Rohit Sharma: ಮುಂಬೈ ಇಂಡಿಯನ್ಸ್ ತಂಡಕ್ಕೆ ವಿದಾಯ ಹೇಳ್ತಾರಾ ರೋಹಿತ್ ಶರ್ಮಾ? ಕುತೂಹಲ ಸೃಷ್ಟಿಸಿದ ವಿಡಿಯೋ
Rohit Sharma: ಐಪಿಎಲ್ 2025ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಇದುವರೆಗೂ ಆಡಿದ 3 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಗೆದ್ದಿದೆ. ಇನ್ನೆರಡರಲ್ಲಿ ಸೋಲನುಭವಿಸಿ ಪಾಯಿಂಟ್ಸ್ ಟೇಬಲ್ನಲ್ಲಿ ಸದ್ಯ ಆರನೇ ಸ್ಥಾನದಲ್ಲಿದೆ. ಅದರಲ್ಲೂ ಮುಂಬೈ ಪರ ಆಡಿದ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಪ್ರದರ್ಶನ ತೀವ್ರ ಕಳಪೆಯಾಗಿದೆ. ಇನ್ನು ಇಂದು (ಏಪ್ರಿಲ್ 4) ಎಲ್ಎಸ್ಜಿ ವಿರುದ್ಧ ಪಂದ್ಯಕ್ಕೂ ಮುನ್ನ ರೋಹಿತ್ ನೀಡಿದ ಹೇಳಿಕೆಯೊಂದು ಭಾರೀ ವೈರಲ್ ಆಗುತ್ತಿದೆ.
ಐಪಿಎಲ್ 2025ನೇ ಆವೃತ್ತಿಯಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಕಳಪೆ ಪ್ರದರ್ಶನ ನೀಡಿದ್ದು, ಮೂರು ಪಂದ್ಯಗಳಿಂದ ಕ್ರಮವಾಗಿ 0, 8 ಮತ್ತು 13 ರನ್ಗಳನ್ನು ಮಾತ್ರ ಗಳಿಸಿದ್ದಾರೆ. ಇನ್ನು ಇಂದು ಮುಂಬೈ ಇಂಡಿಯನ್ಸ್ ತಂಡವು ಕೆಲವೇ ಕ್ಷಣಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಾದಾಡಲಿದೆ.

ಪಂದ್ಯಕ್ಕೂ ಮುನ್ನ ಹಿಟ್ಮ್ಯಾನ್, ಎಲ್ಎಸ್ಜಿ ಮಾರ್ಗದರ್ಶಕ ಜಹೀರ್ ಖಾನ್ ಅವರೊಂದಿಗೆ ಮಾತನಾಡುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂಭಾಷಣೆಯ ಸಮಯದಲ್ಲಿ ರೋಹಿತ್ ಶರ್ಮಾ ಅವರು ನೀಡಿದ ಒಂದು ಹೇಳಿಕೆಯು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಎಲ್ಎಸ್ಜಿ ತಂಡದ ಮಾರ್ಗದರ್ಶಕ ಜಹೀರ್ ಖಾರ್ ಜೊತೆ ರೋಹಿತ್ ಶರ್ಮಾ ಮಾತುಕತೆ ನಡೆಸುತ್ತಿರುವ ವಿಡಿಯೋ ನೋಡಿದರೆ, ಅವರು ಇನ್ಮುಂದೆ ಮುಂಬೈ ಪರ ಆಡುವುದಿಲ್ಲವೇ ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಎದ್ದಿವೆ. ಅಲ್ಲದೆ, ರೋಹಿತ್ ಶರ್ಮಾ ಜಹೀರ್ ಖಾನ್ ಜೊತೆ ಮಾತನಾಡುತ್ತಿರುವಾಗ ಎಲ್ಎಸ್ಜಿ ನಾಯಕ ಪಂತ್ ರೋಹಿತ್ ಅವರನ್ನು ಭೇಟಿಯಾಗಿ ತಬ್ಬಿಕೊಂಡು ತಮಾಷೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಎಲ್ಎಸ್ಜಿ ಕೋಚ್ ಜಹೀರ್ ಖಾನ್ ನಡುವಿನ ಸಂಭಾಷಣೆ ವೇಳೆ ರೋಹಿತ್ ಶರ್ಮಾ ಅವರು, "ಜೋ ಜಬ್ ಕರ್ನಾ ಥಾ, ಮೈನೆ ಕಿಯಾ ಬರಾಬರ್ ಸೆ, ಅಬ್ ಮೇರೆಕೋ ಕುಚ್ ಕರ್ನೇ ಕಿ ಜರೂರತ್ ನಹೀ ಹೈ" ಎಂದು ಹೇಳಿದ್ಧಾರೆ. ಇದರ ಅರ್ಥ "ಏನು ಮಾಡಬೇಕೋ ಅದನ್ನು ನಾನು ಸರಿಯಾಗಿ ಮಾಡಿದ್ದೇನೆ, ಈಗ ನಾನು ಏನೂ ಮಾಡಬೇಕಾಗಿಲ್ಲ," ಅಂತಾ. ಈ ಹೇಳಿಕೆಯೇ ಇದೀಗ ಕುತೂಹಲ ಹುಟ್ಟುಹಾಕಿದೆ. ಅಲ್ಲದೆ ಅಭಿಮಾನಿಗಳಲ್ಲಿ ಗೊಂದಲವನ್ನು ಕೂಡ ಸೃಷ್ಟಿಸಿದೆ.
ರೋಹಿತ್ ಅವರ ಈ ಹೇಳಿಕೆಗೆ ಮುಂಬೈ ಇಂಡಿಯನ್ಸ್ ಅಭಿಗಳೇ ಅಸಮಾಧಾನ ವ್ಯಕ್ತಪಡಸಿದ್ದಾರೆ. ಕೆಲವರು ಅವರು ಉದ್ದೇಶಪೂರ್ವಕವಾಗಿ ಉತ್ತಮ ಪ್ರದರ್ಶನ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ.
ರೋಹಿತ್ ಬಗ್ಗೆ ಪೊಲಾರ್ಡ್ ಹೇಳಿದ್ದೇನು?: ರೋಹಿತ್ ಅವರ ಮೇಲಿನ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪೊಲಾರ್ಡ್, ಕೆಲವು ಬಾರಿ ಕಡಿಮೆ ಸ್ಕೋರ್ಗಳನ್ನು ಗಳಿಸಬಹುದು. ಆದರೆ, ನಿಮಗೆ ತಿಳಿದಿರುವಂತೆ, ಅವರು ಈಗ ತಮ್ಮ ಕ್ರಿಕೆಟ್ ಜೀವನವನ್ನು ಆನಂದಿಸುತ್ತಿದ್ದಾರೆ ಮತ್ತು ಕೆಲವು ಸಂದರ್ಭಗಳಲ್ಲಿ ಒತ್ತಡಕ್ಕೆ ಒಳಗಾಗದಿರಲು ಇಷ್ಟಪಡುತ್ತಿದ್ದಾರೆ. ಆದ್ದರಿಂದ ಒಂದೆರಡು ಪಂದ್ಯಗಳ ಕಡಿಮೆ ಸ್ಕೋರ್ ಕಲೆಹಾಕಿದ್ದಾರೆ ಅಷ್ಟೇ. ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ. ಅವರನ್ನು ಸುಮ್ಮನೆ ದೂರುವುದು ಬೇಡ. ಕ್ರಿಕೆಟ್ನಲ್ಲಿ ಹಲವು ಬಾರಿ ಯಶಸ್ವಿ ಆಗುವುದಕ್ಕಿಂತ ಹೆಚ್ಚಾಗಿ ವಿಫಲರಾಗುತ್ತೇವೆ ಎಂದು ಹೇಳಿದ್ದಾರೆ.
-
Viral Videlo: ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications