India vs USA: ಯುಎಸ್ಎ ವಿರುದ್ಧ ಭಾರತ ಗೆಲ್ಲಬೇಕೆಂದು ಬಯಸುತ್ತಿದೆ ಪಾಕಿಸ್ತಾನ
ಟಿ20 ವಿಶ್ವಕಪ್ ಎ ಗುಂಪಿನ ಪಂದ್ಯದಲ್ಲಿ ಭಾರತ ಇಂದು ಆತಿಥೇಯ ಯುಎಸ್ಎ ತಂಡವನ್ನು ಎದುರಿಸಲಿದೆ. ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಅಭಿಮಾನಿಗಳು ಭಾರತ ತಂಡವನ್ನು ಬೆಂಬಲಿಸಲಿದ್ದು, ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.
ಎ ಗುಂಪಿನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಮತ್ತು ಯುಎಸ್ಎ ತಲಾ 4 ಅಂಕಗಳೊಂದಿಗೆ ಮೊದಲ ಎರಡು ಸ್ಥಾನಗಳಲ್ಲಿವೆ. ಭಾರತ ಇಂದಿನ ಪಂದ್ಯ ಗೆದ್ದರೆ ನೇರವಾಗಿ ಸೂಪರ್ 8ಗೆ ಅರ್ಹತೆ ಪಡೆಯಲಿದೆ.

ಮೊದಲ ಎರಡು ಪಂದ್ಯಗಳಲ್ಲಿ ಯುಎಸ್ಎ ಮತ್ತು ಭಾರತದ ವಿರುದ್ಧ ಸೋತಿರುವ ಪಾಕಿಸ್ತಾನ ಮಂಗಳವಾರ ಕೆನಡಾ ವಿರುದ್ಧ ಗೆಲುವು ಸಾಧಿಸಿದೆ. ಈ ಮೂಲಕ 2 ಅಂಕಗಳೊಂದಿಗೆ 3 ನೇ ಸ್ಥಾನದಲ್ಲಿದೆ.
ಯುಎಸ್ಎ ಮುಂದಿನ ಎರಡೂ ಪಂದ್ಯಗಳಲ್ಲಿ ಸೋತು, ಪಾಕಿಸ್ತಾನ ಐರ್ಲೆಂಡ್ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದರೆ, ರನ್ ರೇಟ್ ಲೆಕ್ಕಾಚಾರದಲ್ಲಿ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.
ಮಳೆ ಬಂದರೂ ಪಾಕಿಸ್ತಾನದ ಕಥೆ ಅಂತ್ಯ!
ಒಂದು ವೇಳೆ ಇಂದಿನ ಪಂದ್ಯ ಏನಾದರೂ ಮಳೆಯಿಂದ ರದ್ದಾದರೆ ಪಾಕಿಸ್ತಾನದ ಸೂಪರ್ 8 ಹಂತದ ಕನಸು ಕೊನೆಯಾಗಲಿದೆ. ತಲಾ ಐದು ಅಂಕಗಳೊಂದಿದೆ ಭಾರತ ಮತ್ತು ಯುಎಸ್ಎ ಇಂದೇ ಅರ್ಹತೆ ಪಡೆಯುತ್ತವೆ.
ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಈಗ ಮಳೆ ಕೂಡ ದೊಡ್ಡ ತಲೆನೋವಾಗಿದೆ. ಮಳೆ ಕೂಡ ಬರಬಾರದು, ಭಾರತ ದೊಡ್ಡ ಅಂತರದಲ್ಲಿ ಗೆಲ್ಲಬೇಕು, ಪಾಕಿಸ್ತಾನ ಕೆನಡಾ ವಿರುದ್ಧ ಗೆಲ್ಲಬೇಕು ಆಗ ಪಾಕಿಸ್ತಾನಕ್ಕೆ ವಿಶ್ವಕಪ್ನಲ್ಲಿ ಉಳಿಯಲು ಒಂದು ಅವಕಾಶ ಇರುತ್ತದೆ.
ಇಂದಿನ ಪಂದ್ಯದಲ್ಲಿ ಭಾರತ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ. ಈ ಪಂದ್ಯದಲ್ಲಿ ಸೋತರೂ ಯುಎಸ್ಎ ಮುಂದಿನ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದ್ದು ಅಲ್ಲಿ ಗೆದ್ದರೂ ಪಾಕಿಸ್ತಾನದ ಕಥೆ ಮುಗಿಯುತ್ತದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications