ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಪದಕ ತಂದುಕೊಟ್ಟಿ ಹಾಕಿ ಆಟಗಾರ ವರೀಂದರ್ ಸಿಂಗ್ ನಿಧನ
ನವದೆಹಲಿ, ಜೂನ್ 28: ಭಾರತಕ್ಕೆ ಒಲಂಪಿಕ್ ಮತ್ತು ವಿಶ್ವಕಪ್ನಲ್ಲಿ ಪದಕ ತಂದುಕೊಟ್ಟಿದ್ದ ಆಟಗಾರ ವರೀಂದರ್ ಸಿಂಗ್ ಮಂಗಳವಾರ ಬೆಳಿಗ್ಗೆ ಜಲಂಧರ್ನಲ್ಲಿ ನಿಧನರಾಗಿದ್ದಾರೆ ಎಂದು ಹಾಕಿ ಇಂಡಿಯಾ ತಿಳಿಸಿದೆ.
ಹಾಕಿಯಲ್ಲಿ ಭಾರತದ ಪ್ರಾಬಲ್ಯ ಸಾಧಿಸಿದ್ದ 70 ರ ದಶಕದಲ್ಲಿ ವರಿಂದರ್ ಸಿಂಗ್ ಹಲವು ಭಾರತೀಯ ಸ್ಮರಣೀಯ ವಿಜಯಗಳಲ್ಲಿ ತಂಡದ ಭಾಗವಾಗಿದ್ದರು. ಅವರು 1975 ರಲ್ಲಿ ಮಲೇಷ್ಯಾದ ಕ್ವಾಲ ಲಾಂಪುರದಲ್ಲಿ ನಡೆದಿದ್ದ ಪುರುಷರ ಹಾಕಿ ವಿಶ್ವಕಪ್ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು. ಇಂದಿಗೂ ಅದು ಭಾರತದ ಏಕೈಕ ಚಿನ್ನದ ಪದಕ ಎಂದೆನಿಸಿಕೊಂಡಿದೆ. ಅಂದು ಪಾಕಿಸ್ತಾನ ತಂಡವನ್ನು ಭಾರತ 2-1ರಲ್ಲಿ ಸೋಲಿಸಿ ಚಾಂಪಿಯನ್ ಆಗಿತ್ತು.
ಇದರ ಜೊತೆಗೆ ವರೀಂದರ್ 1972ರಲ್ಲಿ ಮ್ಯುನಿಚ್ ಒಲಿಂಪಿಕ್ಸ್ನಲ್ಲಿ ಕಂಚು ಹಾಗೂ 1973ರ ಆಮ್ಸ್ಟರ್ಡ್ಯಾಮ್ನಲ್ಲಿ ವಿಶ್ವಕಪ್ ನಲ್ಲಿ ಬೆಳ್ಳಿ ಗೆದ್ದ ತಂಡದಲ್ಲೂ ಆಡಿದ್ದರು. ಇವುಗಳ ಜೊತೆಗೆ 1974 ಮತ್ತು 1978ರ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕಗಳನ್ನು ತಮ್ಮ ಹೆಸರಿನಲ್ಲಿರಿಸಿಕೊಂಡಿದ್ದಾರೆ. 2007ರಲ್ಲಿ ಹಾಕಿ ಕ್ರೀಡೆಯ ಪ್ರತಿಷ್ಠಿತ ಧ್ಯಾನ್ ಚಾಂದ್ ಜೀವನಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದರು.

ವರೀಂದರ್ ಸಿಂಗ್ ಅವರ ಸಾವಿಗೆ ಹಾಕಿ ಇಂಡಿಯಾ ಸಂತಾಪ ಸೂಚಿಸಿದ್ದು, "ಭಾರತದ ಶ್ರೇಷ್ಠ ಹಾಕಿ ಆಟಗಾರ ಶ್ರೀ ವರೀಂದರ್ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಮತ್ತು ಈ ದುಃಖದ ಸಂದರ್ಭದಲ್ಲಿ ದುಃಖವನ್ನು ಭರಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ನೀಡಲಿ ಎಂದು ನಾವು ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ" ಎಂದು ಹಾಕಿ ಇಂಡಿಯಾ ಪ್ರಕಟಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications