India vs USA: ಯುಎಸ್ಎ ವಿರುದ್ಧ ಭಾರತ ಗೆಲ್ಲಬೇಕೆಂದು ಬಯಸುತ್ತಿದೆ ಪಾಕಿಸ್ತಾನ
ಟಿ20 ವಿಶ್ವಕಪ್ ಎ ಗುಂಪಿನ ಪಂದ್ಯದಲ್ಲಿ ಭಾರತ ಇಂದು ಆತಿಥೇಯ ಯುಎಸ್ಎ ತಂಡವನ್ನು ಎದುರಿಸಲಿದೆ. ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಅಭಿಮಾನಿಗಳು ಭಾರತ ತಂಡವನ್ನು ಬೆಂಬಲಿಸಲಿದ್ದು, ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.
ಎ ಗುಂಪಿನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಮತ್ತು ಯುಎಸ್ಎ ತಲಾ 4 ಅಂಕಗಳೊಂದಿಗೆ ಮೊದಲ ಎರಡು ಸ್ಥಾನಗಳಲ್ಲಿವೆ. ಭಾರತ ಇಂದಿನ ಪಂದ್ಯ ಗೆದ್ದರೆ ನೇರವಾಗಿ ಸೂಪರ್ 8ಗೆ ಅರ್ಹತೆ ಪಡೆಯಲಿದೆ.

ಮೊದಲ ಎರಡು ಪಂದ್ಯಗಳಲ್ಲಿ ಯುಎಸ್ಎ ಮತ್ತು ಭಾರತದ ವಿರುದ್ಧ ಸೋತಿರುವ ಪಾಕಿಸ್ತಾನ ಮಂಗಳವಾರ ಕೆನಡಾ ವಿರುದ್ಧ ಗೆಲುವು ಸಾಧಿಸಿದೆ. ಈ ಮೂಲಕ 2 ಅಂಕಗಳೊಂದಿಗೆ 3 ನೇ ಸ್ಥಾನದಲ್ಲಿದೆ.
ಯುಎಸ್ಎ ಮುಂದಿನ ಎರಡೂ ಪಂದ್ಯಗಳಲ್ಲಿ ಸೋತು, ಪಾಕಿಸ್ತಾನ ಐರ್ಲೆಂಡ್ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದರೆ, ರನ್ ರೇಟ್ ಲೆಕ್ಕಾಚಾರದಲ್ಲಿ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.
ಮಳೆ ಬಂದರೂ ಪಾಕಿಸ್ತಾನದ ಕಥೆ ಅಂತ್ಯ!
ಒಂದು ವೇಳೆ ಇಂದಿನ ಪಂದ್ಯ ಏನಾದರೂ ಮಳೆಯಿಂದ ರದ್ದಾದರೆ ಪಾಕಿಸ್ತಾನದ ಸೂಪರ್ 8 ಹಂತದ ಕನಸು ಕೊನೆಯಾಗಲಿದೆ. ತಲಾ ಐದು ಅಂಕಗಳೊಂದಿದೆ ಭಾರತ ಮತ್ತು ಯುಎಸ್ಎ ಇಂದೇ ಅರ್ಹತೆ ಪಡೆಯುತ್ತವೆ.
ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಈಗ ಮಳೆ ಕೂಡ ದೊಡ್ಡ ತಲೆನೋವಾಗಿದೆ. ಮಳೆ ಕೂಡ ಬರಬಾರದು, ಭಾರತ ದೊಡ್ಡ ಅಂತರದಲ್ಲಿ ಗೆಲ್ಲಬೇಕು, ಪಾಕಿಸ್ತಾನ ಕೆನಡಾ ವಿರುದ್ಧ ಗೆಲ್ಲಬೇಕು ಆಗ ಪಾಕಿಸ್ತಾನಕ್ಕೆ ವಿಶ್ವಕಪ್ನಲ್ಲಿ ಉಳಿಯಲು ಒಂದು ಅವಕಾಶ ಇರುತ್ತದೆ.
ಇಂದಿನ ಪಂದ್ಯದಲ್ಲಿ ಭಾರತ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ. ಈ ಪಂದ್ಯದಲ್ಲಿ ಸೋತರೂ ಯುಎಸ್ಎ ಮುಂದಿನ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದ್ದು ಅಲ್ಲಿ ಗೆದ್ದರೂ ಪಾಕಿಸ್ತಾನದ ಕಥೆ ಮುಗಿಯುತ್ತದೆ.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications