MI vs RR: ರಾಜಸ್ಥಾನದ ಪ್ಲೇಆಫ್ ಕನಸು ಅಂತ್ಯ; ಅಗ್ರಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
ಐಪಿಎಲ್ 2025ರ ಆವೃತ್ತಿಯಲ್ಲಿ ಮೊದಲ 5 ಪಂದ್ಯಗಳಲ್ಲಿ ಕೇವಲ 1 ಪಂದ್ಯ ಮಾತ್ರ ಗೆದ್ದಿದ್ದ ಮುಂಬೈ ಇಂಡಿಯನ್ಸ್ ಬಳಿಕ ಸತತವಾಗಿ 6 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಮುಂಚೂಣಿಯಲ್ಲಿದೆ. ಗುರುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 100 ರನ್ಗಳ ಭಾರಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.
ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಗೆಲುವು ಸಾಧಿಸಿದ್ದ ರಾಜಸ್ಥಾನ ರಾಯಲ್ಸ್ ಮುಂಬೈ ಇಂಡಿಯನ್ಸ್ ಅಬ್ಬರದ ಎದುರು ಶರಣಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ವೈಭವ್ ಸೂರ್ಯವಂಶಿ ಮುಂಬೈ ಇಂಡಿಯನ್ಸ್ ವಿರುದ್ಧ ಸೊನ್ನೆಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಬೃಹತ್ ಮೊತ್ತ ಕಲೆಹಾಕಿದ ಮುಂಬೈ ಇಂಡಿಯನ್ಸ್
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 217 ರನ್ ಕಲೆಹಾಕಿತು. ರೋಹಿತ್ ಶರ್ಮಾ ಮತ್ತು ರಿಯಾನ್ ರಿಕಲ್ಟನ್ ಇಬ್ಬರೂ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ಗೆ ಭರ್ಜರಿ ಆರಂಭ ಒದಗಿಸಿದರು.
ರಿಕಲ್ಟನ್ 38 ಎಸೆತಗಳಲ್ಲಿ 61 ರನ್ ಗಳಿಸಿದರೆ, ರೋಹಿತ್ ಶರ್ಮಾ 36 ಎಸೆತಗಳಲ್ಲಿ 53 ರನ್ ಗಳಿಸಿದರು. ಬಳಿಕ ಬಂದ ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ ಕೂಡ 23 ಎಸೆತಗಳಲ್ಲಿ 48 ರನ್ ಗಳಿಸಿ ಮಿಂಚಿದರು.
ಮುಂಬೈ ಬೌಲಿಂಗ್ ದಾಳಿಗೆ ಹೆದರಿದ ರಾಜಸ್ಥಾನ
ಕಳೆದ ಪಂದ್ಯದಲ್ಲಿ 15.5 ಓವರ್ ಗಳಲ್ಲೇ 210 ರನ್ಗಳನ್ನು ಚೇಸ್ ಮಾಡಿದ್ದ ರಾಜಸ್ಥಾನ ರಾಯಲ್ಸ್ ಇಂದೂ ಅದನ್ನೇ ಮರುಕಳಿಸುವ ವಿಶ್ವಾಸದಲ್ಲಿ ಕಣಕ್ಕಿಳಿಯಿತು. ಆದರೆ ಮುಂಬೈ ಇಂಡಿಯನ್ಸ್ ಮಾರಕ ಬೌಲಿಂಗ್ ಮುಂದೆ ರಾಜಸ್ಥಾನ ರಾಯಲ್ಸ್ ಬ್ಯಾಟರ್ ಗಳು ಹೆಚ್ಚು ಹೊತ್ತು ನಿಲ್ಲಲು ಆಗಲಿಲ್ಲ. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ವೈಭವ್ ಸೂರ್ಯವಂಶಿ ಸೊನ್ನೆಗೆ ಔಟಾದರೆ, ಯಶಸ್ವಿ ಜೈಸ್ವಾಲ್ 13 ರನ್ಗಳಿಗೆ ವಿಕೆಟ್ ಒಪ್ಪಿಸಿದರು.
ಜೋಫ್ರಾ ಆರ್ಚರ್ 30 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ 20 ರನ್ ಕೂಡ ಗಳಿಸಲಿಲ್ಲ. 16.1 ಓವರ್ ಗಳಲ್ಲಿ 117 ರನ್ ಗಳಿಸುವಲ್ಲಿ ರಾಜಸ್ಥಾನ ರಾಯಲ್ಸ್ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. 100 ರನ್ಗಳ ಭಾರಿ ಗೆಲುವಿನ ಮೂಲಕ ಮುಂಬೈ ಇಂಡಿಯನ್ಸ್ ರನ್ರೇಟ್ ಭರ್ಜರಿಯಾಗಿ ಏರಿಕೆಯಾಗಿದ್ದು, ಸದ್ಯ ಅಂಕಪಟ್ಟಿಯಲ್ಲಿ ಆರ್ ಸಿಬಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications