ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಪದಕ ತಂದುಕೊಟ್ಟಿ ಹಾಕಿ ಆಟಗಾರ ವರೀಂದರ್ ಸಿಂಗ್ ನಿಧನ
ನವದೆಹಲಿ, ಜೂನ್ 28: ಭಾರತಕ್ಕೆ ಒಲಂಪಿಕ್ ಮತ್ತು ವಿಶ್ವಕಪ್ನಲ್ಲಿ ಪದಕ ತಂದುಕೊಟ್ಟಿದ್ದ ಆಟಗಾರ ವರೀಂದರ್ ಸಿಂಗ್ ಮಂಗಳವಾರ ಬೆಳಿಗ್ಗೆ ಜಲಂಧರ್ನಲ್ಲಿ ನಿಧನರಾಗಿದ್ದಾರೆ ಎಂದು ಹಾಕಿ ಇಂಡಿಯಾ ತಿಳಿಸಿದೆ.
ಹಾಕಿಯಲ್ಲಿ ಭಾರತದ ಪ್ರಾಬಲ್ಯ ಸಾಧಿಸಿದ್ದ 70 ರ ದಶಕದಲ್ಲಿ ವರಿಂದರ್ ಸಿಂಗ್ ಹಲವು ಭಾರತೀಯ ಸ್ಮರಣೀಯ ವಿಜಯಗಳಲ್ಲಿ ತಂಡದ ಭಾಗವಾಗಿದ್ದರು. ಅವರು 1975 ರಲ್ಲಿ ಮಲೇಷ್ಯಾದ ಕ್ವಾಲ ಲಾಂಪುರದಲ್ಲಿ ನಡೆದಿದ್ದ ಪುರುಷರ ಹಾಕಿ ವಿಶ್ವಕಪ್ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು. ಇಂದಿಗೂ ಅದು ಭಾರತದ ಏಕೈಕ ಚಿನ್ನದ ಪದಕ ಎಂದೆನಿಸಿಕೊಂಡಿದೆ. ಅಂದು ಪಾಕಿಸ್ತಾನ ತಂಡವನ್ನು ಭಾರತ 2-1ರಲ್ಲಿ ಸೋಲಿಸಿ ಚಾಂಪಿಯನ್ ಆಗಿತ್ತು.
ಇದರ ಜೊತೆಗೆ ವರೀಂದರ್ 1972ರಲ್ಲಿ ಮ್ಯುನಿಚ್ ಒಲಿಂಪಿಕ್ಸ್ನಲ್ಲಿ ಕಂಚು ಹಾಗೂ 1973ರ ಆಮ್ಸ್ಟರ್ಡ್ಯಾಮ್ನಲ್ಲಿ ವಿಶ್ವಕಪ್ ನಲ್ಲಿ ಬೆಳ್ಳಿ ಗೆದ್ದ ತಂಡದಲ್ಲೂ ಆಡಿದ್ದರು. ಇವುಗಳ ಜೊತೆಗೆ 1974 ಮತ್ತು 1978ರ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕಗಳನ್ನು ತಮ್ಮ ಹೆಸರಿನಲ್ಲಿರಿಸಿಕೊಂಡಿದ್ದಾರೆ. 2007ರಲ್ಲಿ ಹಾಕಿ ಕ್ರೀಡೆಯ ಪ್ರತಿಷ್ಠಿತ ಧ್ಯಾನ್ ಚಾಂದ್ ಜೀವನಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದರು.

ವರೀಂದರ್ ಸಿಂಗ್ ಅವರ ಸಾವಿಗೆ ಹಾಕಿ ಇಂಡಿಯಾ ಸಂತಾಪ ಸೂಚಿಸಿದ್ದು, "ಭಾರತದ ಶ್ರೇಷ್ಠ ಹಾಕಿ ಆಟಗಾರ ಶ್ರೀ ವರೀಂದರ್ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಮತ್ತು ಈ ದುಃಖದ ಸಂದರ್ಭದಲ್ಲಿ ದುಃಖವನ್ನು ಭರಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ನೀಡಲಿ ಎಂದು ನಾವು ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ" ಎಂದು ಹಾಕಿ ಇಂಡಿಯಾ ಪ್ರಕಟಿಸಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications