ಬೆಂಗಳೂರಿನಲ್ಲಿ ಮುಂಬೈ-ಮಧ್ಯ ಪ್ರದೇಶ ತಂಡಗಳ ನಡುವೆ ರಣಜಿ ಫೈನಲ್ ಫೈಟ್
ಬೆಂಗಳೂರು, ಜೂನ್ 22; ಮಧ್ಯಪ್ರದೇಶ ಮತ್ತು ಮುಂಬೈ ತಂಡಗಳು ಬೆಂಗಳೂರಿನಲ್ಲಿ ಬುಧವಾರದಿಂದ ಆರಂಭವಾಗಲಿರುವ 2021-22ರ ರಣಜಿ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿವೆ.
ಪೃಥ್ವಿ ಶಾ ನೇತೃತ್ವದ ಮುಂಬೈ ತಂಡ ಟೂರ್ನಿಯನ್ನು ಗೆಲ್ಲುವ ನೆಚ್ಚಿನ ತಂಡವಾಗಿದೆ. 41 ಬಾರಿ ಚಾಂಪಿಯನ್ ಆಗಿರುವ ಮುಂಬೈ ತಂಡ ರಣಜಿ ಟ್ರೋಫಿ ಇತಿಹಾಸದ ಅತ್ಯಂತ ಯಶಸ್ವಿ ತಂಡವಾಗಿದೆ. ಆದರೂ ಮಧ್ಯ ಪ್ರದೇಶ ತಂಡವನ್ನೂ ಕೂಡ ಕಡೆಗಣಿಸುವ ಆಗಿಲ್ಲ. ಅದು ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಬೆಂಗಾಲ್ ತಂಡವನ್ನು 174 ರನ್ಗಳಿಂದ ಸೋಲುಣಿಸಿ ಫೈನಲ್ಗೆ ಪ್ರವೇಶಿಸಿದೆ.
ಮುಂಬೈ ತಂಡದಲ್ಲಿ ಸರ್ಫರಾಜ್ ಖಾನ್ ಪ್ರಚಂಡ ಫಾರ್ಮ್ನಲ್ಲಿದ್ದು, 5 ಪಂದ್ಯಗಳಲ್ಲಿ3 ಶತಕಗಳ ಸಹಿತ 803 ರನ್ಗಳಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಪೃಥ್ವಿ ಶಾ ನೇತೃತ್ವದ ಮುಂಬೈ ತಂಡ ಈ ಆವೃತ್ತಿಯ 50 ಓವರ್ಗಳ ವಿಜಯ್ ಹಜಾರೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ 2 ಆವೃತ್ತಿಗಳ ನಂತರ ನಡೆಯುತ್ತಿರುವ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.
ಇತ್ತ ಮಧ್ಯಪ್ರದೇಶ 1998-99ರ ನಂತರ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಹಿಮಾಂಶು ಮಂತ್ರಿ(165) ಮತ್ತು ಕುಮಾರ ಕಾರ್ತಿಕೇಯ 8 ವಿಕೆಟ್ ಪಡೆದು 24 ವರ್ಷಗಳ ಬಳಿಕ ತಮ್ಮ ರಾಜ್ಯ ತಂಡ ಫೈನಲ್ ಪ್ರವೇಶಿಸಲು ನೆರವಾಗಿದ್ದರು. ಈ ಆವೃತ್ತಿಯಲ್ಲಿ ಕಾರ್ತಿಕೇಯ 5 ಪಂದ್ಯಗಳಲ್ಲಿ 27 ವಿಕೆಟ್ ಪಡೆದು ಗರಿಷ್ಠ ವಿಕೆಟ್ ಪಡೆದ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಎಲ್ಲಿ?, ಯಾವಾಗ ನಡೆಯಲಿದೆ?; ಮುಂಬೈ-ಮಧ್ಯಪ್ರದೇಶ ನಡುವಿನ ಫೈನಲ್ ಪಂದ್ಯ ಜೂನ್ 22 ರಿಂದ -26ರವರೆಗೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ ಬೆಳಿಗ್ಗೆ 9:30ಕ್ಕೆ ಆರಂಭಗೊಳ್ಳಲಿದೆ. ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರಗೊಳ್ಳಲಿದೆ. ಹಾಟ್ ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications