ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಐಪಿಎಲ್ ಸೇರಿದಂತೆ ಇತರ ಕ್ರಿಕೆಟ್ ಪಂದ್ಯಗಳು ಬ್ಯಾನ್ ಸಾಧ್ಯತೆ
Chinnaswamy Stadium: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗಲ್ಲುವ ಮೂಲಕ ಆರ್ಸಿಬಿ 17 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿ ಟ್ರೋಫಿಗೆ ಮುತ್ತಿಟ್ಟಿತು. ಆದರೆ, ಮಾರನೇ ದಿನ ಜೂನ್ 4ರಂದು ಇದೇ ಖುಷಿಯಲ್ಲಿ ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡಿದ್ದರು. ಈ ದುರಂತವೇ ಇದೀಗ ಚಿನ್ನಸ್ವಾಮಿಗೆ ದೊಡ್ಡ ಮುಳುವಾಗುವ ಪರಿಸ್ಥಿಗೆ ತಂದಿಟ್ಟಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿದ 17 ಸೀಸನ್ಗಳಲ್ಲೂ ಒಂದೇ ಒಂದು ಟ್ರೋಫಿ ಗೆದ್ದಿರಲಿಲ್ಲ. ಆದರೆ ಈ ಕೊರಗನ್ನು 18ನೇ ಸೀಸನ್ನಲ್ಲಿ ನೀಗಿಸಿತು. ಆದರೆ, ಕಾಲ್ತುಳಿತ ದುರಂತದಿಂದ ಆರ್ಸಿಬಿಗೆ ಕಪ್ಪುಚುಕ್ಕೆ ಆಗುವುದಲ್ಲದೆ, ಇದೀಗ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೂ ಮುಳುವಾಗುವ ಪರಿಸ್ಥಿತಿ ಎದುರಾಗಿದೆ.

ಹೌದು..ಎಂ.ಚಿನ್ನಸ್ವಾಮಿ ಬಳಿಕ ಸಂಭವಿಸಿದ ಕಾಲ್ತುಳಿತದಿಂದ ಇಲ್ಲಿ ಯಾವ ಪಂದ್ಯಗಳನ್ನು ಆಡಿಸುವುದು ಸೂಕ್ತವಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೀಹ ಈ ಕ್ರೀಡಾಂಗಣ ದೊಡ್ಡ ಕಾರ್ಯಕ್ರಮಗಳಿಗೆ ಸೂಕ್ತವಲ್ಲ ಹಾಗೂ ಅಸುರಕ್ಷಿತ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗದ ವರದಿಗಳು ತಿಳಿಸಿವೆ.
ಐಪಿಎಲ್ ಫೈನಲ್ ಪಂದ್ಯ ಅಹಮದಬಾದ್ನಲ್ಲಿರುವ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 3ರಂದು ನಡೆದಿದ್ದು, ಈ ವೇಳೆ ಆರ್ಸಿಬಿ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಟ್ರೋಫಿ ಗೆದ್ದುಕೊಂಡಿತ್ತು. ಈ ಹಿನ್ನೆಲೆ ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಬಳಿ ಕಾಲ್ತುಳಿತ ದುರಂತ ನಡೆದಿತ್ತು.
ಮಾಹಿತಿ ಪ್ರಕಾರ, ಆಯೋಗದ ವರದಿಯು ಸ್ಥಳದ ವಿನ್ಯಾಸ ಮತ್ತು ರಚನೆ ದೊಡ್ಡ ಕಾರ್ಯಕ್ರಮಗಳಿಗೆ ಸೂಕ್ತವಲ್ಲ ಮತ್ತು ಅಸುರಕ್ಷಿತ ಎಂದು ಹೇಳಿದೆ. ಇಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಾರ್ವಜನಿಕ ಸುರಕ್ಷತೆ, ನಗರದ ಟ್ರಾಫಿಕ್ ಮತ್ತು ತುರ್ತು ಸಿದ್ಧತೆಗೆ ಸ್ವೀಕಾರಾರ್ಹವಲ್ಲದ ಅಪಾಯಗಳನ್ನು ತಂದೊಡ್ಡುತ್ತದೆ ಎಂದು ಅದು ಎಚ್ಚರಿಕೆ ನೀಡಿದೆ.
ಕರ್ನಾಟಕ ಸರ್ಕಾರದೊಂದಿಗೆ ಹಂಚಿಕೊಳ್ಳಲ್ಪಟ್ಟ ವರದಿಯಲ್ಲಿ, ಜುಲೈ 4ರಂದು ನಡೆದ ಕಾಲ್ತುಳಿತದಲ್ಲಿ ಆರ್ಸಿಬಿ, ಫ್ರಾಂಚೈಸಿಯ ಈವೆಂಟ್ ಪಾಲುದಾರರಾದ ಡಿಎನ್ಎ ಎಂಟರ್ಟೈನ್ಮೆಂಟ್ ಮತ್ತು ಕೆಎಸ್ಸಿಎ ಅವರ ಪಾತ್ರವಿದೆ ಎಂದು ಆರೋಪ ಮಾಡಲಾಗಿದೆ. ಆರ್ಸಿಬಿ 18 ವರ್ಷಗಳ ಬಳಿಕ ಐಪಿಎಲ್ನಲ್ಲಿ ಟ್ರೋಫಿ ಗೆದ್ದ ಮರುದಿನವೇ ಈ ದುರಂತ ಸಂಭವಿಸಿತ್ತು.
ವರದಿಯು ವ್ಯವಸ್ಥಿತ ಮಿತಿಗಳನ್ನು ಉಲ್ಲೇಖಿಸಿದೆ ಮತ್ತು ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನು ಅವುಗಳಿಗೆ ಉತ್ತಮವಾಗಿ ಸೂಕ್ತವಾದ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂದು ಶಿಫಾರಸು ಮಾಡಿದೆ. ಮುಂದಿನ ದಿನಗಳಲ್ಲಿ ಯಾವುದೇ ಸ್ಥಳವು ಅಂತಾರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸಬೇಕೆಂದು ESPNCricinfo ಉಲ್ಲೇಖಿಸಿದ ವರದಿಯಲ್ಲಿ ತಿಳಿಸಲಾಗಿದೆ.
ಇಲ್ಲಿ ಪಂದ್ಯಗಳು ನಡೆಯೋದೇ ಡೌಟ್: ಸೆಪ್ಟೆಂಬರ್ 30ರಿಂದ ನವೆಂಬರ್ 2ರ ವರೆಗೆ ನಡೆಯಲಿರುವ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ನ ಉದ್ಘಾಟನಾ ಪಂದ್ಯ ಮತ್ತು ಸೆಮಿಫೈನಲ್ ಪಂದ್ಯವನ್ನು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಈ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುವುದು ಅನುಮಾನ ಆಗಿದೆ. ಜೊತೆಗೆ ಕೆಎಸ್ಸಿಎ ತನ್ನ ರಾಜ್ಯ ಟಿ-20 ಲೀಗ್, ಮಹಾರಾಜ ಟ್ರೋಫಿಯನ್ನು ಆಗಸ್ಟ್ 11ರಿಂದ ಇದೇ ಮೈದಾನದಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದು, ಇದಕ್ಕೆ ಪ್ರೇಕ್ಷಕರಿಗೆ ಪ್ರವೇಶ ಇರುವುದಿಲ್ಲ.
1974ರಲ್ಲಿ ನಿರ್ಮಾಣ ಮಾಡಲಾದ ಚಿನ್ನಸ್ವಾಮಿ ಕ್ರೀಡಾಂಗಣವು, ಸಾರ್ವಜನಿಕ ರಸ್ತೆಗಳಿಂದ ಬೇರ್ಪಟ್ಟ ಉದ್ದೇಶಿತ ಸರತಿ ಸಾಲು ಮತ್ತು ಸಂಚಾರ ಪ್ರದೇಶಗಳು, ಸಾಮೂಹಿಕ ಪ್ರವೇಶ ಮತ್ತು ನಿರ್ಗಮನವನ್ನು ನಿರ್ವಹಿಸಲು ಸಾಕಷ್ಟು ಪ್ರವೇಶ ಮತ್ತು ನಿರ್ಗಮನ ದ್ವಾರಗಳು, ಸಾರ್ವಜನಿಕ ಸಾರಿಗೆ ಮತ್ತು ಹತ್ತಿರದ ಪ್ರವಾಸಿ ಕೇಂದ್ರಗಳಿಗೆ ಸಮಗ್ರ ಪ್ರವೇಶ, ಜಾಗತಿಕ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ಸಮಗ್ರ ತುರ್ತು ಸ್ಥಳಾಂತರಿಸುವ ಯೋಜನೆಗಳು ಮತ್ತು ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳುವವರಿಗೆ ಅವಕಾಶ ಕಲ್ಪಿಸಲು ಸಾಕಷ್ಟು ಪಾರ್ಕಿಂಗ್ ಮತ್ತು ಡ್ರಾಪ್-ಆಫ್ ಸೌಲಭ್ಯಗಳುನಂತಹ ವ್ಯವಸ್ಥೆಗಳನ್ನು ಹೊಂದಿಲ್ಲ ಎಂದು ತಿಳಿಸಿದೆ.
ಇದನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಆರಂಭ ಆಗುವ ಯಾವುದೇ ಕ್ರಿಕೆಟ್ ಪಂದ್ಯಗಳು ಇಲ್ಲಿ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಅಲ್ಲದೆ, ಒಂದು ವೇಳೆ ಹೀಗಾದ್ರೆ, ಮುಂದಿನ ಆವೃತ್ತಿಯಿಂದ ಆರ್ಸಿಬಿಗೆ ಬೇರೆ ಕಡೆ ತವರು ಮೈದಾನದ ವ್ಯವಸ್ಥೆ ಮಾಡಲಾಗುತ್ತದೆ. ಮತ್ತೊಂದೆಡೆ ಎಂ.ಚಿನ್ನಸ್ವಾಮಿ ಮೈದಾನ ತುಂಬಾ ನಷ್ಟ ಎದುರಿಸಲಿದೆ ಎಂದು ಹೇಳಲಾಗುತ್ತಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications