Breaking: ಐರ್ಲೆಂಡ್ ಪ್ರವಾಸಕ್ಕೆ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್
ಮುಂಬೈ, ಮೇ 18: ಐರ್ಲೆಂಡ್ ಪ್ರವಾಸಕ್ಕೆ ತೆರಳಲಿರುವ ಟೀಂ ಇಂಡಿಯಾಕ್ಕೆ ಹೊಸ ಕೋಚ್ ನೇಮಕವಾಗುವ ಸುದ್ದಿ ಬಂದಿದೆ. ಎರಡು ಪಂದ್ಯಗಳ ಟಿ20 ಸರಣಿಯ ವೇಳೆ ಭಾರತದ ಮಾಜಿ ಕ್ರಿಕೆಟಿಗ ಹಾಗೂ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಭಾರತ ಕ್ರಿಕೆಟ್ ತಂಡಕ್ಕೆ ಕನ್ನಡಿಗ ರಾಹುಲ್ ದ್ರಾವಿಡ್ ತಂಡದ ಮುಖ್ಯ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರು ಕಳೆದ ವರ್ಷ ಕೋವಿಡ್ 19 ಕಾರಣದಿಂದ ರದ್ದಾಗಿರುವ ಏಕೈಕ ಟೆಸ್ಟ್ ಪಂದ್ಯ ಮರು ಹೊಂದಿಸಲಾಗಿದ್ದು, ಆ ಪಂದ್ಯಕ್ಕಾಗಿ ಭಾರತ ಟೆಸ್ಟ್ ತಂಡದ ಜೊತೆ ತಯಾರಿಯಲ್ಲಿರಲಿದ್ದಾರೆ ಎನ್ನಲಾಗುತ್ತಿದೆ.
ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡ ಲೈಲೆಸ್ಟರ್ ಕೌಂಟಿ ತಂಡದ ವಿರುದ್ಧ ಜೂನ್ 24-27ರವರೆಗೆ ಬರ್ಮಿಂಗ್ಹ್ಯಾಮ್ನಲ್ಲಿ 4 ದಿನಗಳ ಪಂದ್ಯವನ್ನಾಡಲಿದೆ. ಈ ಪಂದ್ಯದ ವೇಳೆ ದ್ರಾವಿಡ್ ಭಾರತ ತಂಡದ ಜೊತೆಯಲ್ಲಿರಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಜುಲೈ 1ರಿಂದ 5ರವರೆಗೆ ಕೊನೆಯ ಟೆಸ್ಟ್ ಪಂದ್ಯವನ್ನಾಡಲಿದೆ.

ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಮುಖ್ಯಸ್ಥರಾಗಿರುವ ಲಕ್ಷ್ಮಣ್, ಇದಕ್ಕೂ ಮುನ್ನ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಮುಖ್ಯ ಕೊಚ್ ಆಗಿ ಕಾರ್ಯನಿರ್ವಹಿಸಿದ ಅನುಭವವಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications