ಐಪಿಎಲ್ ಬೆಟ್ಟಿಂಗ್: ದೇಶದ ಹಲವೆಡೆ ಸಿಬಿಐ ತಂಡದಿಂದ ದಾಳಿ
ನವದೆಹಲಿ, ಮೇ 15: ಪಾಕಿಸ್ತಾನಿ ಪ್ರಜೆಯೊಬ್ಬ ಒಳಗೊಂಡ ಐಪಿಎಲ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ನಾಲ್ಕು ಪ್ರಮುಖ ನಗರಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ಬಂಧಿಸಿದೆ.
ಪಾಕಿಸ್ತಾನದಿಂದ ಬಂದಂತಹ ಮಾಹಿತಿಯನ್ನು ಆಧರಿಸಿ ಐಪಿಎಲ್ ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಹಲವು ಆರೋಪಿಗಳನ್ನು ಶನಿವಾರ ಬಂಧಿಸಿ, ಎರಡು ಎಫ್ಐಆರ್ ದಾಖಲಿಸಲಾಗಿದೆ. ಈ ಪಕ್ರರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳಿಗಾಗಿ ಬಲೆ ಬೀಸಿದ್ದು, ಇದಕ್ಕಾಗಿ ನವದೆಹಲಿ, ರಾಜಸ್ಥಾನ್, ಹೈದರಾಬಾದ್ ಮತ್ತು ಜೈಪುರ್ ನಗರಗಳಲ್ಲಿ ಹಲವು ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಹೊಸಪಡಿಸಿಕೊಂಡಿರುವುದಾಗಿ ಸಿಬಿಐ ಮಾಹಿತಿ ನೀಡಿದೆ.
ಮೂವರ ಮೇಲೆ ಎಫ್ಐಆರ್
ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿಯ ರೋಹಿಣಿ ಪ್ರಾಂತ್ಯದ ನಿವಾಸಿ ದಿಲೀಪ್ ಕುಮಾರ್, ಹೈದರಾಬಾದ್ನ ಗುರ್ರಮ್ ಸತೀಮ್ ಮತ್ತು ಗುರ್ರಮ್ ವಾಸು ಎಂಬುವವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಪಾಕಿಸ್ತಾನಿ ಪ್ರಜೆಯ ನಿರ್ದೇಶನದ ಮೇರೆಗೆ ಬೆಟ್ಟಿಂಗ್
ಈ ಮೂವರು 2019ರ ಆವೃತ್ತಿಯಲ್ಲಿ ಪಾಕಿಸ್ತಾನಿ ಪ್ರಜೆಯ ನಿರ್ದೇಶನದ ಮೇರೆಗೆ ಹಲವು ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸಿದ್ದಾರೆ. ಬಂಧಿಸಲ್ಪಟ್ಟಿರುವ ಮೂವರು ಪಾಕಿಸ್ತಾನದ ಪ್ರಜೆ ವಾಕಸ್ ಮಲಿಕ್ ಎಂಬಾತನ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಈ ಗುಂಪು ಸಾರ್ವಜನಿಕರಿಗೆ ಸಾಕಷ್ಟು ಹಣವನ್ನು ವಂಚಿಸಿದೆ. ಈ ದಂಧೆ 2010ರಿಂದಲೂ ನಡೆದುಕೊಂಡು ಬಂದಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ತಿಳಿಸಿದೆ.

ನಕಲಿ ದಾಖಲಾತಿಗಳನ್ನು ಬಳಸಿ ಬ್ಯಾಂಕ್ನಲ್ಲಿ ಅಕೌಂಟ್ ಓಪನ್
ಆರೋಪಿಗಳು ತಮ್ಮ ಬೆಟ್ಟಿಂಗ್ ದಂಂದೆಯಲ್ಲಿ ಗಳಿಸಿದ ಹಣವನ್ನು ಪಡೆಯಲು ಮತ್ತು ವರ್ಗಾಯಿಸಲು ಅಪರಿಚಿತ ಬ್ಯಾಂಕ್ ಅಧಿಕಾರಿಗಳ ನೆರವಿನಿಂದ ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ಈ ಖಾತೆಗಳನ್ನು ಖಾತೆಗಳನ್ನು ಪರಿಶೀಲಿಸಿದಾಗ ವಿಭಿನ್ನ ಜನ್ಮ ದಿನಾಂಕಗಳು ಸೇರಿದಂತೆ ನಕಲಿ ವಿವರಗಳು ಕಂಡು ಬಂದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಬಂಧಿತ ಕುಮಾರ್ ಎಂಬಾತನ ಖಾತೆಯೊಂದರಲ್ಲಿ 45 ಲಕ್ಷಕ್ಕೂ ಅಧಿಕ ಮೊತ್ತದ ವಹಿವಾಟು ನಡೆದಿರುವುದು ಕಂಡುಬಂದಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications