PBKS vs DC: ಅರ್ಧಕ್ಕೆ ನಿಂತ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಬಗ್ಗೆ ಸಿಕ್ಕಿದೆ ಸ್ಪಷ್ಟನೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಯುದ್ಧದ ಪರಿಸ್ಥಿತಿ ಎದುರಾದ ಬಳಿಕ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ 2025ರ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿದೆ. ಒಂದು ವಾರಗಳ ಕಾಲ ಐಪಿಎಲ್ ಸ್ಥಗಿತಗೊಂಡಿದ್ದು ಮುಂದಿನ ಪಂದ್ಯಗಳ ವೇಳಾಪಟ್ಟಿ ಮತ್ತು ಸ್ಥಳವನ್ನು ಬಿಸಿಸಿಐ ಶೀಘ್ರದಲ್ಲೇ ನಿರ್ಧರಿಸುವ ಸಾಧ್ಯತೆ ಇದೆ. ಮೇ 8 ರಂದು ಧರ್ಮಶಾಲಾದಲ್ಲಿ ಹಠಾತ್ತನೆ ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ದೆಹಲಿ ಕ್ಯಾಪಿಟಲ್ಸ್ (ಡಿಸಿ) ಪಂದ್ಯದ ಫಲಿತಾಂಶದ ಅನಿಶ್ಚಿತತೆ ಬಗ್ಗೆ ಈಗ ಮಾಹಿತಿ ಸಿಕ್ಕಿದೆ.
ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ದೆಹಲಿ ಕ್ಯಾಪಿಟಲ್ಸ್ (ಡಿಸಿ) ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 10.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದ್ದಾಗ ರಾತ್ರಿ 9:35 ರ ಸುಮಾರಿಗೆ ಪಂದ್ಯವನ್ನು ರದ್ದುಗೊಳಿಸಲಾಯಿತು. ಫ್ಲಡ್ಲೈಟ್ ವೈಫಲ್ಯದಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿ ಜನರನ್ನು ಮೈದಾನದಿಂದ ಹೊರಗೆ ಕಳಿಸಲಾಗಿತ್ತು.

ಆದರೆ ನಂತರ ವರದಿಗಳು ಪಾಕಿಸ್ತಾನವು ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದ ನಂತರ ಧರ್ಮಶಾಲಾದಿಂದ 90 ಕಿ.ಮೀ ದೂರದಲ್ಲಿರುವ ಪಠಾಣ್ಕೋಟ್ನಂತಹ ಹತ್ತಿರದ ಪ್ರದೇಶಗಳಲ್ಲಿ ವಾಯುದಾಳಿ ಎಚ್ಚರಿಕೆಗಳನ್ನು ನೀಡಲಾಗಿದೆ ಎಂದು ದೃಢಪಡಿಸಿತು. ಸುರಕ್ಷತೆಗೆ ಆದ್ಯತೆ ನೀಡಿ, ಬಿಸಿಸಿಐ ಪಂದ್ಯವನ್ನು ಅರ್ಧದಲ್ಲೇ ಸ್ಥಗಿತಗೊಳಿಸಿತು, ಪಂದ್ಯದ ಸುಮಾರು 25% (10.1 ಓವರ್ಗಳು) ಪೂರ್ಣಗೊಂಡಿತು. ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರನ್ ಸಿಂಗ್ ಇಬ್ಬರೂ ಅರ್ಧಶತಕ ಬಾರಿಸಿದ್ದರು.
ಐಪಿಎಲ್ ವೆಬ್ಸೈಟ್ ಪಂದ್ಯವನ್ನು ಕೈಬಿಡಲಾಗಿದೆ ಎಂದು ಗುರುತಿಸಿದೆ, ಇದು ಗೊಂದಲಕ್ಕೆ ಕಾರಣವಾಗಿದೆ. ಎಂಸಿಸಿ ಕಾನೂನು 12.9 ರ ಪ್ರಕಾರ, ನಿಯಂತ್ರಿಸಲಾಗದ ಬಾಹ್ಯ ಸಂದರ್ಭಗಳಿಂದಾಗಿ ಪಂದ್ಯವನ್ನು ರದ್ದು ಮಾಡಲು ಅವಕಾಶವಿದೆ, ಆದರೆ ಐಪಿಎಲ್ ಪಾಯಿಂಟ್ಗಳ ಪಟ್ಟಿಯನ್ನು ನವೀಕರಣ ಮಾಡಿಲ್ಲ. ಅಂದರೆ ಪಂದ್ಯದ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎರಡೂ ತಂಡಗಳಿಗೂ ಪ್ಲೇಆಫ್ ದೃಷ್ಟಿಯಿಂದ ಇದು ಮಹತ್ವದ ಪಂದ್ಯವಾಗಿದೆ.
ಪಂಜಾಬ್ ಕಿಂಗ್ಸ್ ಅಂತಿಮ ನಾಲ್ಕರಲ್ಲಿ ಸ್ಥಾನ ಪಡೆಯಲು ಕೇವಲ ಒಂದು ಗೆಲುವಿನ ದೂರದಲ್ಲಿತ್ತು ಮತ್ತು ಆಟದಲ್ಲಿ ಭಾರಿ ಮುನ್ನಡೆ ಸಾಧಿಸಿತು. ಇಂಡಿಯನ್ ಎಕ್ಸ್ಪ್ರೆಸ್ ಪ್ರಕಾರ, ಐಪಿಎಲ್ 2025 ಪುನರಾರಂಭವಾದ ನಂತರ ಪಿಬಿಕೆಎಸ್ vs ಡಿಸಿ ಪಂದ್ಯವನ್ನು ಪುನಃ ಆಡಿಸಲಾಗುತ್ತದೆ. ಇದರಿಂದ ಎರಡೂ ತಂಡಗಳಿಗೆ ಮತ್ತೊಂದು ಅವಕಾಶ ಸಿಕ್ಕಂತಾಗುತ್ತದೆ.
57 ಪಂದ್ಯಗಳು ಪೂರ್ಣಗೊಂಡಿದ್ದು, 17 ಪಂದ್ಯಗಳು ಬಾಕಿ ಉಳಿದಿದ್ದು, ಬಿಸಿಸಿಐ ಎರಡು ವಾರಗಳ ಒಳಗೆ ಉಳಿದ ಪಂದ್ಯಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಭದ್ರತಾ ಪರಿಸ್ಥಿತಿಗೆ ಅನುಗುಣವಾಗಿ ಈ ತಿಂಗಳ ಕೊನೆಯಲ್ಲಿ ಲೀಗ್ ಪುನರಾರಂಭಗೊಳ್ಳಬಹುದಾದ್ದರಿಂದ, ಆಟಗಾರರು ಮತ್ತು ಸಿಬ್ಬಂದಿಯನ್ನು ಸ್ಟ್ಯಾಂಡ್ಬೈನಲ್ಲಿ ಇರಿಸಿಕೊಳ್ಳಲು ಫ್ರಾಂಚೈಸಿಗಳನ್ನು ಕೇಳಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications