DC vs MI: ಕರುಣ್ ನಾಯರ್ ಅಬ್ಬರದ ನಡುವೆಯೂ ಮುಂಬೈ ಇಂಡಿಯನ್ಸ್ಗೆ ರೋಚಕ ಗೆಲುವು
ದೆಹಲಿಯ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಕೊನೆಗೂ ಈ ಆವೃತ್ತಿಯಲ್ಲಿ ಎರಡನೇ ಬಾರಿ ಗೆಲುವು ಸಾಧಿಸಿ ನಿಟ್ಟುಸಿರು ಬಿಟ್ಟಿದೆ. ಸತತ 4 ಪಂದ್ಯಗಳನ್ನು ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಸೋಲು ಕಂಡಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿತು. ರಿಯಾನ್ ರಿಕಲ್ಟನ್ 25 ಎಸೆತಗಳಲ್ಲಿ 41 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 40 ರನ್ ಗಳಿಸಿದರು. ತಿಲಕ್ ವರ್ಮಾ 33 ಎಸೆತಗಳಲ್ಲಿ 59 ರನ್ ಗಳಿಸಿದರೆ, ನಮನ್ ಧಿರ್ 17 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿದರು. ವಿಪ್ರಜ್ ನಿಗಮ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರು. ಮುಖೇಶ್ ಕುಮಾರ್ 1 ವಿಕೆಟ್ ಪಡೆದರು.

ಕರುಣ್ ನಾಯರ್ ಅಬ್ಬರದ ಬ್ಯಾಟಿಂಗ್
206 ರನ್ಗಳ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಎಸೆತದಲ್ಲೇ ಆರಂಭಿಕ ಬ್ಯಾಟರ್ ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರ ವಿಕೆಟ್ ಕಳೆದುಕೊಂಡಿತು. ಆದರೆ ಕರುಣ್ ನಾಯರ್ ಮತ್ತು ಅಭಿಷೇಕ್ ಪೊರೆಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು.
ಅಭಿಷೇಕ್ ಪೊರೆಲ್ 25 ಎಸೆತಗಳಲ್ಲಿ 33 ರನ್ ಗಳಿಸಿದರೆ, ಕರುಣ್ ನಾಯರ್ ಅಬ್ಬರಿಸಿದರು. ಮೂರು ವರ್ಷಗಳ ಬಳಿಕ ಮೊದಲ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶ ಪಡೆದ ಕರುಣ್ ನಾಯರ್, ಎರಡೂ ಕೈಗಳಿಂದ ಸಿಕ್ಕ ಅವಕಾಶ ಬಾಚಿಕೊಂಡರು. ಜಸ್ಪ್ರೀತ್ ಬುಮ್ರಾರಿಗೂ ಬೌಂಡರಿ ಸಿಕ್ಸರ್ ಬಾರಿಸಿ ಮುಂಬೈ ಇಂಡಿಯನ್ಸ್ಗೆ ದಂಗಾಗುವಂತೆ ಮಾಡಿದರು.
40 ಎಸೆತಗಳಲ್ಲೇ 12 ಬೌಂಡರಿ 5 ಭರ್ಜರಿ ಸಿಕ್ಸರ್ ಸಹಿತ 89 ರನ್ ಗಳಿಸಿದರು. ಶತಕ ಗಳಿಸುವ ಸನಿಹದಲ್ಲಿದ್ದ ಅವರು, ಸ್ಯಾಂಟ್ನರ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಹಾದಿ ಕಳೆದುಕೊಂಡಿತು. ಮುಂಬೈ ಇಂಡಿಯನ್ ಬೌಲರ್ ಗಳು ಉತ್ತಮ ಬೌಲಿಂಗ್ ಮಾಡುವ ಮೂಲಕ ಸತತವಾಗಿ ವಿಕೆಟ್ ಪಡೆದರು.
19ನೇ ಓವರ್ ನಲ್ಲಿ ಕೊನೆಯ ಮೂರು ಎಸೆತಗಳಲ್ಲಿ ಸತತ ಮೂರು ಆಟಗಾರರು ರನೌಟ್ ಆಗುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಸೋಲು ಕಂಡಿತು. ಮೂರು ಮಿಂಚಿನ ರನೌಟ್ ಮಾಡಿದ ಮುಂಬೈ ಇಂಡಿಯನ್ಸ್ 12 ರನ್ಗಳ ರೋಚಕ ಗೆಲುವು ಸಾಧಿಸಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications