ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಕೊಲೆ, ಗಲಭೆ, ಕ್ರಿಮಿನಲ್ ಕೇಸ್ ದಾಖಲು
ಹೊಸದಿಲ್ಲಿ, ಅಕ್ಟೋಬರ್ 12: ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರ 17 ಮಂದಿ ವಿರುದ್ಧ ದೆಹಲಿ ನ್ಯಾಯಾಲಯವು ಬುಧವಾರ ಕೊಲೆ ಆರೋಪಗಳನ್ನು ಹೊರಿಸಿದ್ದು, ಪ್ರಕರಣದ ವಿಚಾರಣೆ ಆರಂಭವಾಗಿದೆ.
ಇಂದು ನ್ಯಾಯಾಲಯದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು, ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರ ಆರೋಪಿಗಳ ವಿರುದ್ಧ ಕೊಲೆ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಗಳನ್ನು ರಚಿಸಿದ್ದು ಕೇಸ್ ದಾಖಲಿಸಲಾಗಿದೆ ಹಾಗೂ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರ 17 ಮಂದಿ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ ಆರೋಪಗಳನ್ನು ಹೊರಿಸಿದೆ. 2021ರ ಮೇ 4ರಂದು ನಗರದ ಛತ್ರಸಾಲ್ ಸ್ಟೇಡಿಯಂನ ಪಾರ್ಕಿಂಗ್ ಪ್ರದೇಶದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧಂಖರ್ ಮತ್ತು ಅವರ ಸ್ನೇಹಿತರ ಮೇಲೆ ಆಸ್ತಿ ವಿವಾದದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಕುಮಾರ್ ಮತ್ತು ಇತರರು ಆರೋಪಿಸಿದ್ದಾರೆ.

ಜೂನಿಯರ್ ಕುಸ್ತಿಪಟು ಸಾಗರ್ ಧಂಖರ್ ಕೊಲೆ ಪ್ರಕರಣ
ಜೂನಿಯರ್ ಕುಸ್ತಿಪಟು ಸಾಗರ್ (23) ಅವರನ್ನು ಸುಶೀಲ್ ಕುಮಾರ್ ಮತ್ತು ಇತರ ಕುಸ್ತಿಪಟುಗಳೊಂದಿಗೆ 4 ಮೇ 2021ರ ರಾತ್ರಿ ಛತ್ರಸಾಲ್ ಕ್ರೀಡಾಂಗಣದಲ್ಲಿ ಅಪಹರಿಸಿ ಥಳಿಸಿ ಸಾಗರ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ಸುಶೀಲ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದರು.

ಸಾಗರ್ ಧಂಖರ್ ಕೊಲೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಕುಸ್ತಿಪಟು ಮತ್ತು ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸೇರಿದಂತೆ 20 ಜನರ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಇತರ ಪ್ರಕರಣಗಳಲ್ಲಿ ಆರೋಪಗಳನ್ನು ರೂಪಿಸಿದೆ. ಈ ಪೈಕಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲರ ಮೇಲೂ ಕೊಲೆ, ಕೊಲೆ ಯತ್ನ, ಗಲಭೆ, ಕಾನೂನುಬಾಹಿರ ಸಭೆ ಮತ್ತಿತರ ಆರೋಪಗಳನ್ನು ಹೊರಿಸಲಾಗಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications