Olympics: ಭಾರತದ ಹಾಕಿ ತಂಡದ ಜಯದ ಆರಂಭ
ಪ್ಯಾರೀಸ್ ಒಲಿಂಪಿಕ್ಸ್ನಲ್ಲಿ ಭಾರತದ ಹಾಕಿ ತಂಡ ಶುಭಾರಂಭ ಮಾಡಿದೆ. ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ಗೆದ್ದಿದ್ದ ಭಾರತ 3-2ರಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು.
ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರೂ ಪುಟಿದ್ದೆದು ಸೊಗಸಾದ ಪ್ರದರ್ಶನ ನೀಡಿದ ಟೀಮ್ ಇಂಡಿಯಾ, ಅರ್ಹ ಗೆಲುವು ಸಾಧಿಸಿತು. ಮೊದಲಾವಧಿಯಲ್ಲಿ ನ್ಯೂಜಿಲೆಂಡ್ ತಂಡ, ಭಾರತದ ರಕ್ಷಣಾ ವಿಭಾಗಕ್ಕೆ ಮಣ್ಣು ಮುಕ್ಕಿಸಿ ಎಂಟನೇ ನಿಮಿಷದಲ್ಲೇ ಪೆನಾಲ್ಟಿ ಗೋಲ್ ಅವಕಾಶ ಪಡೆಯಿತು.

ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಿಸಿಕೊಂಡ ನ್ಯೂಜಿಲೆಂಡ್ ಮೊದಲಾವಧಿಯ ಆರಂಭದಲ್ಲಿ ಭಾರತದ ಗೋಲ್ ಕೀಪರ್ ಶ್ರೀಜೇಶ್ ಅವರನ್ನು ವಂಚಿಸುವಲ್ಲಿ ಸಫಲವಾಯಿತು. ಪರಿಣಾಮ ನ್ಯೂಜಿಲೆಂಡ್ ಪಂದ್ಯದಲ್ಲಿ 1-0 ಮುನ್ನಡೆ ಸಾಧಿಸಿತು. ಈ ಅವಧಿಯಲ್ಲಿ ಗೋಲು ಬಾರಿಸುವ ಭಾರತದ ಯೋಜನೆ ಫಲಿಸಲಿಲ್ಲ. ಪರಿಣಾಮ ಮೊದಲಾವಧಿಯಲ್ಲಿ ಕಿವೀಸ್ ಮುನ್ನಡೆ ಸಾಧಿಸಿತು.
ಭಾರತದ ಅಬ್ಬರ
ಎರಡನೇ ಅವಧಿಯಲ್ಲಿ ಭಾರತ ಭರ್ಜರಿ ಪ್ಲ್ಯಾನ್ ಮೂಲಕ ಮೈದಾನ ಪ್ರವೇಶಿಸಿತು. ಮೊದಲಾವಧಿಯಲ್ಲಿ ಚೆಂಡಿನ ಮೇಲೆ ಹಿಡಿತ ಸಾಧಿಸಿದ್ದ ನ್ಯೂಜಿಲೆಂಡ್, ಎರಡನೇ ಅವಧಿಯಲ್ಲಿ ಕೊಂಚ ಹಿನ್ನಡೆ ಅನುಭವಿಸಿತು. ಸೊಗಸಾದ ಪ್ಲ್ಯಾನ್ ಮಾಡುವ ಮೂಲಕ ಭಾರತ, ನ್ಯೂಜಿಲೆಂಡ್ ತಂಡದ ರಕ್ಷಣಾ ವಿಭಾಗವನ್ನು ವಂಚಿಸುತ್ತಾ ಸಾಗಿತು.
ಎರಡನೇ ಅವಧಿಯ ಕೊನೆಯ ಕ್ಷಣದಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾದ ಮಂದೀಪ್ ಸಿಂಗ್ ಸೊಗಸಾದ ಫೀಲ್ಡ್ ಗೋಲು ಬಾರಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ಟೀಮ್ ಇಂಡಿಯಾ ಅಂಕದ ಖಾತೆ ಓಪನ್ ಮಾಡಿತು. ಅಲ್ಲದೆ ಗೋಲ್ ಸಂಖ್ಯೆಯನ್ನು ಸಮನಾಗಿಸಿತು.

ಇನ್ನು ಮೂರನೇ ಅವಧಿಯಲ್ಲೂ ಭಾರತ ತಂಡ ಬ್ರೇಕ್ ವೇಳೆ ಹಾಕಿಕೊಂಡ ಯೋಜನೆಯಂತೆ ಆಡಿತು. ಇದರ ಫಲವಾಗಿ ನಾಲ್ಕನೇ ನಿಮಿಷದಲ್ಲಿ ಮತ್ತೊಂದು ಗೋಲು ಬಾರಿಸಲು ಸಾಧ್ಯವಾಯಿತು. ಈ ಅವಧಿಯಲ್ಲಿ ವಿವೇಕ್ ಸಾಗರ್ ಪ್ರಸಾದ್ ಅಮೋಘ ಚಾಣಕ್ಯತನ ಮೆರೆದು ಗೋಲು ಬಾರಿಸಿದರು. ಈ ಮೂಲಕ ಭಾರತ ಪಂದ್ಯದಲ್ಲಿ 2-1ರಿಂದ ಮುನ್ನಡೆ ಸಾಧಿಸಿತು.
ರೋಚಕ ಘಟ್ಟ
ನಾಲ್ಕನೇ ಅವಧಿಯ ಆಟ ರೋಚಕತೆಯಿಂದ ಕೂಡಿತ್ತು. ಈ ವೇಳೆ ಭಾರತ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋಯಿತು. ಆದರೆ ಗೋಲುಗಳ ಸಂಖ್ಯೆಯನ್ನು ಸಮಾನಿಗಿಸಿಕೊಳ್ಳುವ ಆಶಯ ಹೊಂದಿದ್ದ ನ್ಯೂಜಿಲೆಂಡ್ ಅಟ್ಯಾಕಿಂಗ್ ಆಟಕ್ಕೆ ಮೊರೆ ಹೋಯಿತು. ಈ ವೇಳೆ 53ನೇ ನಿಮಿಷದಲ್ಲಿ ಕಿವೀಸ್ ಸಿಕ್ಕ ಅವಕಾಶವನ್ನು ಬಳಸಿಕೊಂಡು ಗೋಲು ಬಾರಿಸಿದರು. ಈ ಮೂಲಕ ಗೋಲುಗಳ ಸಂಖ್ಯೆ ಸಮನಾಯಿತು.

ಕೊನೆಯ ಕ್ಷಣದಲ್ಲಿ ರೋಚಕತೆ ಹೆಚ್ಚಿತು. ಈ ಪಂದ್ಯದ ಕೊನೆಯ ಘಟ್ಟದಲ್ಲಿ ಟೀಮ್ ಇಂಡಿಯಾ ಅಮೋಘ ಆಟದ ಪ್ರದರ್ಶನ ನೀಡಿ, ಚೆಂಡಿನ ಮೇಲೆ ಹಿಡಿತ ಸಾಧಿಸಿತು. ಇನ್ನೇನು ಪಂದ್ಯ ಮುಗಿಯಲು ಒಂದು ನಿಮಿಷ ಇರುವಾಗ ಹರ್ಮನ್ ಪ್ರೀತ್ ಸಿಂಗ್ ಸಿಕ್ಕ ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಗೋಲು ಬಾರಿಸಿದರು.
ಭಾರತದ ಖುಷಿಗೆ ಪಾರವೇ ಇರಲಿಲ್ಲ. ಭಾರತ ಬಿ ಗುಂಪಿನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಅಬ್ಬರದ ಜಯ ಸಾಧಿಸುವ ಮೂಲಕ ಗೆಲುವಿನ ಆರಂಭವನ್ನು ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications