ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೆ ಕಿವೀಸ್ಗೆ ಶಾಕ್, ಸ್ಟಾರ್ ಆಲ್ರೌಂಡರ್ಗೆ ಕೊರೊನಾ
ನಾಟಿಂಗ್ಹ್ಯಾಮ್, ಜೂನ್ 15 : ನ್ಯೂಜಿಲ್ಯಾಂಡ್ ತಂಡದ ಆಲ್ರೌಂಡರ್ ಮೈಕಲ್ ಬ್ರಾಸ್ವೆಲ್ಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಮುಗಿದ ಮುರುದಿನ ದಿನವೇ ಕಿವೀಸ್ ಕ್ರಿಕೆಟಿಗನಿಗೆ ಕೊರೊನಾ ಸೋಂಕು ತಗುಲಿದೆ.
ಕೆಲವು ಕೋವಿಡ್ ಲಕ್ಷಣಗಳು ಕಂಡುಬಂದ ಬೆನ್ನಲ್ಲೇ ಬ್ರಾಸ್ವೆಲ್ಗೆ ಆಂಟಿಜೆನ್ ಪರೀಕ್ಷೆಗೆ (RAT) ಒಗಾಗಿದ್ದರು. ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಹಾಗಾಗಿ ಗುರುವಾರ ಜೂನ್ 23 ರಿಂದ ಲೀಡ್ಸ್ನ ಹೆಡಿಂಗ್ಲಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ಗೆ ತಂಡಕ್ಕೆ ಮರಳುವ ಮೊದಲು ಐದು ದಿನಗಳ ಐಸೊಲೇಸನ್ ಅಗತ್ಯವಿದೆ.
ಬ್ರಾಸ್ವೆಲ್ಗೆ ಕೋವಿಡ್ 19 ಸೋಂಕು ತಗುಲಿರುವ ಹಿನ್ನಲೆ ಇಡೀ ಕಿವೀಸ್ ತಂಡವನ್ನು ಬುಧವಾರ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮುಂದಿನ ಪಂದ್ಯಕ್ಕೆ ಈ ಹಂತದಲ್ಲಿ ಯಾವುದೇ ಬದಲೀ ಆಟಗಾರರನ್ನು ಆಯ್ಕೆ ಮಾಡುವುದಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೂ ಮೊದಲು ಜಾನಿ ಬೈರ್ಸ್ಟೋವ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡ 5 ವಿಕೆಟ್ಗಳ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿತು. 2ನೇ ಇನ್ನಿಂಗ್ಸ್ನಲ್ಲಿ 284ಕ್ಕೆ ಆಲೌಟ್ ಆಗಿದ್ದ ಕಿವೀಸ್ ಅತಿಥೇಯ ಇಂಗ್ಲೆಂಡ್ ತಂಡಕ್ಕೆ 299 ರನ್ಗಳ ಗುರಿ ನೀಡಿತ್ತು. ಕೊನೆಯ ದಿನ ಇಂಗ್ಲೆಂಡ್ 72 ಓವರ್ಗಳಲ್ಲಿ ಗುರಿಯನ್ನು ತಲುಪಬೇಕಿತ್ತು. ಆದರೆ ಇಂಗ್ಲೆಂಡ್ ಟೆಸ್ಟ್ನಲ್ಲೂ ಟಿ20 ಕ್ರಿಕೆಟ್ನಂತೆ ಬ್ಯಾಟ್ ಬೀಸಿ ಕೇವಲ 50 ಓವರ್ಗಳಲ್ಲಿ ತಲುಪಿತು.
ಜಾನಿ ಬೈರ್ಸ್ಟೋವ್ ಕೇವಲ 92 ಎಸೆತಗಳಲ್ಲಿ 14 ಬೌಂಡರಿ ಮತ್ತು 7 ಸಿಕ್ಸರ್ಗಳ ಸಹಿತ 136 ರನ್ ಚಚ್ಚಿದರೆ, ನಾಯಕ ಬೆನ್ ಸ್ಟೋಕ್ಸ್ 70 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್ ಸಹಿತ ಅಜೇಯ 75 ರನ್ಗಳಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಂಡರು.
ಮೊದಲ ಸರಣಿ ಜಯ; ಜೋ ರೂಟ್ ನಂತರ ಇಂಗ್ಲೆಂಡ್ ತಂಡದ ಅಧಿಕೃತ ನಾಯಕನಾಗಿದ್ದ ಬೆನ್ ಸ್ಟೋಕ್ಸ್ ಮೊದಲ ಸರಣಿಯನ್ನು ಗೆಲ್ಲುವು ಮೂಲಕ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆಂಗ್ಲ ತಂಡವನ್ನು ಗೆಲುವಿನ ಹಳಿಗೆ ಮರಳುವಂತೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಸ್ಟೋಕ್ಸ್ ಎರಡೂ ಇನ್ನಿಂಗ್ಸ್ ಸೇರಿ 2 ವಿಕೆಟ್ ಮತ್ತು 121 ರನ್ಗಳಿಸಿದ್ದಾರೆ. ಈ ಸರಣಿಗೂ ಮುನ್ನ ಇಂಗ್ಲೆಂಡ್ ತಂಡ ಭಾರತ, ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಕಳೆದುಕೊಂಡಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications