ನಿರ್ಧರಿಸಿದ್ದ ಅವರು ಅಂತಿಮವಾಗಿ ನಗರದ ಹೊರವಲಯದ ಸಿಮಾಲಿಯಾದಲ್ಲಿ ಸ್ಥಳಾಂತರವಾಗಲು ನಿರ್ಧರಿಸಿದರು. 2017ರಲ್ಲಿ ರಾಂಚಿಯ ಹೊರ ವಲಯದಲ್ಲಿ ತಮ್ಮ ಸ್ವಂತ ತೋಟದ ಮನೆ ನಿರ್ಮಿಸಿಕೊಂಡು ಅಲ್ಲೇ ವಾಸಿಸಲು ಆರಂಭಿಸಿದರು.
ಒಡಿಶಾ ಟಿವಿ ವರದಿ ಮಾಡಿರುವ ಪ್ರಕಾರ, ಧೋನಿ ತಮ್ಮ ತೋಟದ ಮನೆಗೆ ಸ್ಥಳಾಂತರವಾದ ಬಳಿಕ ಹರ್ಮು ಹೌಸಿಂಗ್ ಕಾಲೋನಿಯಲ್ಲಿರುವ ತಮ್ಮ ಆಸ್ತಿಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಅವರ ವಿರುದ್ಧ ತನಿಖೆ ಆರಂಭಿಸಲಾಗಿದೆ.
ಮುನ್ನೂರು ಜನರಿಗೆ ನೋಟಿಸ್
ಹರ್ಮು ಕಾಲೋನಿಯಲ್ಲಿ ಇದೇ ಆರೋಪದ ಮೇಲೆ 300 ಜನರಿಗೆ ನೋಟಿಸ್ ನೀಡಲಾಗಿದ್ದು ಇದರಲ್ಲಿ ಧೋನಿ ಕೂಡ ಒಬ್ಬರಾಗಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಾರ್ಖಂಡ್ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಸಂಜಯ್ ಲಾಲ್ ಪಾಸ್ವಾನ್ "ದೂರುಗಳನ್ನು ಸ್ವೀಕರಿಸಿದ್ದು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಪ ಸಾಬೀತಾದರೆ ಎಂಎಸ್ ಧೋನಿಗೆ ನೋಟಿಸ್ ನೀಡಲಾಗುವುದು" ಎಂದು ಹೇಳಿದ್ದಾರೆ.
ಜಾರ್ಖಂಡ್ ರಾಜ್ಯ ಹೌಸಿಂಗ್ ಬೋರ್ಡ್ ಎರಡನೇ ಬಾರಿಗೆ ಎಂಎಸ್ ಧೋನಿಗೆ ನೋಟಿಸ್ ಜಾರಿ ಮಾಡಿದೆ. 2015ರಲ್ಲಿ ಹರ್ಮು ಹೌಸಿಂಗ್ ಕಾಲೋನಿಯಲ್ಲಿ ತಮ್ಮ ಮೂಲ ಆಸ್ತಿಗೆ ಹೊಂದಿಕೊಂಡಂತೆ ಅಕ್ರಮವಾಗಿ ನಿವೇಶನ ಮಂಜೂರು ಮಾಡಿರುವ ಬಗ್ಗೆ ಕೂಡ ಅವರು ನೋಟಿಸ್ ಪಡೆದಿದ್ದರು.
ಐಪಿಎಲ್ನಲ್ಲಿ ಕಣಕ್ಕಿಳಿಯಲು ಸಿದ್ಧತೆ
2024ರ ಐಪಿಎಲ್ ಬಳಿಕ ಎಂಎಸ್ ಧೋನಿ ನಿವೃತ್ತಿ ಘೋಷಣೆ ಮಾಡುತ್ತಾರೆ ಎನ್ನಲಾಗಿತ್ತಾದರೂ, ಧೋನಿ ಅಭಿಮಾನಿಗಳಿಗಾಗಿ ಇನ್ನೊಂದು ಆವೃತ್ತಿಯಲ್ಲಿ ಆಡಲು ನಿರ್ಧರಿಸಿದ್ದಾರೆ. 2025ರ ಐಪಿಎಲ್ನಲ್ಲಿ ಧೋನಿ ಆಡುವುದು ಖಚಿತವಾಗಿದೆ. ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಧೋನಿಯನ್ನು ಸಿಎಸ್ಕೆ ರಿಟೇನ್ ಮಾಡಿದೆ.
43 ವರ್ಷದ ಎಂಎಸ್ ಧೋನಿ ಸದ್ಯ ಐಪಿಎಲ್ಗಾಗಿ ಫಿಟ್ ಆಗುತ್ತಿದ್ದಾರೆ. ಬಿಡುವಿನ ಸಮಯದಲ್ಲಿ ತೋಟದಲ್ಲಿ ಕಾಲ ಕಳೆಯುವ ಧೋನಿ ಹಲವು ಬೆಳೆಗಳನ್ನು ಕೂಡ ಬೆಳೆಯುತ್ತಾರೆ. ಕೋವಿಡ್ ಸಮಯದಲ್ಲಿ ಅವರು ತಮ್ಮ ಫಾರ್ಮ್ನಲ್ಲಿ ಸ್ಟ್ರಾಬೆರಿ ಬೆಳೆಯುವಲ್ಲಿ ಯಶಸ್ವಿಯಾಗಿದ್ದರು. ಐಪಿಎಲ್ನಲ್ಲಿ ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಅವರು, ಬಳಿಕ ಸಾರ್ವಜನಿಕ ಜೀವನದಿಂದ ದೂರವೇ ಉಳಿಯುತ್ತಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications