Vinesh Phogat: ವಿನೇಶ್ ಫೋಗಟ್ಗೆ ಬೆಳ್ಳಿ ಪದಕ; ನೀರಜ್ ಚೋಪ್ರಾ ಹೇಳಿದ್ದೇನು?
ಕುಸ್ತುಪಟು ವಿನೇಶ್ ಫೋಗಟ್ ಅವರಿಗೆ ಬೆಳ್ಳಿ ಪದಕ ನೀಡುವ ಬಗ್ಗೆ ಕ್ರೀಡಾ ನ್ಯಾಯಮಂಡಳಿ (ಸಿಎಎಸ್) ಇಂದು ನಿರ್ಧಾರ ಪ್ರಕಟಿಸಲಿದೆ. ವಿನೇಶ್ ಫೋಗಟ್ ಪಟ್ಟಿರುವ ಶ್ರಮಕ್ಕೆ ಆಕೆಗೆ ಬೆಳ್ಳಿ ಪದಕ ಸಿಗಲೇಬೇಕು ಎಂದು ಭಾರತೀಯ ಕ್ರೀಡಾಭಿಮಾನಿಗಳು ಆಗ್ರಹಿಸಿದ್ದರು. ಹಲವು ಮಾಜಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳು ಕೂಡ ವಿನೇಶ್ ಅವರ ಬೆಂಬಲಕ್ಕೆ ನಿಂತಿದ್ದು, ನ್ಯಾಯ ಸಿಗುವ ಭರವಸೆಯಲ್ಲಿದ್ದಾರೆ.
50 ಕೆಜಿ ವಿಭಾಗದ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಫೋಗಟ್ ಫೈನಲ್ ಪಂದ್ಯದ ದಿನ ನಡೆದ ತೂಕದ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚಾಗಿದ್ದಾರೆ ಎಂದು ಒಲಿಂಪಿಕ್ಸ್ನಿಂದ ಅನರ್ಹಗೊಳಿಸಿತ್ತು. ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದ ಭಾರತೀಯ ಅಭಿಮಾನಿಗಳಿಗೆ ಇದು ಆಘಾತ ಕೊಟ್ಟಿತ್ತು. ಬಳಿಕ ಸಿಎಎಸ್ನ ತಾತ್ಕಾಲಿಕ ವಿಭಾಗಕ್ಕೆ ಅನರ್ಹತೆ ಕ್ರಮವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.

ನೀರಜ್ ಚೋಪ್ರಾ ಹೇಳಿದ್ದೇನು?
ಭಾರತಕ್ಕೆ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದುಕೊಟ್ಟ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕೂಡ ಈಗ ವಿನೇಶ್ ಫೋಗಟ್ ಅವರ ಬೆಂಬಲಕ್ಕೆ ನಿಂತಿದ್ದಾರೆ. 'ಇಂಡಿಯಾ ಹೌಸ್' ನಲ್ಲಿ ಐಒಸಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿಯವರ ಅಭಿನಂದನಾ ಸಮಾರಂಭದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿನೇಶ್ ಫೋಗಟ್ಗೆ ಪದಕ ಬರಬೇಕು ಎಂದು ನಾನು ಆಶಿಸುತ್ತೇನೆ, ಆದರೆ ಆಕೆಗೆ ಪದಕ ಬರದೇ ಇದ್ದರೂ ಆಕೆ ದೇಶಕ್ಕಾಗಿ ಆಡಿದ್ದನ್ನು ಜನ ಮರೆಯಬಾರದು ಎಂದು ಹೇಳಿದ್ದಾರೆ.
"ವಿನೇಶ್ ಫೋಗಟ್ಗೆ ಬೆಳ್ಳಿ ಪದಕ ಸಿಕ್ಕರೆ ಅದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ. ಜನ ಕೂಡ ಆಕೆಗೆ ಪದಕ ಸಿಗಲಿ ಎಂದು ಬಯಸುತ್ತಾರೆ. ಒಂದು ವೇಳೆ ಆಕೆ ಅನರ್ಹಗೊಳ್ಳದೇ ಇದ್ದರೆ ಭಾರತಕ್ಕೆ ಖಚಿತವಾಗಿ ಪದಕ ಸಿಗುತ್ತಿತ್ತು. ಪದಕ ಆಕೆಯ ಕೊರಳಲ್ಲಿ ಇಲ್ಲದೇ ಇದ್ದರೆ ಅದು ನಿಜಕ್ಕೂ ನೋವು ಮಾಡುತ್ತದೆ" ಎಂದು ಹೇಳಿದ್ದಾರೆ.
ಇಂದು ಆಕೆಯನ್ನು ಜನ ಚಾಂಪಿಯನ್ ಎಂದು ಕರೆಯುತ್ತಿದ್ದಾರೆ. ಆದರೆ ಆಕೆ ಕುಸ್ತಿಯನ್ನು ಆಡುವುದನ್ನು ಬಿಟ್ಟ ಬಳಿಕ ಜನ ಬೇಗನೆ ಮರೆತುಬಿಡುತ್ತಾರೆ ಎಂದು ನನಗೆ ಭಯವಾಗುತ್ತಿದೆ. ಆದರೆ ಹಾಗೆ ಆಗಬಾರದು, ಆಕೆ ಪದಕ ಪಡೆಯಲಿ, ಪಡೆಯದೇ ಇರಲಿ ದೇಶಕ್ಕಾಗಿ ಆಕೆ ಮಾಡಿದ್ದನ್ನು ಜನ ಮರೆಯಬಾರದು ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications