WPL RCB: ಕ್ರಿಕೆಟ್ ಆಟಗಾರ್ತಿಯರ ಪರ್ಫಾಮೆನ್ಸ್ಗೆ ತಿರುಪತಿ ಬಾಲಾಜಿ, ಯೇಸು ಕ್ರಿಸ್ತನನ್ನು ಎಳೆದು ತಂದರೆ ಹೇಗೆ: ಪ್ರಕಾಶ್ ರಾಜ್
WPL RCB 2026: ಡಬ್ಲ್ಯೂಪಿಎಲ್ 2026 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟ್ರೋಫಿಗೆ ಮುತ್ತಿಟ್ಟಿತು. ಈ ಹಿನ್ನೆಲೆ ಆರ್ಸಿಬಿ ತಂಡ ಹಾಗೂ ನಾಯಕಿ ಸ್ಮೃತಿ ಮಂಧಾನಗೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬಂದವು. ಇದರ ನಡುವೆಯೇ ಇದೀಗ ಈ ಜಯಕ್ಕೆ ಧಾರ್ಮಿಕ ಅರ್ಥ ನೀಡಿರುವ ಪೋಸ್ಟ್ವೊಂದು ವಿವಾದ ಸೃಷ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್ ಅವರು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) 2026ರ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿ ಎರಡನೇ ಬಾರಿ ಚಾಂಪಿಯನ್ ಆಗಿದೆ. ಈ ಐತಿಹಾಸಿಕ ಗೆಲುವಿನ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಆರ್ಸಿಬಿ ತಂಡ ಹಾಗೂ ನಾಯಕಿ ಸ್ಮೃತಿ ಮಂಧನಾ ಅವರ ನಾಯಕತ್ವವನ್ನು ಶ್ಲಾಘಿಸುವ ಸಂದೇಶಗಳು ವ್ಯಾಪಕವಾಗಿ ಹರಿದಾಡಿದವು.

ವಿವಾದ ಸೃಷ್ಟಿಸಿದ ಪೋಸ್ಟ್: ಟ್ವಿಟರ್ ಬಳಕೆದಾರರೊಬ್ಬರು ಆರ್ಸಿಬಿ ಜಯಕ್ಕೆ ಧಾರ್ಮಿಕ ಅರ್ಥ ನೀಡಿರುವ ಪೋಸ್ಟ್ ಪ್ರಕಟಿಸಿದ್ದು ವಿವಾದಕ್ಕೆ ಕಾರಣವಾಯಿತು. ಆ ಪೋಸ್ಟ್ನಲ್ಲಿ "ಸ್ಮೃತಿ ಮಂಧನಾ ಅವರ ಗೆಲುವಿಗೆ ತಿರುಪತಿ ಬಾಲಾಜಿಯ ಆಶೀರ್ವಾದ ಕಾರಣ. ಜೆಮಿಮಾ ರೊಡ್ರಿಗಸ್ಗೆ ಯೇಸು ಸಹಾಯ ಮಾಡಲಿಲ್ಲ," ಎಂದು ಉಲ್ಲೇಖಿಸಲಾಗಿತ್ತು. ಈ ಪೋಸ್ಟ್ ಅನ್ನು ರಿಪೋಸ್ಟ್ ಮಾಡಿ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Jeasus didn't Help Jemimah Rodrigues
— The Jaipur Dialogues (@JaipurDialogues) February 5, 2026
But Tirupati Balaji gave his Blessings to Smriti Mandana!
Congratulations #RCB for winning #WPL2026 pic.twitter.com/YrkaoJ15aW
ಪ್ರಕಾಶ್ ರಾಜ್ ಆಕ್ರೋಶ: ಈ ಪೋಸ್ಟ್ ಅನ್ನು ರಿಪೋಸ್ಟ್ ಮಾಡಿದ ನಟ ಹಾಗೂ ನಿರ್ದೇಶಕ ಪ್ರಕಾಶ್ ರಾಜ್, ಇದನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರಕಾಶ್ ರಾಜ್ ತಮ್ಮ ಪ್ರತಿಕ್ರಿಯೆಯಲ್ಲಿ, ಇಂತಹ ಪೋಸ್ಟ್ಗಳನ್ನು ಮಾಡುವುದು ಅಸಹ್ಯಕರವಾಗಿದೆ ಎಂದು ಹೇಳಿ, "ಕೊಳೆತ ಮನಸ್ಸು ಮಾತ್ರ ಹೀಗೆ ಯೋಚಿಸಬಲ್ಲದು. ನಾವು ಈ ಮಟ್ಟಕ್ಕೆ ಇಳಿದಿದ್ದೇವೆಯೇ?," ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡನೇ ಬಾರಿ ಟ್ರೋಫಿಗೆ ಮುತ್ತಿಟ್ಟ ಆರ್ಸಿಬಿ: ವಡೋದರದ ಸ್ಟೇಡಿಯಂನಲ್ಲಿ ನಡೆದ ಫೈನಲ್ನಲ್ಲಿ ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ಬ್ಯಾಟಿಂಗ್ ಪ್ರದರ್ಶನ ಮಾಡಿ ನಿಗದಿತ 20 ಓವರ್ಗಳಲ್ಲಿ 203 ರನ್ಗಳನ್ನು ಕಲೆಹಾಕಿತು. ಬಳಿಕ ಬ್ಯಾಟ್ ಬೀಸಿದ ಆರ್ಸಿಬಿ 19.4 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಎರಡನೇ ಬಾರಿ ಟ್ರೋಫಿಗೆ ಮುತ್ತಿಟ್ಟಿತು. ಟ್ರೋಫಿ ಗೆಲ್ಲುತ್ತಿದ್ದಂತೆ ಆರ್ಸಿಬಿ ತಂಡ ಹಾಗೂ ಸ್ಮೃತಿ ಮಂಧಾನಗೆ ಅಭಿನಂದನೆಗಳ ಸುರಿಮಳೆಯೇ ಹರಿದುಬರುತ್ತಿದೆ.
Only a Disgusting …Rotten mind can think like this.. is this where we have come to #justasking https://t.co/Zl5UxVVbvU
— Prakash Raj (@prakashraaj) February 7, 2026
ಆರ್ಸಿಬಿ ಪರ ಆರಂಭಿಕರಾಗಿ ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧನಾ ಅವರು 41 ಎಸೆತಗಳಲ್ಲಿ 87 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದು, ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮತ್ತೊಂದೆಡೆ, ಟೂರ್ನಿಯಲ್ಲಿ ನಿರಂತರ ಉತ್ತಮ ಪ್ರದರ್ಶನ ನೀಡಿದ ಗುಜರಾತ್ ಜೈಂಟ್ಸ್ ತಂಡದ ಸೋಫಿ ಡಿವೈನ್ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
ಈ ಸಲಾ ಕೂಡ ಕಪ್ ನಮ್ದು ಎಂದ ಮಂಧಾನ: ವಡೋದರದ ಕೋತಾಂಬಿ ಸ್ಟೇಡಿಯಂನಲ್ಲಿ ನಡೆದ ಡಬ್ಲ್ಯೂಪಿಎಲ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಆದ ನಂತರ ಮಂಧನಾ ಟ್ರೋಫಿಯೊಂದಿಗೆ ತೆಗೆದ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ "ಈ ಸಲಾ ಕೂಡ ಕಪ್ ನಮ್ದು" ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ಗೆ ನಟಿ ಅನುಷ್ಕಾ ಶರ್ಮಾ ಲೈಕ್ ನೀಡಿ, "ಕ್ವೀನ್" ಎಂಬ ಕಾಮೆಂಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನೂ ಆರ್ಸಿಬಿಯ ಭರ್ಜರಿ ಜಯದ ಸಂಭ್ರಮದ ನಡುವೆಯೇ ಉದ್ಭವಿಸಿದ ಈ ವಿವಾದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
-
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026 RCB Vs SRH: ಎಸ್ಆರ್ಎಚ್ನಿಂದ 13,00,00,000 ರೂಪಾಯಿ ಮೌಲ್ಯದ ಸ್ಟಾರ್ ಆಟಗಾರ ಔಟ್ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ









Click it and Unblock the Notifications