PBKS vs SRH: ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್ಗಳ ರೋಚಕ ಗೆಲುವು ಸಾಧಿಸಿದ ಸನ್ರೈಸರ್ಸ್ ಹೈದರಾಬಾದ್
ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದಾರಾಬಾದ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ಸ್ಫೋಟಕ ಬ್ಯಾಟಿಂಗ್ ಪಡೆಯನ್ನೇ ಪಂಜಾಬ್ ಬೌಲರ್ ಗಳು ಆರಂಭದಲ್ಲಿ ಕಟ್ಟಿಹಾಕಿದರು.

5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು, ಟ್ರಾವಿಸ್ ಹೆಡ್ 15 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮಾ 11 ಎಸೆತಗಳಲ್ಲಿ 16 ರನ್ ಗಳಿಸಿ ಔಟಾದರು, ಏಡೆನ್ ಮಾರ್ಕ್ರಮ್ ಸೊನ್ನೆಗೆ ವಿಕೆಟ್ ಒಪ್ಪಿಸಿದರು.
ಆರಂಭಿಕ ಆಘಾತ ಅನುಭವಿಸಿದ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ನಿತೀಶ್ ರೆಡ್ಡಿ ಚೇತರಿಕೆ ನೀಡಿದರು. 37 ಎಸೆತಗಳಲ್ಲಿ 4 ಬೌಂಡರಿ 5 ಸಿಕ್ಸರ್ ಸಹಿತ 64 ರನ್ ಗಳಿಸಿದರು. ಅಬ್ದುಲ್ ಸಮದ್ 12 ಎಸೆತಗಳಲ್ಲಿ 25 ರನ್ ಗಳಿಸಿ ಆಸರೆಯಾದರು.
ಪಂಜಾಬ್ ಪರವಾಗಿ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 4 ಓವರ್ ಗಳಲ್ಲಿ 29 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ಸ್ಯಾಮ್ ಕರನ್ ಮತ್ತು ಹರ್ಷಲ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು. ಕಗಿಸೊ ರಬಡ 1 ವಿಕೆಟ್ ಪಡೆದರು.
2 ರನ್ಗಳ ರೋಚಕ ಗೆಲುವು
183 ರನ್ಗಳ ಸವಾಲಿನ ಮೊತ್ತವನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಕೂಡ ಆರಂಭದಲ್ಲಿ ಆಘಾತ ಅನುಭವಿಸಿತು. 4.4 ಓವರ್ ಗಳಲ್ಲಿ 20 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಜಾನಿ ಬೈರ್ ಸ್ಟೋ ಯಾವುದೇ ರನ್ ಗಳಿಸಿದೆ ಔಟಾದರೆ, ಪ್ರಭ್ಸಿಮ್ರನ್ ಸಿಂಗ್ 4 ರನ್ ಗಳಿಸಿ ಔಟಾದರು. ಶಿಖರ್ ಧವನ್ 16 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು.
ಸ್ಯಾಮ್ ಕರನ್ 22 ಎಸೆತಗಳಲ್ಲಿ 29 ರನ್ ಗಳಿಸಿದರು, ಸಿಖಂದರ್ ರಜಾ ಕೂಡ 22 ಎಸೆತಗಳಲ್ಲಿ 28 ರನ್ ಗಳಿಸಿದರು. ಶಶಾಂಕ್ ಸಿಂಗ್ 25 ಎಸೆತಗಳಲ್ಲಿ ಅಜೇಯ 46 ರನ್ ಗಳಿಸಿ ಹೋರಾಟ ನೀಡಿದರು, ಅಶುತೋಷ್ ಶರ್ಮಾ 15 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿದರು ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ.
ಕೊನೆಯ ಓವರ್ ನಲ್ಲಿ ಪಂಜಾಗ್ ಕಿಂಗ್ಸ್ ಗೆಲುವಿಗೆ 29 ರನ್ ಬೇಕಿತ್ತು, ಆದರೆ ಪಂಜಾಬ್ ಕಿಂಗ್ಸ್ 27 ರನ್ ಗಳಿಸುವ ಮೂಲಕ 2 ರನ್ಗಳಿಂದ ಸೋಲೊಪ್ಪಿಕೊಂಡಿತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications