RCB : ಇಷ್ಟವಿಲ್ಲದಿದ್ದರೂ ಹೆದರಿಸಿ ಆರ್ಸಿಬಿ ತಂಡಕ್ಕಾಗಿ ಆಡಿಸಿದರು: ಮಾಜಿ ಆಟಗಾರನ ಸ್ಫೋಟಕ ಹೇಳಿಕೆ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ತಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಾಗಿ ಆಡಲು ಸಿದ್ಧವಾಗಿರಲಿಲ್ಲ. ಆದರೆ ಬೆದರಿಕೆ ಹಾಕುವ ಮೂಲಕ ಆರ್ಸಿಬಿ ತಂಡಕ್ಕಾಗಿ ಆಡುವಂತೆ ಮಾಡಲಾಯಿತು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಭಾರತ ತಂಡದ ಮಾಜಿ ವೇಗದ ಬೌಲರ್ ಪ್ರವೀಣ್ ಕುಮಾರ್ ಹಳೆಯ ಘಟನೆಯನ್ನು ಬಹಿರಂಗಪಡಿದ್ದಾರೆ. ಐಪಿಎಲ್ ಮಾಜಿ ನಿರ್ದೇಶಕ ಲಲಿತ್ ಮೋದಿ ವಿರುದ್ಧ ಅವರು ಬೆದರಿಕೆ ಆರೋಪ ಮಾಡಿದ್ದಾರೆ. ಲಲ್ಲಾಂಟಾಪ್ ಜೊತೆಗಿನ ಮಾತುಕತೆ ಸಂದರ್ಭದಲ್ಲಿ ಪ್ರವೀಣ್ ಕುಮಾರ್ ಹಲವು ಆಸಕ್ತಿಕರ ಮಾಹಿತಿ ತಿಳಿಸಿದ್ದಾರೆ.

ಐಪಿಎಲ್ ಮೊದಲ ಆವೃತ್ತಿಯಲ್ಲಿ ತಾನು ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕಾಗಿ ಆಡಲು ಬಯಸಿದ್ದೆ. ಅದು ತನ್ನ ಸ್ವಂತ ಸ್ಥಳ ಮೀರತ್ ನಗರಕ್ಕೆ ಸಮೀಪವಿದ್ದ ಕಾರಣ ಆ ನಿರ್ಧಾರ ಮಾಡಿದ್ದೆ ಎಂದಿದ್ದಾರೆ. ಆದರೆ ಐಪಿಎಲ್ ಹರಾಜಿನಲ್ಲಿ ಆರ್ಸಿಬಿ ತಂಡ ನನ್ನನ್ನು ಖರೀದಿ ಮಾಡಿತ್ತು, ಈ ಬಗ್ಗೆ ಮಾತನಾಡಲು ಲಲಿತ್ ಮೋದಿಯವರನ್ನು ಸಂಪರ್ಕಿಸಿದಾಗ ತನ್ನ ವೃತ್ರಿಜೀವನವನ್ನೆ ಕೊನೆಗಾಣಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ.
"ನಾನು ಆರ್ ಸಿಬಿ ತಂಡಕ್ಕಾಗಿ ಆಡಲು ಬಯಸಿರಲಿಲ್ಲ, ಬೆಂಗಳೂರು ನಾನಿರುವ ಸ್ಥಳದಿಂದ ದೂರ ಇತ್ತು, ನನಗೆ ಇಂಗ್ಲಿಷ್ ಕೂಡ ಬರುತ್ತಿರಲಿಲ್ಲ, ಅಲ್ಲಿನ ಆಹಾರ ನನಗೆ ಇಷ್ಟವಾಗಲಿಲ್ಲ. ದೆಹಲಿ ಮೀರತ್ ನಗರಕ್ಕೆ ಹತ್ತಿರದಲ್ಲಿತ್ತು. ಆದರೂ ಪೇಪರ್ ಗೆ ಸಹಿ ಹಾಕಿದ್ದೆ ಅದು ಕಾಂಟ್ರಾಕ್ಟ್ ಎಂದು ನನಗೆ ಗೊತ್ತಿರಲಿಲ್ಲ. ಬೆಂಗಳೂರು ಪರ ಆಡಬೇಕೆ ಹೊರತು ದೆಹಲಿ ಪರ ಅಲ್ಲ ಎಂದು ಲಲಿತ್ ಮೋದಿ ಕರೆ ಮಾಡಿ ವೃತ್ತಿ ಜೀವನವನ್ನೇ ಕೊನೆಗಾಣಿಸುವ ಬೆದರಿಕೆ ಹಾಕಿದ್ದರು ಎಂದಿದ್ದಾರೆ.
ಪಾಕ್ ಆಟಗಾರರ ಮೇಲೆ ಟ್ಯಾಂಪರಿಂಗ್ ಆರೋಪ
ಬಾಲ್ ಟ್ಯಾಂಪರಿಂಗ್ ಬಗ್ಗೆ ಕೂಡ ಮಾತನಾಡಿರುವ ಪ್ರವೀಣ್ ಕುಮಾರ್ ತಮ್ಮ ಕಾಲದಲ್ಲಿ ಬಾಲ್ ಟ್ಯಾಂಪರಿಂಗ್ ಸಾಮಾನ್ಯವಾಗಿತ್ತು, ಆದರೆ ಪಾಕಿಸ್ತಾನದ ಆಟಗಾರರು ರಿವರ್ಸ್ ಸ್ವಿಂಗ್ ಹೆಚ್ಚಿಸಲು ಇದನ್ನು ಸ್ವಲ್ಪ ಹೆಚ್ಚಾಗೆ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
1990ರ ಬಳಿಕ ರಿವರ್ಸ್ ಸ್ವಿಂಗ್ ಬೌಲರ್ಗಳಿಗೆ ಪ್ರಮುಖ ಅಸ್ತ್ರವಾಗಿತ್ತು, ಪಾಕಿಸ್ತಾನ ತಂಡದ ವೇಗಿಗಳು ಇದನ್ನು ಚನ್ನಾಗಿ ಕಲಿತಿದ್ದರು ಎನ್ನಲಾಗುತ್ತದೆ. ಚೆಂಡನ್ನು ಟ್ಯಾಂಪರಿಂಗ್ ಮಾಡಿದ ನಂತರವೂ ಚೆಂಡನ್ನು ಸ್ವಿಂಗ್ ಮಾಡಲು ಕೌಶಲ್ಯ ಬೇಕಾಗುತ್ತದೆ ಎಂದು ಪ್ರವೀಣ್ ಕುಮಾರ್ ಹೇಳಿದ್ದಾರೆ. ಪಾಕಿಸ್ತಾನದ ಆಟಗಾರರು ಇದನ್ನು ಮಾಡುತ್ತಿದ್ದರು ಆದರೆ ಈಗ ಎಲ್ಲೆಡೆ ಕ್ಯಾಮೆರಾ ಇರುವ ಕಾರಣ ಅದನ್ನು ಸುಲಭವಾಗಿ ಮಾಡಲು ಆಗುವುದಿಲ್ಲ ಎಂದರು.
-
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
PBKS Vs GT: ಪಂಜಾಬ್ ಕಿಂಗ್ಸ್ ಪರ ಕೂಪರ್ ಕಾನೊಲಿ ಹರಿಸಿದ ರನ್ ಮಳೆಗೆ ಕೊಚ್ಚಿಹೋದ ಗುಜರಾತ್ ಟೈಟನ್ಸ್ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications