Neeraj Chopra: ನೀರಜ್ ಚೋಪ್ರಾ ಇಷ್ಟು ಫಿಟ್ ಆಗಿರಲು ಕಾರಣವೇನು?
ನೀರಜ್ ಚೋಪ್ರಾ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಚಿನ್ನದ ಮಗ ಎಂದು ಪ್ರೀತಿಯಿಂದ ಕರೆಯಲ್ಪಟ್ಟ ಕ್ರೀಡಾಪಟು. ಒಲಿಂಪಿಕ್ ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಕಾರಣಕ್ಕಾಗಿ ಅವರನ್ನು ತುಂಬಾ ಪ್ರೀತಿಯಿಂದ ಕರೆಯಲಾಗುತ್ತದೆ.
ನೀರಜ್ ಚೋಪ್ರಾ ಅವರ ಯಶಸ್ಸು ಮತ್ತು ಸಾಧನೆಗಳಿಗಾಗಿ ಮಾತ್ರವಲ್ಲದೆ ಅವರ ಫಿಟ್ ಮತ್ತು ತೆಳ್ಳಗಿನ ಮೈಕಟ್ಟಿಗಾಗಿಯೂ ಅವರು ನೋಡುಗರ ಗಮನ ಸೆಳೆಯುವಂತ್ತಿದ್ದಾರೆ. ನೀರಜ್ ಚೋಪ್ರಾ ಅವರು ಆಹಾರ ಮತ್ತು ವ್ಯಾಯಾಮದಿಂದಾಗಿ ತುಂಬಾ ಫಿಟ್ ಆಗಿದ್ದಾರೆ. ಅವರು ಹೀಗಿರಲು ತಮ್ಮ ಆಹಾರದಲ್ಲಿ ಸೇರಿಸುವ ಪಾನೀಯ ಇದಕ್ಕೆ ಕಾರಣವೆಂದು ಹೇಳಲಾಗುತ್ತದೆ.

ಸಾಕಷ್ಟು ಪ್ರೋಟೀನ್ ಮತ್ತು ಮ್ಯಾಕ್ರೋನ್ಯೂಟ್ರಿಯಂಟ್ಗಳ ಜೊತೆಗೆ 10 ಪ್ರತಿಶತದಷ್ಟು ದೇಹದ ಕೊಬ್ಬಿನೊಂದಿಗೆ ಫಿಟ್ ದೇಹದ ತೂಕವನ್ನು ಕಾಪಾಡಿಕೊಳ್ಳಲು ನೀರು ಪ್ರಮುಖ ಅಂಶವಾಗಿದೆ ಎಂದು ನೀರಜ್ ಹಲವಾರು ಸಂದರ್ಶನಗಳಲ್ಲಿ ಹೇಳಿದ್ದಾರೆ. ತಜ್ಞರ ಪ್ರಕಾರ, ನೀರು ಒಬ್ಬರ ದೇಹವನ್ನು ಹೈಡ್ರೇಟ್ ಆಗಿ ಇರಿಸುತ್ತದೆ ಮತ್ತು ಹೃದಯದಿಂದ ಮೂತ್ರಪಿಂಡದವರೆಗೆ ಎಲ್ಲಾ ಅಂಗಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ನೀರಜ್ ಪ್ರತಿದಿನ ಎಳನೀರು ಕುಡಿಯುವುದರಿಂದ ಇಷ್ಟು ಫಿಟ್ ಆಗಿದ್ದಾರೆ ಎನ್ನುತ್ತಾರೆ. ಹಾಗಾದರೆ ಪ್ರತಿದಿನ ಎಳನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳೇನು?
ಎಳನೀರಿನ ಆರೋಗ್ಯ ಪ್ರಯೋಜನಗಳು:-
* ಎಳನೀರು ಖನಿಜಗಳು, ಜೀವಸತ್ವಗಳು ಇತ್ಯಾದಿಗಳಿಂದ ಸಮೃದ್ಧವಾಗಿದೆ. ಇದು ಸ್ನಾಯುವಿನ ಕಾರ್ಯವನ್ನು ಬೆಂಬಲಿಸುತ್ತವೆ. ಚೋಪ್ರಾರಂತಹ ಅಥ್ಲೀಟ್ಗಳಿಗೆ ಬೇಕಾದ ಶಕ್ತಿಯನ್ನು ಇದು ನೀಡುತ್ತದೆ. ಅಲ್ಲದೆ ಇದರಲ್ಲಿ ಕ್ಯಾಲೋರಿ ಮತ್ತು ಕೊಬ್ಬು ಕಡಿಮೆ ಇರುವುದರಿಂದ ದೇಹದಲ್ಲಿ ಕೊಬ್ಬು ಶೇಖರಣೆಯಾಗುವುದನ್ನು ತಡೆಯುತ್ತದೆ ಮತ್ತು ದೇಹವನ್ನು ಫಿಟ್ ಆಗಿ ಇಡಲು ಸಹಾಯ ಮಾಡುತ್ತದೆ.

* ಎಳನೀರು ಉಲ್ಲಾಸಕರ ಪಾನೀಯ. ಈ ಪಾನೀಯವು ಮಧುಮೇಹಿಗಳಿಗೆ ಉತ್ತಮ ಪಾನೀಯವಾಗಿದೆ ಎಂದು ಅಧ್ಯಯನಗಳು ಹೇಳುತ್ತವೆ. ಅಲ್ಲದೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುವುದರಿಂದ, ಮಧುಮೇಹ ಹೊಂದಿರುವ ಜನರು ಇದನ್ನು ನಿತ್ಯ ಕುಡಿಯುವ ಮೊದಲು ತಮ್ಮ ವೈದ್ಯರನ್ನು ಸಂಪರ್ಕಿಸಬೇಕು.
* ಇದು ದೇಹದಲ್ಲಿನ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ಗಳ ಮಟ್ಟವನ್ನು ಕಡಿಮೆ ಮಾಡುವ ಮೂಲಕ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ವಿವಿಧ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡ ಇರುವವರಿಗೆ ಎಳನೀರು ಅತ್ಯುತ್ತಮ ಪಾನೀಯ ಎಂದು ಅಧ್ಯಯನಗಳು ಹೇಳುತ್ತವೆ.

* ಎಳನೀರು ಎಲೆಕ್ಟ್ರೋಲೈಟ್ಗಳಲ್ಲಿ ಸಮೃದ್ಧವಾಗಿದೆ. ಆದ್ದರಿಂದ ಇದನ್ನು ಕುಡಿಯುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ. ವ್ಯಾಯಾಮ ಅಥವಾ ತೀವ್ರವಾದ ಕ್ರೀಡೆಗಳಲ್ಲಿ ಕಳೆದುಹೋದ ನಿರ್ಜಲೀಕರಣವನ್ನು ಸರಿಪಡಿಸಲು ಇದು ಸಹಾಯ ಮಾಡುತ್ತದೆ. ಎಳನೀರು ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ ಅನ್ನು ಒಳಗೊಂಡಿರುವುದರಿಂದ, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡಾಪಟುಗಳಿಗೆ ಹೆಚ್ಚು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
* ಇದರಿಂದಾಗಿ ತಾಜಾ ನೀರು ಸೇವಿಸುವುದು ಮುಖ್ಯ. ಇದನ್ನು ಸ್ಮೂಥಿಗಳು, ಪಾಯಸ ಇತ್ಯಾದಿಗಳಿಗೆ ಸೇರಿಸಬಹುದು. ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಿರುವವರು ಎಳನೀರು ಕುಡಿದರೆ, ಅವರು ದೇಹದ ಜಲಸಂಚಯನವನ್ನು ತ್ವರಿತವಾಗಿ ಹೆಚ್ಚಿಸಬಹುದು.

* ಅಷ್ಟು ಮಾತ್ರವಲ್ಲದೆ ಎಳನೀರು ಕಿಡ್ನಿ ಕಲ್ಲುಗಳ ಉತ್ಪತ್ತಿಯನ್ನು ತಡೆಯಲು ತುಂಬಾ ಸಹಾಯ ಮಾಡುತ್ತದೆ. ಕ್ಯಾಲ್ಸಿಯಂ, ಆಕ್ಸಲೇಟ್ ಮತ್ತು ಇತರ ಸಂಯುಕ್ತಗಳ ಸಂಯೋಜನೆಯಿಂದ ಮೂತ್ರಪಿಂಡದ ಕಲ್ಲುಗಳು ರೂಪುಗೊಳ್ಳುತ್ತವೆ. ಈ ಸಣ್ಣ ಕಲ್ಲುಗಳು ಬಹಳಷ್ಟು ನೋವು ಮತ್ತು ಸಂಕಟಗಳನ್ನು ನೀಡುತ್ತವೆ. ಆದರೆ ನೀವು ಎಳನೀರು ಕುಡಿದರೆ, ಅದರಲ್ಲಿರುವ ಸಂಯುಕ್ತಗಳು ಈ ಕಲ್ಲುಗಳನ್ನು ಕರಗಿಸಿ ಸುಲಭವಾಗಿ ಹೊರಹಾಕುತ್ತದೆ ಮತ್ತು ಅದರ ಅಪಾಯವನ್ನು ತಡೆಯುತ್ತವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications