Paul van Meekeren: ಉಬರ್ ಈಟ್ಸ್ ಕೆಲಸಗಾರನಿಂದ ನೆದರ್ಲ್ಯಾಂಡ್ಸ್ ತಂಡದ ಹೀರೋ ಆದ ಮೀಕೆರೆನ್
ಅಕ್ಟೋಬರ್ 17 ರಂದು ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲ್ಯಾಂಡ್ಸ್ ಭರ್ಜರಿ ಗೆಲವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ನೆದರ್ಲ್ಯಾಂಡ್ಸ್ ತಂಡದ ಪೌಲ್ ವ್ಯಾನ್ ಮೀಕೆರೆನ್ ನೆದರ್ಲ್ಯಾಂಡ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಟೆಸ್ಟ್-ಆಡುವ ರಾಷ್ಟ್ರದ ವಿರುದ್ಧ ಮೊದಲ ಬಾರಿಗೆ ನೆದರ್ಲ್ಯಾಂಡ್ಸ್ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆದ್ದ ಸಾಧನೆ ಮಾಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡದ ಸತತ ಜಯದ ಓಟಕ್ಕೆ ಬ್ರೇಕ್ ಹಾಕಿದ್ದಾರೆ.

ಧರ್ಮಶಾಲಾದಲ್ಲಿ ನಡೆದ ಮುಖಾಮುಖಿಯಲ್ಲಿ, ವಾನ್ ಮೀಕೆರೆನ್ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಏಡೆನ್ ಮಾರ್ಕ್ರಾಮ್ ಮತ್ತು ಆಲ್ರೌಂಡರ್ ಮಾರ್ಕೊ ಜಾನ್ಸೆನ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಯಾರು ಈ ಮೀಕೆರೆನ್?
2020 ರ ವರ್ಷವು ಮೀಕೆರೆನ್ ಕ್ರಿಕೆಟ್ ವೃತ್ತಿಜೀವನದಲ್ಲಿ ಕಠಿಣ ಅಧ್ಯಾಯವಾಗಿದೆ, ಕೋವಿಡ್ 19 ಸಾಂಕ್ರಾಮಿಕದಿಂದ ಟಿ20 ವಿಶ್ವಕಪ್ ರದ್ದಾದ ಬಳಿಕ, ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸಿದರು.
ಅವರ ಕ್ರಿಕೆಟ್ ಆಕಾಂಕ್ಷೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರಿಂದ, ವ್ಯಾನ್ ಮೀಕೆರೆನ್ ಅವರು ಉಬರ್ ಈಟ್ಸ್ ಫುಡ್ ಡೆಲಿವರಿ ಡ್ರೈವರ್ ಆಗಿ ಉದ್ಯೋಗಕ್ಕೆ ಸೇರಿಕೊಂಡರು. ಇಷ್ಟೆಲ್ಲಾ ಸಂಕಷ್ಟ ಇದ್ದರೂ ಕೂಡ ಅವರು ತಮ್ಮ ಗುರಿಯನ್ನು ಬಿಡಲಿಲ್ಲ, ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ.

ಆರ್ಥಿಕವಾಗಿ ತೊಂದರೆಯಾದರು ಅವರು ಕ್ರಿಕೆಟ್ ಮೇಲಿನ ತಮ್ಮ ಒಲವನ್ನು ಉಳಿಸಿಕೊಂಡರು. 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ನೆದರ್ಲ್ಯಾಂಡ್ಸ್ ತಂಡ ಇದೇ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದಿತ್ತು, ಈಗ ಏಕದಿನ ವಿಶ್ವಕಪ್ನಲ್ಲಿ ಕೂಡ ದಕ್ಷಿಣ ಆಫ್ರಿಕಾ ಮಣಿಸಿ ಇತಿಹಾಸ ನಿರ್ಮಿಸಿದೆ.
ಅವರು ವಿವಿಧ ಟಿ20 ಮತ್ತು ಟಿ10 ಫ್ರಾಂಚೈಸಿಗಳಿಗಾಗಿ ಪ್ರಪಂಚದಾದ್ಯಂತ ಸ್ವಲ್ಪಮಟ್ಟಿಗೆ ಕ್ರಿಕೆಟ್ ಆಡಿದ್ದರೂ, ಅವರು ಹೆಚ್ಚು ತಿಳಿದಿರುವ ಹೆಸರಾಗಿರಲಿಲ್ಲ. ಆದರೆ ಅಕ್ಟೋಬರ್ 18 ರ ಮಂಗಳವಾರ ಅವರ ಹೆಸರು ಈಗ ಸಾಕಷ್ಟು ಜನಕ್ಕೆ ತಿಳಿದಿದೆ.
25ನೇ ಓವರ್ನಲ್ಲಿ ವ್ಯಾನ್ ಮೀಕೆರೆನ್ ಅವರು ಮಾರ್ಕೊ ಜಾನ್ಸೆನ್ ಅವರನ್ನು ಅಬ್ಬರದ ಎಸೆತದಲ್ಲಿ ಬೌಲ್ಡ್ ಮಾಡಿದರು. ಬ್ಯಾಟ್ನಿಂದ ಗಂಭೀರ ಹಾನಿಯನ್ನುಂಟುಮಾಡಬಲ್ಲ ಜಾನ್ಸೆನ್ ಔಟಾಗಿದ್ದು ದಕ್ಷಿಣ ಆಫ್ರಿಕಾ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.
ವ್ಯಾನ್ ಮೀಕೆರೆನ್ ಅವರು ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವುದರಿಂದ ಹಿಡಿದು ಎದುರಾಳಿ ಬ್ಯಾಟರ್ಗಳನ್ನು ಕಾಡುವ ಬೌಲರ್ ಆಗುವವರೆಗೆ ಖಂಡಿತವಾಗಿಯೂ ಸ್ವತಃ ಹೆಸರು ಮಾಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications