PBKS Vs RR: ಶಿಮ್ರಾನ್ ಹೆಟ್ಮೆಯರ್ ಸ್ಫೋಟಕ ಬ್ಯಾಟಿಂಗ್; ರಾಜಸ್ಥಾನ್ ರಾಯಲ್ಸ್ಗೆ ರೋಚಕ ಜಯ
ಐಪಿಎಲ್ 2024ರ ಪಂಜಾಬ್ ಕಿಂಗ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 3 ವಿಕೆಟ್ಗಳ ಗೆಲುವು ಸಾಧಿಸಿದೆ. ಕಳೆದ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋತಿದ್ದ ರಾಜಸ್ಥಾನ ಮತ್ತೆ ಗೆಲುವಿನ ಹಾದಿಗೆ ಮರಳಿದೆ.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಾಯದ ಕಾರಣ ಜೋಸ್ ಬಟ್ಲರ್ ಮತ್ತು ರವಿಚಂದ್ರನ್ ಅಶ್ವಿನ್ ತಂಡದಿಂದ ಹೊರಗುಳಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.

ಶಿಖರ್ ಧವನ್ ಗಾಯಗೊಂಡಿದ್ದ ಕಾರಣ ಸ್ಯಾಮ್ ಕರನ್ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆಶುತೋಷ್ ಶರ್ಮಾ 16 ಎಸೆತಗಳಲ್ಲಿ 31 ರನ್ ಗಳಿಸಿದ್ದೆ ಅವರ ತಂಡದ ದೊಡ್ಡ ಸ್ಕೋರ್ ಆಗಿತ್ತು. ಜಿತೇಶ್ ಶರ್ಮಾ 29, ಲಿಯಾಮ್ ಲಿವಿಂಗ್ ಸ್ಟೋನ್ 21 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಅಥರ್ವ ಟೈಡೆ 15 ರನ್, ಜಾನಿ ಬೈರ್ ಸ್ಟೋ 15 ರನ್, ಪ್ರಭ್ಸಿಮ್ರನ್ ಸಿಂಗ್ 10 ರನ್ ಗಳಿಸಿದರು. ಆವೇಶ್ ಖಾನ್, ಕೇಶವ್ ಮಹಾರಾಜ್ ತಲಾ ಎರಡು ವಿಕೆಟ್ ಪಡೆದು ಪಂಜಾಬ್ ಕಿಂಗ್ಸ್ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್ ಮತ್ತು ಚಾಹಲ್ ತಲಾ 1 ವಿಕೆಟ್ ಪಡೆದರು.
ರೋಚಕ ಗೆಲುವು ಪಡೆದ ರಾಜಸ್ಥಾನ
148 ರನ್ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಸಾಧಾರಣ ಆರಂಭ ಪಡೆಯಿತು. ಯಶಸ್ವಿ ಜೈಸ್ವಾಲ್ 28 ಎಸೆತಗಳಲ್ಲಿ 39 ರನ್ ಗಳಿಸಿದರೆ, ತನುಷ್ ಕೊಟ್ಯಾನ್ 31 ಎಸೆತಗಳಲ್ಲಿ 24 ರನ್ ಗಳಿಸಿದರು. ನಾಯಕ ಸಂಜು ಸ್ಯಾಮ್ಸನ್ 14 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು.
ರಿಯಾನ್ ಪರಾಗ್ 28 ರನ್, ಧ್ರುವ್ ಜುರೆಲ್ 6 ರನ್ ಗಳಿಸಿ ಔಟಾದ ಬಳಿಕ ರಾಜಸ್ಥಾನ್ ರಾಯಲ್ಸ್ ಪಾಳಯದಲ್ಲಿ ಸೋಲಿನ ಆತಂಕ ಶುರುವಾಗಿತ್ತು. ಆದರೆ ರೋವ್ಮನ್ ಪೊವೆಲ್ ಮತ್ತು ಶಿಮ್ರಾನ್ ಹೆಟ್ಮೆಯರ್ ತಂಡದ ಆತಂಕ ದೂರ ಮಾಡಿದರು.
ಪೊವೆಲ್ 5 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರು. ಕೇಶವ್ ಮಹಾರಾಜ್ 1 ರನ್ ಗಳಿಸಿ ಔಟಾದರು. ಕೊನೆಯ 4 ಎಸೆತಗಳಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವಿಗೆ 10 ರನ್ ಬೇಕಿತ್ತು. ಶಿಮ್ರಾನ್ ಹೆಟ್ಮೆಯರ್ 6, 2, 6 ರನ್ ಗಳಿಸುವ ಮೂಲಕ ಇನ್ನೂ ಒಂದು ಎಸೆತ ಬಾಕಿ ಇರುವಂತೆಯೇ 3 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು.
ಆಡಿರುವ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದ ರಾಜಸ್ಥಾನ ರಾಯಲ್ಸ್ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಭದ್ರಪಡಿಸಿಕೊಂಡಿತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications