ರಾಷ್ಟ್ರೀಯ ಕ್ರೀಡಾ ದಿನ 2022: 'ಹಾಕಿ ಮಾಂತ್ರಿಕ' ಧ್ಯಾನ್ ಚಂದ್ ಜನ್ಮ ವಾರ್ಷಿಕೋತ್ಸವ

ರಾಷ್ಟ್ರೀಯ ಕ್ರೀಡಾ ದಿನವನ್ನು ವಿವಿಧ ದೇಶಗಳಲ್ಲಿ ವಿವಿಧ ದಿನಾಂಕಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರನ್ನು ಅವರ ಜನ್ಮದಿನದಂದು ಗೌರವಿಸಲು ಪ್ರತಿ ವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಇದನ್ನು ರಾಷ್ಟ್ರೀಯ ಖೇಲ್ ದಿವಾಸ್ ಎಂದೂ ಕರೆಯುತ್ತಾರೆ. ಅಂತಾರಾಷ್ಟ್ರೀಯ ಫೀಲ್ಡ್ ಹಾಕಿಯಲ್ಲಿ ಭಾರತವು ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಲು, ಅವರ ಪ್ರತಿಭೆಗೆ ಸಹಾಯ ಮಾಡಿದ ಮಹಾನ್ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸಲು ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ.

ಕ್ರೀಡೆಯ ಮಹತ್ವವನ್ನು ಗುರುತಿಸಲು ಮತ್ತು ಜೀವನದಲ್ಲಿ ಕ್ರೀಡಾ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ರಾಷ್ಟ್ರೀಯ ದಿನವನ್ನು ಸಹ ಆಚರಿಸಲಾಗುತ್ತದೆ. ಧ್ಯಾನ್ ಚಂದ್ ಅವರ ಜನ್ಮದಿನವನ್ನು ಆಚರಿಸುವ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆಯಿರಿ. 2012 ರಿಂದ ಭಾರತ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿಗಳನ್ನು ಪಡೆದ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ಕ್ರೀಡಾ ದಿನವಾಗಿ ಆಚರಿಸುತ್ತಿದೆ.

ರಾಷ್ಟ್ರೀಯ ಕ್ರೀಡಾ ದಿನದ ಮಹತ್ವ

ರಾಷ್ಟ್ರೀಯ ಕ್ರೀಡಾ ದಿನದ ಮಹತ್ವ

ಆಟದ ಇತಿಹಾಸದಲ್ಲಿ ಶ್ರೇಷ್ಠ ಫೀಲ್ಡ್ ಹಾಕಿ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಮೇಜರ್ ಧ್ಯಾನ್ ಚಂದ್ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಹಾಕಿಯನ್ನು ಜನಪ್ರಿಯಗೊಳಿಸಲು ಅಸಾಮಾನ್ಯ ಕೊಡುಗೆಗಳನ್ನು ನೀಡಿದ್ದಾರೆ. ಧ್ಯಾನ್ ಸಿಂಗ್ ಅವರು ಉತ್ತರ ಪ್ರದೇಶದಲ್ಲಿ 1905 ರ ಆಗಸ್ಟ್ 29 ರಂದು ಜನಿಸಿದರು. 'ಹಾಕಿಯ ಮಾಂತ್ರಿಕ' ಎಂದೇ ಕರೆಯುವ ಧ್ಯಾನ್ ಚಂದ್ ಅವರು ಬ್ರಿಟಿಷ್ ಭಾರತೀಯ ಸೇನೆಯ ರೆಜಿಮೆಂಟಲ್ ತಂಡದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಬೆಳದಿಂಗಳ ಬೆಳಕಿನಲ್ಲಿ ಹಾಕಿ ಅಭ್ಯಾಸ ಮಾಡುತ್ತಿದ್ದರು. ಇದರಿಂದಾಗಿ ಅವರು 'ಚಾಂದ್' ಎಂಬ ಪ್ರಸಿದ್ಧ ಹೆಸರನ್ನು ಗಳಿಸಿದರು.

ಧ್ಯಾನ್ ಚಂದ್ ಅವರಿಗೆ ಪದ್ಮಭೂಷಣ ಪ್ರಶಸ್ತಿ

ಧ್ಯಾನ್ ಚಂದ್ ಅವರಿಗೆ ಪದ್ಮಭೂಷಣ ಪ್ರಶಸ್ತಿ

ಅವರು 1948 ರಲ್ಲಿ ತಮ್ಮ ಮೊದಲ ಅಂತರಾಷ್ಟ್ರೀಯ ಹಾಕಿ ಪಂದ್ಯವನ್ನು ಆಡಿದರು. ಧ್ಯಾನ್ ಚಂದ್ ಅವರ ಅಸಾಧಾರಣ ಕೌಶಲ್ಯಗಳು, ಸೂಪರ್ ಕಂಟ್ರೋಲ್ ಮತ್ತು ಕೈಚಳಕವು ಭಾರತವನ್ನು 1928, 1932 ಮತ್ತು 1936 ರಲ್ಲಿ ಸತತ ಮೂರು ಒಲಂಪಿಕ್ ಚಿನ್ನದ ಪದಕಗಳನ್ನು ಗೆಲ್ಲಲು ಕಾರಣವಾಯಿತು. ಅವರ ಗೋಲ್-ಸ್ಕೋರಿಂಗ್ ಸಾಹಸಗಳು ಮತ್ತು ಗಮನಾರ್ಹ ಪ್ರಭಾವವು ಭಾರತವನ್ನು ಹಾಕಿ ಕ್ಷೇತ್ರದಲ್ಲಿ ಮಾಸ್ಟರ್ ಆಗಿ ಮಾಡಿತು. ಭಾರತ ಸರ್ಕಾರವು ಧ್ಯಾನ್ ಚಂದ್ ಅವರಿಗೆ 1956 ರಲ್ಲಿ ತನ್ನ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಧ್ಯಾನ್ ಚಂದ್ ಅವರು 1979 ರಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ಆದಾಗ್ಯೂ ಧ್ಯಾನ್ ಚಂದ್ ಅವರ ಕೊಡುಗೆಗಳು ಅವರನ್ನು ನೆನಪಿಸಿಕೊಳ್ಳುವ ಯುವಕರು ಮತ್ತು ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ.

ಕ್ರೀಡೆಯ ಮಹತ್ವ ಸಾರುವ ದಿನ

ಕ್ರೀಡೆಯ ಮಹತ್ವ ಸಾರುವ ದಿನ

'ಹಾಕಿ ಕಾ ಜಾದುಗಾರ್' ಅವರಿಗೆ ಗೌರವ ಸಲ್ಲಿಸಲು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಒಬ್ಬರ ಜೀವನದಲ್ಲಿ ಅದು ಹೇಗೆ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ಹರಡಲು ಶೈಕ್ಷಣಿಕ ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ. ಭಾರತದ ರಾಷ್ಟ್ರಪತಿ ಭವನದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಸೇರಿದಂತೆ ಪ್ರಮುಖ ಕ್ರೀಡಾ-ಸಂಬಂಧಿತ ಪ್ರಶಸ್ತಿಗಳನ್ನು ಈ ದಿನದಂದು ರಾಷ್ಟ್ರಪತಿಗಳು ನೀಡುತ್ತಾರೆ. ಎಲ್ಲಾ ನಾಗರಿಕರಿಗೆ ಪರಿಪೂರ್ಣ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿದ ಅವರ ಜನ್ಮ ವಾರ್ಷಿಕೋತ್ಸವದಂದು ಜನರು ಧ್ಯಾನ್ ಚಂದ್ ಅವರನ್ನು ಸ್ಮರಿಸುತ್ತಾರೆ. ಮೇಜರ್ ಧ್ಯಾನ್ ಚಂದ್ ಅವರ ಪರಂಪರೆಯು ಕ್ರೀಡೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಮತ್ತು ದೇಶಕ್ಕೆ ಪ್ರಶಸ್ತಿಗಳನ್ನು ತರಲು ಪ್ರಯತ್ನಗಳನ್ನು ಮಾಡಲು ಜನರನ್ನು ಪ್ರೇರೇಪಿಸುತ್ತದೆ.

ಅದ್ಭುತ ಹಾಕಿ ಆಟಗಾರ

ಅದ್ಭುತ ಹಾಕಿ ಆಟಗಾರ

ಇಂದು ಒಲಿಂಪಿಕ್ ನಲ್ಲಿ ಕಂಚಿನ ಪದಕವೋ, ಬೆಳ್ಳಿಯ ಪದಕವೋ ಬಂದರೆ ಮುಂದಿನ ಒಲಂಪಿಕ್ ವರೆಗೂ ಸಂಭ್ರಮಿಸುತ್ತೇವೆ, ಹೀಗಿರುವಾಗ ಸ್ವಾತಂತ್ರ್ಯಪೂರ್ವದಲ್ಲೇ ಭಾರತಕ್ಕೆ ಒಂದಲ್ಲ, ಎರಡಲ್ಲ ಸತತ ಮೂರು ಒಲಿಂಪಿಕ್ ಗಳಲ್ಲಿ ಚಿನ್ನ ಗೆದ್ದು ಕೊಟ್ಟ ಧ್ಯಾನ್ ಚಂದ್ ರ ಸಾಧನೆ ಸಾಧಾರಣವಲ್ಲ. ಧ್ಯಾನ್ ಚಂದ್ ವಿಶ್ವ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯರು. ಅವರ ಹಾಕಿ ಆಟಕ್ಕೆ ಮನಸೋಲದವರೇ ಇಲ್ಲ. ತಮ್ಮ ಅದ್ಭುತ ಆಟದಿಂದಾಗಿ ಎದುರಾಳಿ ತಂಡದವರನ್ನು ಮತ್ತು ನೋಡುಗರನ್ನು ಮಂತ್ರಮುಗ್ಧರನ್ನಾಗಿಸುತ್ತಿದ್ದ ಧ್ಯಾನ್ ಚಂದ್ ನಿಜವಾಗಿಯೂ ಭಾರತೀಯರ ಹೆಮ್ಮೆ. ಬರ್ಲಿನ್ ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಧ್ಯಾನ್ ಚಂದ್ ಅವರ ಆಟ ಕಂಡ ಅಡೋಲ್ಫ್ ಹಿಟ್ಲರ್ ಧ್ಯಾನ್ ಚಂದ್ ಅವರಿಗೆ "ಬ್ರಿಟಿಷ್ ಸೇನೆಯಲ್ಲಿ ಮೇಜರ್ ಹುದ್ದೆ, ಜರ್ಮನಿಯ ಪೌರತ್ವ, ಕೊಲೋನೆಲ್ ಗೌರವದ ಕೊಡುಗೆ ನೀಡಲು ಆಹ್ವಾನಿಸಿದ್ದರು, ಆದರೆ ಇದನ್ನು ತಿರಸ್ಕರಿದ ಧ್ಯಾನ್ ಚಂದರು ನಾನೊಬ್ಬ ಅಪ್ಪಟ ಭಾರತೀಯ, ಭಾರತದಲ್ಲೇ ನಾನು ಹಾಯಾಗಿದ್ದೇನೆ ಎಂದು ನಯವಾಗಿ ಹೇಳಿ ದೇಶಪ್ರೇಮ ಮೆರೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+