Ind vs NZ: ಪಂತ್ ಹೋರಾಟ ವ್ಯರ್ಥ; ಭಾರತಕ್ಕೆ ಹೀನಾಯ ಸೋಲು
ಮುಂಬೈ ಟೆಸ್ಟ್ನಲ್ಲಿ ಕೂಡ ಭಾರತ ಸೋಲು ಕಂಡಿದ್ದು ಭಾರಿ ಮುಖಭಂಗ ಅನುಭವಿಸಿದೆ. ಭಾರತ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 3 ಪಂದ್ಯಗಳ ಸರಣಿಯನ್ನು ಎದುರಾಳಿ ತಂಡವೊಂದು ವೈಟ್ ವಾಶ್ ಮಾಡಿದೆ. ಮುಂಬೈನಲ್ಲಿ ನಡೆದ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ 25 ರನ್ಗಳಿಂದ ಸೋಲು ಕಂಡಿದ್ದು, 0-3 ಅಂತರದಲ್ಲಿ ಸರಣಿಯಲ್ಲಿ ಸೋಲು ಕಂಡಿದೆ.
ಎರಡನೇ ಇನ್ನಿಂಗ್ಸ್ನಲ್ಲಿ ನ್ಯೂಜಿಲೆಂಡ್ ತಂಡವನ್ನು 174 ರನ್ಗಳಿಗೆ ಆಲೌಟ್ ಮಾಡಿದ ಭಾರತದ ಗೆಲುವಿಗೆ ಎರಡನೇ ಇನ್ನಿಂಗ್ಸ್ನಲ್ಲಿ 147 ರನ್ಗಳ ಅಗತ್ಯವಿತ್ತು. ಆದರೆ ನ್ಯೂಜಿಲೆಂಡ್ ಬಿಗಿ ಬೌಲಿಂಗ್ ಎದುರು ಭಾರತದ ಬ್ಯಾಟಿಂಗ್ ಮತ್ತೆ ವಿಫಲವಾಯಿತು. ರಿಷಬ್ ಪಂತ್ ಮಾತ್ರ ಏಕಾಂಗಿಯಾಗಿ ಹೋರಾಡಿದರೂ, ಭಾರತವನ್ನು ಗೆಲ್ಲಿಸಲು ಆಗಲಿಲ್ಲ, ಕೊನೆಗೆ ಭಾರತ 121 ರನ್ಗಳಿಗೆ ಆಲೌಟ್ ಆಗುವ ಮೂಲಕ 25 ರನ್ಗಳಿಂದ ಸೋಲೊಪ್ಪಿಕೊಂಡಿತು.

ಕೈಕೊಟ್ಟ ಅನುಭವಿಗಳು
147 ರನ್ಗಳನ್ನು ಬೆನ್ನಟ್ಟುವುದು ಈ ಪಿಚ್ನಲ್ಲಿ ಸುಲಭವೇನೂ ಆಗಿರಲಿಲ್ಲ. ಆದರೆ ತವರಿನಲ್ಲಿ ಆಡಿದ ಅಪಾರ ಅನುಭವ ಹೊಂದಿದ್ದರೂ ತಂಡದ ಹಿರಿಯ ಆಟಗಾರರು ಜವಾಬ್ದಾರಿಯುತ ಆಟ ಆಡಲೇ ಇಲ್ಲ. ನಾಯಕ ರೋಹಿತ್ ಶರ್ಮಾ 11 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಔಟಾದರು. ಯಶಸ್ವಿ ಜೈಸ್ವಾಲ್ 5 ರನ್ ಗಳಿಸಿ ಔಟಾದರು, ಶುಭಮನ್ ಗಿಲ್ ಕೂಡ 1 ರನ್ ಗಳಿಸಿ ಔಟಾದರು.
ಸರ್ಫರಾಜ್ ಖಾನ್ 1 ರನ್ ಗಳಿಸಿ ಔಟಾಗುವ ಮೂಲಕ ಭಾರತ ಸಂಕಷ್ಟಕ್ಕೆ ಸಿಲುಕಿತು. 29 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ರಿಷಬ್ ಪಂತ್ ಅಸರೆಯಾದರು. ರಿಷಬ್ ಪಂತ್ ಮಾತ್ರ 57 ಎಸೆತಗಳಲ್ಲಿ 64 ರನ್ ಗಳಿಸುವ ಮೂಲಕ ಭಾರತಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಅವರು ಔಟಾದ ಬಳಿಕ ಭಾರತ ಹೆಚ್ಚು ಹೊತ್ತು ಹೋರಾಟ ಕೊಡಲು ಆಗಲಿಲ್ಲ.
ಮ್ಯಾಟ್ ಹೆನ್ರಿ 1 ವಿಕೆಟ್ ಪಡೆದರೆ, ಅಜಾಝ್ ಪಟೇಲ್ 6 ವಿಕೆಟ್ ಪಡೆಯುವ ಮೂಲಕ ಭಾರತದ ಸೋಲಿಗೆ ಪ್ರಮುಖ ಕಾರಣವಾದರು. ಗ್ಲೆನ್ ಫಿಲಿಪ್ಸ್ 3 ವಿಕೆಟ್ ಪಡೆದು ಮಿಂಚಿದರು. ಅಝಾಜ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಇಡೀ ಸರಣಿಯಲ್ಲಿ ಬ್ಯಾಟಿಂಗ್ನಲ್ಲಿ ಮಿಂಚಿದ ವಿಲ್ ಯಂಗ್ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು.
ಈ ಸೋಲಿನ ಮೂಲಕ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ನವೆಂಬರ್ 22ರಿಂದ ಆಸ್ಟ್ರೇಲಿಯಾ ವಿರುದ್ಧದ 5 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಶುರುವಾಗಲಿದ್ದು ಈ ಸರಣಿಯಲ್ಲಿ ಕನಿಷ್ಠ 4 ಪಂದ್ಯ ಗೆದ್ದರೆ ಮಾತ್ರ ಭಾರತ ಫೈನಲ್ ಪ್ರವೇಶಿಸುವ ಸಾಧ್ಯತೆ ಇದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications