ಭಾರತ ಟೆಸ್ಟ್ ಕ್ರಿಕೆಟ್ಗೆ ಹೊಸ ನಾಯಕ!
ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ-20 ಬಳಿಕ ಇದೀಗ ಟೆಸ್ಟ್ ಕ್ರಿಕೆಟ್ಗೂ ನಿವೃತಿ ಘೋಷಿಸಿದ್ದಾರೆ. ಐಪಿಎಲ್ ನಡೆಯುವಾಗಲೇ ಈ ನಿರ್ಧಾರ ತೆಗೆದುಕೊಂಡಿರುವ ಅಚ್ಚರಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮುಂದಿನ ಟೆಸ್ಟ್ ಪಂದ್ಯಕ್ಕೆ ನಾಯಕನ ಸ್ಥಾನಕ್ಕೆ ಯಾರು ಎನ್ನುವ ಚರ್ಚೆಗಳು ಆರಂಭವಾಗಿವೆ. ಹಾಗಾದ್ರೆ ಇದಕ್ಕೆ ಉತ್ತರ ಇಲ್ಲಿದೆ ಗಮನಿಸಿ.
ಚಾಂಪಿಯನ್ ಟ್ರೋಫಿ ಗೆದ್ದ ಬಳಿಕ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಟೆಸ್ಟ್ ನಾಯಕತ್ವ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಇಳಿಸಿ ಅವರ ಸ್ಥಾನಕ್ಕೆ ಯುವ ಆಟಗಾರನನ್ನು ತರುವ ಚರ್ಚೆ ನಡೆದಿತ್ತು. ಆದರೆ, ಇದಕ್ಕೂ ಮುನ್ನವೇ ರೋಹಿತ್ ಶರ್ಮಾ ಟೆಸ್ಟ್ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿ ಶಾಕ್ ಕೊಟ್ಟಿದ್ದಾರೆ. ಇನ್ನು ಅವರು 50 ಓವರ್ಗಳ ಪಂದ್ಯಗಳಲ್ಲಿ ಮಾತ್ರ ಮುಂದುವರೆಯಲಿದ್ದಾರೆ.

ಟೆಸ್ಟ್ ಕ್ರಿಕೆಟ್ಗೆ ರೋಹಿತ್ ನಿವೃತ್ತಿ ಬಳಿಕ ಮುಂದಿನ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ನಾಯಕ ಯಾರು ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಮಾಹಿತಿಯ ಪ್ರಕಾರ, ಈ ಸರದಿಯಲ್ಲಿ ಜಸ್ಪ್ರಿತ್ ಬೂಮ್ರಾ, ಕನ್ನಡಿಗ ಕೆ.ಎಲ್. ರಾಹುಲ್, ಯುವ ಸ್ಫೋಟಕ ಬ್ಯಾಟರ್ ಶುಭ್ಮನ್ ಗಿಲ್ ಮತ್ತು ಬ್ಯಾಟರ್ ಮತ್ತು ಕೀಪರ್ ರಿಷಬ್ ಪಂತ್ ಹೆಸರುಗಳು ಮುಂಚೂಣಿಯಲ್ಲಿದ್ದು, ಈ ಹಿನ್ನೆಲೆ ಇವರಲ್ಲಿ ಒಬ್ಬರನ್ನು ಹೊಸ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಅದರಲ್ಲೂ ರೋಹಿತ್ ಶರ್ಮಾ ಅವರು ಇದೀಗ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಪಂದ್ಯ ಆಡುವ ಸಮಯದಲ್ಲೇ ಈ ದೃಢ ನಿರ್ಧಾರ ತೆಗೆದುಕೊಂಡಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಹುಟ್ಟುಹಾಕಿದೆ. ಅಲ್ಲದೆ ಈ ತೀರ್ಮಾನ ಹಲವು ಅನುಮಾನಗಳಿಗೂ ಕಾರಣವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications