Breaking: ಹಾಕಿ ಫೆಡರೇಶನ್ ಅಧ್ಯಕ್ಷ ನರೀಂದರ್ ಬಾತ್ರಾ ರಾಜೀನಾಮೆ
ನವದೆಹಲಿ, ಜುಲೈ 18: ಹಿರಿಯ ಕ್ರೀಡಾ ನಿರ್ವಾಹಕರಾದ ನರೀಂದರ್ ಬಾತ್ರಾ ಸೋಮವಾರ ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್ಐಎಚ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಸದಸ್ಯತ್ವವನ್ನೂ ತ್ಯಜಿಸಿದ್ದಾರೆ.
ನರೀಂದರ್ ಬಾತ್ರಾ ಅವರು ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಚುನಾವಣೆಗಳಲ್ಲಿ ಸ್ಪರ್ಧಿಸಿ 2017ರಲ್ಲಿ ಮತ್ತೆ ಗೆದ್ದುಕೊಂಡಿದ್ದ ಹಾಕಿ ಇಂಡಿಯಾದ 'ಲೈಫ್ ಮೆಂಬರ್' ಸ್ಥಾನವನ್ನು ಮೇ 25 ರಂದು ದೆಹಲಿ ಹೈಕೋರ್ಟ್ ರದ್ದುಗೊಳಿಸಿದಾಗ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ಮೂರು ಪ್ರತ್ಯೇಕ ಪತ್ರಗಳಲ್ಲಿ, ನರೀಂದರ್ ಬಾತ್ರಾ ಅವರು ಕ್ರಮವಾಗಿ IOA, IOC ಮತ್ತು FIH ಗೆ ಅಧಿಕೃತವಾಗಿ ರಾಜೀನಾಮೆ ನೀಡಿದರು.

"ವೈಯಕ್ತಿಕ ಕಾರಣಗಳಿಂದಾಗಿ ನಾನು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ನರೀಂದರ್ ಬಾತ್ರಾ ಎಫ್ಐಎಚ್ನ ಕಾರ್ಯಕಾರಿ ಮಂಡಳಿಗೆ ಪತ್ರ ಬರೆದಿದ್ದಾರೆ.
Recommended Video
ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಹೊತ್ತುಕೊಂಡಿರುವ ಬಾತ್ರ ಮೇಲೆ ಪ್ರಕರಣ ದಾಖಲಾಗಿದ್ದು, ಸಿಬಿಐ ತನಿಖೆ ನಡೆಸುತ್ತಿದೆ. ಸಿಬಿಐ ತಂಡ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ ವಾರಗಳ ನಂತರ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ಆ ಸಮಯದಲ್ಲಿ"ವಿಶ್ವ ಹಾಕಿಯು ಅತ್ಯಗತ್ಯ ಅಭಿವೃದ್ಧಿಯ ಹಂತದಲ್ಲಿ ಸಾಗುತ್ತಿರುವ ಸಮಯದಲ್ಲಿ, Hockey5s ಪ್ರಚಾರದೊಂದಿಗೆ, ಈ ವರ್ಷ ಹೊಸ ಸ್ಪರ್ಧೆಯ ಸೃಷ್ಟಿ - FIH ಹಾಕಿ ನೇಷನ್ಸ್ ಕಪ್ - ಮತ್ತು ಅಭಿಮಾನಿಗಳನ್ನು ತೊಡಗಿಸಿಕೊಳ್ಳುವ ವೇದಿಕೆಗಳು ಮತ್ತು ಚಟುವಟಿಕೆಗಳನ್ನು ಪ್ರಾರಂಭಿಸಬೇಕು. ಈ ಎಲ್ಲಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಬಾತ್ರಾ ಹೇಳಿಕೆಯಲ್ಲಿ ತಿಳಿಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications